Karnataka state budget cm siddaramaiah

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ