New BJP district president honors shop: Appeasement politics by Congress- Nadahalli

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿಗೆ ಸನ್ಮಾನ:ಕಾಂಗ್ರೆಸ್‌ನಿಂದ ತುಷ್ಟೀಕರಣದ ರಾಜಕಾರಣ- ನಡಹಳ್ಳಿ

ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಂಗಡಿಗೆ ಸನ್ಮಾನ:ಕಾಂಗ್ರೆಸ್‌ನಿಂದ ತುಷ್ಟೀಕರಣದ ರಾಜಕಾರಣ- ನಡಹಳ್ಳಿ

ಮುದ್ದೇಬಿಹಾಳ : ಮುಸ್ಲಿಂರ ತುಷ್ಟೀಕರಣದಲ್ಲಿ ಕಾಂಗ್ರೆಸ್ ಪಕ್ಷ ತೊಡಗಿದೆ. ಸಂವಿಧಾನದಲ್ಲಿ ಅವಕಾಶವೇ ಇಲ್ಲದ ಧರ್ಮದ ಆಧಾರದ ಮೇಲೆ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ಕೊಡುವುದಾಗಿ ಹೇಳುವ ಡಿಸಿಎಂ ಡಿ. ಕೆ. ಶಿವಕುಮಾರ ಮುಸ್ಲಿಂರಿಗೆ ಮೀಸಲಾತಿ ಕೊಡುವುದಕ್ಕಾಗಿ ಸಂವಿಧಾನವನ್ನೂ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡುತ್ತಾರೆ ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ ಹೇಳಿದರು.

ಪಟ್ಟಣದ ದಾಸೋಹ ಭವನದಲ್ಲಿರುವ ಬಿಜೆಪಿ ಮಂಡಲ ಕಚೇರಿಯಲ್ಲಿ ಬುಧವಾರ ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಓಟಬ್ಯಾಂಕ್ ಸಲುವಾಗಿ ಮುಸ್ಲಿಂರಿಗಾಗಿ 2000 ಕೋಟಿ ರೂ. ವಿಶೇಷ ಅನುದಾನವನ್ನು ಶಾದಿಭಾಗ್ಯ ಹೆಸರಿನಲ್ಲಿ ತೆಗೆದಿರಿಸಿದ್ದಾರೆ. ಎಲ್ಲ ಜಾತಿ, ಜನಾಂಗದವರಲ್ಲಿ ಬಡವರು,ಹಿಂದುಳಿದವರು ಇದ್ದಾರೆ. ಆದರೆ ಮುಸ್ಲಿಂರ ಓಲೈಕೆಯಲ್ಲಿ ಕಾಂಗ್ರೆಸ್ ತೊಡಗಿದೆ ಎಂದು ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ ನಡೆಸಿದರು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಗುರುಲಿಂಗಪ್ಪ ಅಂಗಡಿ ಅವರು ಆಯ್ಕೆಯಾಗಿರುವುದು ಜಿಲ್ಲೆಯ ಕಾರ್ಯಕರ್ತರಿಗೆ ಹರ್ಷವನ್ನುಂಟು ಮಾಡಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಹಿರಿಯ ನಾಯಕರಾದ ಬಿ. ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಕೈ ಬಲಪಡಿಸಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷದ ಗೊಂದಲಗಳನ್ನು ನಾಯಕರು ಪರಿಹರಿಸಿದ್ದಾರೆ. ಪಕ್ಷದಲ್ಲಿ ಈಗ ಯಾವುದೇ ಗೊಂದಲಗಳಿಲ್ಲ ಎಂದು ಹೇಳಿದರು.

ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ನಾಯಕರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ ಶೇ.4ರ ಮೀಸಲಿನ ಹೆಸರಿನಲ್ಲಿ ಮುಸ್ಲಿಂರ ಮೂಗಿಗೆ ತುಪ್ಪ ಒರೆಸುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ನಿಂತು ಹೋಗಿದ್ದು ಈ ಸರ್ಕಾರದಲ್ಲಿ ಯಾರೊಬ್ಬರೂ ನೆಮ್ಮದಿಯಿಂದ ಇಲ್ಲ. ಉತ್ತರ ಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಮುಸ್ಲಿಂರು ಬಿಜೆಪಿಯ ಹಿಂದೆ ಇದ್ದಾರೆ. ಕಾಂಗ್ರೆಸ್‌ನ ಕುತಂತ್ರದ ಬಗ್ಗೆ ಮುಸ್ಲಿಂರು ದೇಶದಲ್ಲಿ ಜಾಗೃತರಾಗುವ ಕಾಲ ಸನ್ನಿಹಿತವಾಗಿದೆ ಎಂದರು.

ಬಿಜೆಪಿ ಜಿಲ್ಲಾ ಮುಖಂಡ ಸುರೇಶಗೌಡ ಬಿರಾದಾರ ಮಾತನಾಡಿ, ಪಕ್ಷದ ವರಿಷ್ಠರು ಕೆಲವರಿಂದ ಪಕ್ಷದಲ್ಲಿ ಉಂಟಾಗಿದ್ದ ಭಿನ್ನಮತಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ. ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಗುರುಲಿಂಗಪ್ಪ ಅಂಗಡಿಯವರಂತಹ ಸೌಮ್ಯ ಸ್ವಭಾವದ ವ್ಯಕ್ತಿಯನ್ನು ಆಯ್ಕೆ ಮಾಡಿರುವ ನಡಹಳ್ಳಿಯವರಾದಿಯಾಗಿ ಪಕ್ಷದ ಎಲ್ಲ ವರಿಷ್ಠರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಪಕ್ಷದ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಮುಖಂಡರಾದ ಎಂ. ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೇಮರಡ್ಡಿ ಮೇಟಿ, ಎಂ.ಬಿ.ಅಂಗಡಿ, ಗಂಗಾಧರರಾವ ನಾಡಗೌಡರ, ಕೆಂಚಪ್ಪ ಬಿರಾದಾರ, ಮಲಕೇಂದ್ರಗೌಡ ಪಾಟೀಲ್, ಸುರೇಶಗೌಡ ಬಿರಾದಾರ ಮತ್ತಿತರರು ಮಾತನಾಡಿದರು. ಪಕ್ಷದ ಮುಖಂಡ ಬಿ. ಪಿ. ಕುಲಕರ್ಣಿ, ಸೋಮನಗೌಡ ಬಿರಾದಾರ, ಗೌರಮ್ಮ ಹುನಗುಂದ, ಮಂಜುನಾಥಗೌಡ ಪಾಟೀಲ, ಪರಶುರಾಮ ನಾಲತವಾಡ, ಸಿದ್ಧರಾಜ ಹೊಳಿ ಪುರಸಭೆ ಸದಸ್ಯರು,ಪಕ್ಷದ ಕಾರ್ಯಕರ್ತರು ಇದ್ದರು.

ಅಂಗಡಿ ಸ್ವಾಗತದ ನೆಪ, ಯತ್ನಾಳ ಉಚ್ಛಾಟನೆ ಹರ್ಷ : ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಹಿಂದೆ ಎ. ಎಸ್. ಪಾಟೀಲ್ ನಡಹಳ್ಳಿ ಅವರ ವಿರುದ್ಧ ಸ್ಪರ್ಧಿಸಿ ಪರಾಜಿತರಾಗಿದ್ದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದ ಕೇಂದ್ರ ಶಿಸ್ತು ಸಮೀತಿ ಬುಧವಾರ ಪಕ್ಷದಿಂದ ಉಚ್ಛಾಟಿಸಿದ ಸುದ್ದಿ ಬಹಿರಂಗಗೊಳ್ಳುತ್ತಲೇ ಮಾಜಿ ಶಾಸಕ ನಡಹಳ್ಳಿಯವರ ನಿವಾಸದಲ್ಲಿ ಸಂಭ್ರಮ ಮನೆ ಮಾಡಿತ್ತು. ನೂತನ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಅವರನ್ನು ಸ್ವಾಗತಿಸುವ ನೆಪದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಮಾಜಿ ಶಾಸಕ ನಡಹಳ್ಳಿಯವರ ಮನೆ ಮುಂದೆ ಪಟಾಕಿಯನ್ನೂ ಸಿಡಿಸಿ ನಡಹಳ್ಳಿಯವರ ಅಭಿಮಾನಿಗಳು, ಕೆಲವು ಕಾರ್ಯಕರ್ತರು ಸಂಭ್ರಮಿಸಿದರು. ಇದು ಯತ್ನಾಳರ ಉಚ್ಛಾಟನೆಗೆ ವ್ಯಕ್ತಪಡಿಸಿದ ಹರ್ಷವೋ, ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಅಂಗಡಿ ಅವರ ಆಗಮನಕ್ಕೆ ತೋರಿದ ಸ್ವಾಗತವೋ ಎಂಬುದು ಚರ್ಚೆಗೆ ನಾಂದಿ ಹಾಡಿತು. ನಡಹಳ್ಳಿಯವರಂತೂ ಸಂಭ್ರಮದಿಂದ ಅಂಗಡಿಯವರ ಸನ್ಮಾನ ಕಾರ್ಯಕ್ರಮದಲ್ಲಿ ಓಡಾಡಿದ್ದು ವಿಶೇಷವಾಗಿತ್ತು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ