ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ಮುದ್ದೇಬಿಹಾಳ : ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಅವರು ದೇಶವೇ ಹೊರಳಿ ನೋಡುವಂತ ಸಾಧನೆ ಮಾಡಲು ಪ್ರೇರೆಪಿಸುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ಹೇಳಿದರು.

ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯುಂದ ಶನಿವಾರ ಲಿಂ. ಅಭಿನವ ಕುಮಾರ ಚನ್ನಬಸವ ಶ್ರೀಗಳ ನುಡಿನಮನ ಮತ್ತು ರಾಜ್ಯ ಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಯುವಕರು ಗುಟ್ಖಾ , ಮಟ್ಖಾ ಚಟಕ್ಕೆ ಬಿದ್ದಿದ್ದಾರೆ. ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ. ಆಚಾರ, ವಿಚಾರ ಸಂಸ್ಕೃತಿಗಳನ್ನು ಕಲಿಸಲು ಪಾಲಕರು ಮುಂದಾಗಬೇಕು ಎಂದರು.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ, ಸಾನಿಧ್ಯ ವಹಿಸಿದ್ದ ಯರಝರಿಯ ಯಲ್ಲಾಲಿಂಗ ಮಠದ ಮಲ್ಲಾರಲಿಂಗ ಸ್ವಾಮೀಜಿ, ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಿದ್ದನಗೌಡ ಮಂಗಳೂರ, ಪತ್ರಕರ್ತ ಚೇತನ ಶಿವಶಿಂಪಿ, ಶಿವಾನಂದ ವಾಲಿ, ಪ್ರಶಾಂತ ಕಾಳೆ, ಎಸ್.ಎಚ್.ಲೊಟಗೇರಿ, ಚಂದ್ರಶೇಖರ ಶಿವಯೋಗಿಮಠ, ಹೇಮಾ ಬಿರಾದಾರ, ಶರಣು ಟಕ್ಕಳಕಿ, ಅನಿಲ ತೇಲಂಗಿ ಇವರುಗಳಿಗೆ ರಾಜ್ಯಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಜೀರಲಭಾವಿಯ ನಿತ್ಯಾನಂದ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮನಗೂಳಿಯ ಪಟ್ಟಣ ಪಂಚಾಯತ ಅಧ್ಯಕ್ಷ ಎಂ.ಡಿ.ಮೆತ್ರಿ, ತಾಪಂ ಮಾಜಿ ಅಧ್ಯಕ್ಷ ಮುತ್ತಣ್ಣ ಹುಗ್ಗಿ, ಗ್ರಾ.ಪಂ ಮಾಜಿ ಅಧ್ಯಕ್ಷ ಜಾವಿದ ಇನಾಮದಾರ, ಮುಖಂಡರಾದ ನಿತ್ಯಾನಂದ ಹಿರೇಮಠ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಸೇರಿದಂತೆ ಇತರರು ಇದ್ದರು. ಅಶೋಕ ಗುಂಡಿನಮನಿ ನಿರೂಪಿಸಿದರು. ರೇಖಾವತಿ ಎಂ. ಎಸ್. ವಂದಿಸಿದರು.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.