Karnataka state budget cm siddaramaiah

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500 ರೂ.ಗಳಿಗೆ ಅನುಗುಣವಾಗಿ, ಸಂಬಳ ಅಥವಾ ಮಜೂರಿ ಪಡೆಯುವ ವ್ಯಕ್ತಿಗಳು ಫೆಬ್ರವರಿ ತಿಂಗಳಲ್ಲಿ ಪಾವತಿಸುತ್ತಿರುವ ವೃತ್ತಿ ತೆರಿಗೆಯನ್ನು ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಹೆಚ್ಚಿಸಲು ಸೂಕ್ತ ತಿದ್ದುಪಡಿ ಮಾಡುತ್ತಿರುವುದು ನಿರಾಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸುತ್ತಿರುವುದು ಕಾನೂನು ವಿದ್ಯಾರ್ಥಿಗಳಿಗೆ ಅಭ್ಯಾವೇಶನ ಮಾಡುವರಿಗೆ ಸ್ಪೂರ್ತಿದಾಯಕ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಬಂದೋಬಸ್ತ ಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಆಹಾರ ಭತ್ಯೆಯ ದರವನ್ನು 200 ರೂ. ರಿಂದ 500 ರೂ.ವರೆಗೆ ಹೆಚ್ಚಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ.ಅಲ್ಲದೇ
ಹೂಗಾರ ಸಮಾಜ ನಿಗಮದ ಬಗ್ಗೆ ಯಾವುದೇ ಕಾಳಜಿಯನ್ನು ಮತ್ತು ಅಭಿವೃದ್ಧಿಯನ್ನು ಈ ಬಜೆಟ್ ನಲ್ಲಿ ನೀಡಿರುವುದಿಲ್ಲ.ತೆರಿಗೆ ಸಲಹೆಗಾರರ ಪ್ರೋತ್ಸಾಹಕ್ಕೆ ಯಾವುದೇ ಅನುದಾನದ ಬಗ್ಗೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವನೆ ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ದೇವಾಲಯಗಳ ನಿಧಿಯಿಂದ ಭರಿಸಲಾಗುತ್ತಿರುವ ದತ್ತಿ ಇಲಾಖೆಯ ಸರಕಾರಿ ನೌಕರರ ಭತ್ಯೆಗಳನ್ನು ಇವಾಗ ಸರ್ಕಾರವೇ ಪಾವತಿಸಲು ಮುಂದಾಗುತ್ತಿರುವುದು ಒಳ್ಳೆಯ ಅಭಿವೃದ್ಧಿ ಸಂಗತಿ ಎಂದು ತಿಳಿಸಿದ್ದಾರೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್