Competitive exams for kids are not necessary-Belagalla

ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಅಗತ್ಯ-ಬೆಳಗಲ್ಲ

ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಅಗತ್ಯ-ಬೆಳಗಲ್ಲ

ಮುದ್ದೇಬಿಹಾಳ : ಶಾಲಾ ಪಠ್ಯಕ್ರಮದೊಂದಿಗೆ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಅಗತ್ಯವಾಗಿವೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ಲ ಅವರು ಹೇಳಿದರು.

ಪಟ್ಟಣದ ಆಕ್ಸಫರ್ಡ್ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ 9ನೇ ವಾರ್ಷಿಕೋತ್ಸವ ಹಾಗೂ ಚಿಣ್ಣರ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಂಕ ಗಳಿಕೆಯಷ್ಟೇ ಮಾನದಂಡವಾಗದೇ ಇನ್ನೀತರ ಆಟೋಟಗಳಲ್ಲೂ ಮಕ್ಕಳನ್ನು ತೊಡಗಿಸುವ ಕಾರ್ಯ ಆಗಬೇಕು ಎಂದರು. ಶಾಸಕರ ಆಪ್ತ ಸಹಾಯಕ ನಾಗರಾಜ ತಂಗಡಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅಗತ್ಯವಾಗಿದ್ದು ಶಿಕ್ಷಕರೊಂದಿಗೆ ಪಾಲಕರು ಈ ನಿಟ್ಟಿನಲ್ಲಿ ಮಕ್ಕಳ ಕಲಿಕೆಯ ಮೇಲೆ ನಿಗಾ ಇರಿಸಬೇಕು ಎಂದರು.

ನಿವೃತ್ತ ಶಿಕ್ಷಕ ಕೆ.ಪಿ.ಹಿರೇಮಠ ಸಾನಿಧ್ಯ ವಹಿಸಿದ್ದರು. ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸಿ. ಎಲ್. ಬಿರಾದಾರ ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷ ಬಾಪುಗೌಡ ಎಂ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ. ಎ. ಬಾಳಿಕಾಯಿ, ಗುಂಡು ಚವ್ಹಾಣ, ಬಿಜೆಪಿ ಮುಖಂಡ ಅವ್ವಣ್ಣ ಗ್ವಾತಗಿ, ಸಂಸ್ಥೆಯ ಕಾರ್ಯದರ್ಶಿ ಆರ್. ಎಂ. ಬಿರಾದಾರ ಉಪಸ್ಥಿತರಿದ್ದರು.

ವಿವಿಧ ವಸತಿ ಶಾಲೆಗೆ ಆಯ್ಕೆ ಆಗಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.

Latest News

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ (ಖಜಾಂಚಿ), ಮಲ್ಲಿಕಾರ್ಜುನ ಬಂಡರಗಲ್ (ಸಹ ಕಾರ್ಯದರ್ಶಿ) ಸ್ಥಾನಕ್ಕೆ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಪಾಟೀಲ, ಬಸವರಾಜ ಕಮ್ಮಾರ, ಚಂದ್ರು ಗಂಗೂರ,

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ, ಏಷ್ಯಾ ಖಂಡದಲ್ಲಿಯೇ ಇಂದು ಈ ಯೋಜನೆ ಮಹತ್ವದಿಂದ ಹುನಗುಂದ ಕ್ಷೇತ್ರ ಗುರುತಿಸುವಂತಾಗಲೂ ಕಾಶಪ್ಪನವರ ದೂರದ ದೃಷ್ಟಿಯಿಂದ ಸಾಧ್ಯವಾಗಿದೆ. ತಂದೆ ಮಾಜಿ