Life threat from municipal staff's family: Allegation

ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಮುದ್ದೇಬಿಹಾಳ : ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಸಿಬ್ಬಂದಿಯೊಬ್ಬ ತನ್ನ ಕುಟುಂಬದವರು ಹಾಗೂ ತನ್ನ ಹಿಂಬಾಲಕರೊಂದಿಗೆ ನನಗೆ ಜೀವ ಬೆದರಿಕೆ ಒಡ್ಡಿದ್ದು ನನಗೆ ಹಾಗೂ ನನ್ನ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಪುರಸಭೆ ಸದಸ್ಯ ಶಿವು ಶಿವಪೂರ(ಹರಿಜನ) ಪೊಲೀಸರಿಗೆ ಮನವಿ ಮಾಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಕರೆದಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಕುಂದುಕೊರತೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಶಿವಪೂರ, ಕೋರ್ಟಿನ ಆದೇಶ ತಿರುಚಿ ಮೂಲಿಮನಿ ಎಂಬುವರು ನೌಕರಿ ಮಾಡುತ್ತಿದ್ದು ಅವರ ಮೇಲೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಪತ್ರ ಕೊಟ್ಟಿದ್ದಕ್ಕೆ ನನ್ನ ಮೇಲೆ ಹಗೆ ಸಾಧಿಸುತ್ತಿದ್ದಾರೆ ಎಂದು ದೂರಿದರು.
ದಲಿತ ಮುಖಂಡರಾದ ಹರೀಶ ನಾಟೀಕಾರ, ಪರಶುರಾಮ ನಾಲತವಾಡ, ಬಸವರಾಜ ಪೂಜಾರಿ, ದೇವರಾಜ ಹಂಗರಗಿ ಮತ್ತಿತರರು ಮಾತನಾಡಿ, ಕೋರ್ಟಿನ ಆದೇಶವನ್ನು ತಿರುಚಿ ಅನಧಿಕೃತವಾಗಿ ಪುರಸಭೆಯಲ್ಲಿ ಕೆಲಸ ಮಾಡುತ್ತಿರುವ ಮೂಲಿಮನಿ ಎಂಬ ನೌಕರನಿಂದ ಸದಸ್ಯ ಶಿವಪೂರಗೆ ಎರಡ್ಮೂರು ಬಾರಿ ಹಲ್ಲೆ ಪ್ರಯತ್ನ ನಡೆದಿದ್ದು ಜೀವ ಬೆದರಿಕೆ ಕೂಡಾ ಹಾಕಿದ್ದಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿ, ಎಸ್ಪಿ ಅವರಿಗೂ ಪತ್ರ ಕೊಟ್ಟಿದ್ದು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಇದಕ್ಕೆ ಸ್ಪಂದಿಸಿದ ಪಿಎಸ್‌ಐ ಸಂಜಯ ತಿಪರೆಡ್ಡಿ, ಈ ವಿಷಯವಾಗಿ ಮೇಲಧಿಕಾರಿಗಳಿಂದ ಪತ್ರ ಬಂದಿದ್ದು ಎದುರುದಾರರಿಂದಲೂ ಪತ್ರ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ದಲಿತ ಮುಖಂಡರು, ಪರಿಶಿಷ್ಟ ಜಾತಿ ಜನಾಂಗದವರ ಮೇಲೆ ಶೋಷಣೆ ನಡೆಯುತ್ತಿರುವಾಗ ಎದುರುದಾರರಿಂದ ದೂರು ದಾಖಲಿಸಿಕೊಂಡು ಸಮುದಾಯದ ರಕ್ಷಣೆಯನ್ನು ಕಡೆಗಣಿಸಲಾಗುತ್ತದೆ ಎಂದು ಆರೋಪಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಪಿಐ ಮಹ್ಮದ ಫಸೀವುದ್ದೀನ್ ಸಭೆಗೆ ಭರವಸೆ ನೀಡಿದರು.

ಇನ್ನುಳಿದಂತೆ ನೇತಾಜಿ ನಗರಕ್ಕೆ ಹೋಗುವ ರಸ್ತೆಯ ಮುಂದೆ ಓರ್ವ ಮಹಿಳೆಯಿಂದ ಮಾಂಸ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು ಯಾವ ಅಧಿಕಾರಿಗೂ ಆಕೆ ಹೆದರುವುದಿಲ್ಲ. ಅವಳಿಂದಲೇ ಇನ್ನುಳಿದವರು ಪುರಸಭೆಯ ಅನುಮತಿ ಇಲ್ಲದೇ ಎಲ್ಲೆಂದರಲ್ಲಿ ಮಾಂಸ ಮಾರಾಟದಲ್ಲಿ ತೊಡಗಿದ್ದಾರೆ. ಅನಧಿಕೃತವಾಗಿ ಮಾಂಸ ಮಾರಾಟ ಮಾಡುವವರನ್ನು ತೆರವುಗೊಳಿಸುವ ಕೆಲಸ ಪುರಸಭೆಯಿಂದ ಮಾಡಬೇಕು. ಕಸಾಯಿಖಾನೆಯನ್ನು ಸ್ಥಳಾಂತರಿಸಬೇಕು ಎಂದು ಮುಖಂಡ ಪರಶುರಾಮ ನಾಲತವಾಡ, ಭೀಮಣ್ಣ ದಾಸರ, ಶಿವಪುತ್ರ ಅಜಮನಿ ಒತ್ತಾಯಿಸಿದರು.

ಮುಖಂಡ ತಿಪ್ಪಣ್ಣ ದೊಡಮನಿ ಮಾತನಾಡಿ, ಈಚೇಗೆ ಕೆಲವು ಪ್ರಕರಣಗಳಲ್ಲಿ ದಲಿತ ಜನಾಂಗದವರ ಮೇಲೆ ಶೋಷಣೆ ನಡೆದಾಗ ಪೊಲೀಸರ ಸ್ಪಂದನೆ ತೃಪ್ತಿಕರವಾಗಿಲ್ಲ. ದಲಿತರೊಂದಿಗೆ ಪೊಲೀಸ್ ಇಲಾಖೆ ಅಂತರ ಕಾಯ್ದುಕೊಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಕೆಲವು ಹಳ್ಳಿಗಳ ಚಹಾದ ಅಂಗಡಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಿದೆ. ಅಸ್ಪೃಶ್ಯತೆ ಆಚರಣೆಯ ನಿಷೇಧದ ಕುರಿತು ನಾಮಫಲಕಗಳನ್ನು ಅಳವಡಿಸುವ ಕೆಲಸ ಮಾಡಬೇಕು. ಮದ್ಯಮಾರಾಟ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ದಲಿತ ಹುಡುಗ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಆ ಸಮುದಾಯದವರಿಂದ ಹುಡುಗನಿಗೆ ಬೆದರಿಕೆ ಹಾಕುವ ಕಾರ್ಯ ನಡೆದಿದ್ದು ನ್ಯಾಯಯುತವಾಗಿ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಬೇಕು. ನಾಲತವಾಡ ರಸ್ತೆಯಲ್ಲಿರುವ ದಲಿತ ಜನಾಂಗದವರ ಸ್ಮಶಾನ ಭೂಮಿ ಒತ್ತುವರಿಯಾಗಿದ್ದು ಅದನ್ನು ತೆರವುಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬೀಟ್ ವ್ಯವಸ್ಥೆಗೆ ಬರುವ ಪೊಲೀಸರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದವರ ಕಾಲೋನಿಗಳಲ್ಲಿ ಬರುವುದಿಲ್ಲ. ಇದನ್ನು ಸರಿಪಡಿಸಬೇಕು. ಕೃಷ್ಣಾ ನದಿಯಲ್ಲಿನ ಮಣ್ಣು ಸಾಗಿಸಲು ಅನುಮತಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳು, ಸಮಸ್ಯೆಗಳ ಕುರಿತು ಗಮನ ಸೆಳೆದರು. ಸಿಪಿಐ ಮಹ್ಮದ ಫಸೀವುದ್ದೀನ ಮಾತನಾಡಿ, ದಲಿತ ಜನಾಂಗದವರ ಬೇಡಿಕೆಗಳು, ಸಮಸ್ಯೆಗಳನ್ನು ಆಲಿಸಿದ್ದು ಗಂಭೀರವಾಗಿರುವ ಕೆಲವು ಪ್ರಕರಣಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು ಸರಿಪಡಿಸುವ ಕೆಲಸ ಮಾಡಲಾಗುವುದು. ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಮುಖಂಡರಾದ ಪ್ರಶಾಂತ ಕಾಳೆ, ಡಿ. ಬಿ. ಮುದೂರ, ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ವಾಯ್. ಎಚ್. ವಿಜಯಕರ್, ಮಲ್ಲಿಕಾರ್ಜುನ ತಂಗಡಗಿ, ಪ್ರಕಾಶ ಚಲವಾದಿ, ಬಲಭೀಮ ನಾಯ್ಕಮಕ್ಕಳ, ರಾಮಣ್ಣ ರಾಜನಾಳ, ಸಿ. ಜಿ. ವಿಜಯಕರ್, ಅನಿಲ ನಾಯಕ, ನಾಗೇಶ ಭಜಂತ್ರಿ, ಭಗವಂತ ಕಬಾಡೆ ಸೇರಿದಂತೆ ಹಲವು ಮುಖಂಡರು ಇದ್ದರು.

ಪಿಲೇಕೆಮ್ಮ ನಗರದಲ್ಲಿ ಬೇರೊಂದು ನಗರಗಳ ಪುಡಾರಿಗಳು ಬಂದು ಅನಧಿಕೃತ ಚಟುವಟಿಕೆಗಳನ್ನು ಮಾಡುತ್ತಾರೆ. ಆದರೆ ಪಿಕೆ ನಗರದ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಅಕ್ರಮ ಚಟುವಟಿಕೆಗಳನ್ನು ಮಾಡುವವರ ಮೇಲೆ ಇಲಾಖೆ ನಿಗಾ ಇರಿಸಬೇಕು. ಹೆಗಲು ಪಿಕೆ ನಗರದವರದ್ದಾಗಿದ್ದು ಬಂದೂಕು ಬೇರೆ ನಗರದವರದ್ದಾಗಿರುತ್ತದೆ. ಆದರೆ ಹೆಸರು ಕೆಡುತ್ತಿರುವುದು ಪಿಲೇಕೆಮ್ಮ ನಗರದವರದ್ದಾಗಿದೆ. ಈ ಬಗ್ಗೆ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳಬೇಕು.

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ