There are 65 parks in Muddebihal: Minister Rahin Khan

ಮುದ್ದೇಬಿಹಾಳದಲ್ಲಿವೆ 65 ಉದ್ಯಾನವನಗಳು: ಸಚಿವ ರಹೀಂಖಾನ್

ಮುದ್ದೇಬಿಹಾಳದಲ್ಲಿವೆ 65 ಉದ್ಯಾನವನಗಳು: ಸಚಿವ ರಹೀಂಖಾನ್

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 65 ಉದ್ಯಾನವನಗಳನ್ನು ಹೊಂದಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಕ್ಷೇತ್ರದ ಶಾಸಕ ಸಿ. ಎಸ್. ನಾಡಗೌಡ ಅಪ್ಪಾಜಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, 65 ಉದ್ಯಾನವನಗಳಲ್ಲಿ ಮುದ್ದೇಬಿಹಾಳ ಪಟ್ಟಣದ ವಾರ್ಡ ಸಂಖ್ಯೆ 1 ರಲ್ಲಿ ಬರುವ ವಿದ್ಯಾನಗರದಲ್ಲಿರುವ ಪೊಲೀಸ್ ಠಾಣೆ ಹಿಂಭಾಗದಲ್ಲಿ ಹಾಗೂ ವಾರ್ಡ ಸಂಖ್ಯೆ 9ರಲ್ಲಿ ಬರುವ ಬಸವ ನಗರದ ಉದ್ಯಾನವನಗಳನ್ನು ಕೃಷ್ಣಾ ಭಾಗ್ಯ ಜಲನಿಗಮದಿಂದ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಉತ್ತರಿಸಿದ್ದಾರೆ. ಬಾಕಿ ಉಳಿದಿರುವ ಉದ್ಯಾನವನಗಳ ಅಭಿವೃದ್ಧಿಗೊಳಿಸುವುದು, ಸಾರ್ವಜನಿಕರ ಅನುಕೂಲಕ್ಕೆ ಬಳಕೆಯಾಗುವಂತೆ ಪ್ರಸಕ್ತ ಸಾಲಿನಲ್ಲಿ ಎಷ್ಟು ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಅನುದಾನ ಮಂಜೂರಿ ಬಗ್ಗೆ ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಮುಂಬರುವ ಅನುದಾನ ಹಾಗೂ ಪುರಸಭೆಯ ಸ್ವಂತ ನಿಧಿಯಡಿ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು ಎಂದು ಉತ್ತರಿಸಿದ್ದಾರೆ. ಆದರೆ ಸದ್ಯಕ್ಕೆ ಅಭಿವೃದ್ದಿಪಡಿಸುತ್ತಿರುವ ಉದ್ಯಾನವನಗಳನ್ನು ಎಷ್ಟು ಮೊತ್ತದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ ಎಂಬುದನ್ನು ಸಚಿವರು ತಮ್ಮ ಉತ್ತರದಲ್ಲಿ ನೀಡಿಲ್ಲ.

ಎಸ್ಸಿ.ಎಸ್ಟಿ ವಾರ್ಡ ಅಭಿವೃದ್ಧಿಗೆ 4.80 ಲಕ್ಷ ರೂ. ಅನುದಾನ

ಮತಕ್ಷೇತ್ರದ ತಾಳಿಕೋಟಿ ಪುರಸಭೆಗೆ ಸೇರಿದ ವಿಶೇಷ ಘಟಕ ಯೋಜನೆಯಡಿ ಎಸ್.ಸಿ.ಎಸ್.ಪಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಮೂಲಭೂತ ಸೌರ‍್ಯ ಒದಗಿಸಲು ಸನ್ 2024-25ನೇ ಸಾಲಿನಲ್ಲಿ ನಗರಾಭಿವೃದ್ಧಿ ಇಲಾಖೆಯು ತಾಳಿಕೋಟಿ ಪುರಸಭೆಗೆ 4.80 ಲಕ್ಷ ರೂ.ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹದೇವಪ್ಪ ಶಾಸಕ ನಾಡಗೌಡರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಐದು ಪ್ರಾಥಮಿಕ ಪಶು ಕೇಂದ್ರಗಳು ಮೇಲ್ದರ್ಜೆಗೆ: ಮುದ್ದೇಬಿಹಾಳ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳಾದ ಅ.ಸೋಮನಾಳ, ಇಂಗಳಗೇರಿ, ಕೊಣ್ಣೂರು, ಹಿರೇಮುರಾಳ, ದೇವರ ಹುಲಗಬಾಳದ ಕೇಂದ್ರಗಳನ್ನು ಪಶು ಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಗಳು ಸ್ವೀಕೃತಗೊಂಡಿದ್ದು ಪ್ರಸ್ತಾವನೆಗಳು ಪರಿಶೀಲನೆಯಲ್ಲಿರುತ್ತವೆ ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ ಶಾಸಕ ಅಪ್ಪಾಜಿ ನಾಡಗೌಡರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ