Life threat from municipal staff's family: Allegation

ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಪುರಸಭೆ ಸಿಬ್ಬಂದಿ ಕುಟುಂಬದಿಂದಲೇ ಜೀವ ಬೆದರಿಕೆ: ಆರೋಪ

ಮುದ್ದೇಬಿಹಾಳ : ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಸಿಬ್ಬಂದಿಯೊಬ್ಬ ತನ್ನ ಕುಟುಂಬದವರು ಹಾಗೂ ತನ್ನ ಹಿಂಬಾಲಕರೊಂದಿಗೆ ನನಗೆ ಜೀವ ಬೆದರಿಕೆ ಒಡ್ಡಿದ್ದು ನನಗೆ ಹಾಗೂ ನನ್ನ ಕುಟುಂಬಕ್ಕೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ಪುರಸಭೆ ಸದಸ್ಯ ಶಿವು ಶಿವಪೂರ(ಹರಿಜನ) ಪೊಲೀಸರಿಗೆ ಮನವಿ ಮಾಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಕರೆದಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಕುಂದುಕೊರತೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ಶಿವಪೂರ, ಕೋರ್ಟಿನ ಆದೇಶ ತಿರುಚಿ ಮೂಲಿಮನಿ ಎಂಬುವರು ನೌಕರಿ ಮಾಡುತ್ತಿದ್ದು ಅವರ ಮೇಲೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಪತ್ರ ಕೊಟ್ಟಿದ್ದಕ್ಕೆ ನನ್ನ ಮೇಲೆ ಹಗೆ ಸಾಧಿಸುತ್ತಿದ್ದಾರೆ ಎಂದು ದೂರಿದರು.
ದಲಿತ ಮುಖಂಡರಾದ ಹರೀಶ ನಾಟೀಕಾರ, ಪರಶುರಾಮ ನಾಲತವಾಡ, ಬಸವರಾಜ ಪೂಜಾರಿ, ದೇವರಾಜ ಹಂಗರಗಿ ಮತ್ತಿತರರು ಮಾತನಾಡಿ, ಕೋರ್ಟಿನ ಆದೇಶವನ್ನು ತಿರುಚಿ ಅನಧಿಕೃತವಾಗಿ ಪುರಸಭೆಯಲ್ಲಿ ಕೆಲಸ ಮಾಡುತ್ತಿರುವ ಮೂಲಿಮನಿ ಎಂಬ ನೌಕರನಿಂದ ಸದಸ್ಯ ಶಿವಪೂರಗೆ ಎರಡ್ಮೂರು ಬಾರಿ ಹಲ್ಲೆ ಪ್ರಯತ್ನ ನಡೆದಿದ್ದು ಜೀವ ಬೆದರಿಕೆ ಕೂಡಾ ಹಾಕಿದ್ದಾರೆ. ಈ ವಿಷಯವಾಗಿ ಜಿಲ್ಲಾಧಿಕಾರಿ, ಎಸ್ಪಿ ಅವರಿಗೂ ಪತ್ರ ಕೊಟ್ಟಿದ್ದು ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಇದಕ್ಕೆ ಸ್ಪಂದಿಸಿದ ಪಿಎಸ್‌ಐ ಸಂಜಯ ತಿಪರೆಡ್ಡಿ, ಈ ವಿಷಯವಾಗಿ ಮೇಲಧಿಕಾರಿಗಳಿಂದ ಪತ್ರ ಬಂದಿದ್ದು ಎದುರುದಾರರಿಂದಲೂ ಪತ್ರ ಕೊಟ್ಟಿದ್ದಾರೆ ಎಂದು ಹೇಳುತ್ತಿದ್ದಂತೆ ಮಧ್ಯೆ ಪ್ರವೇಶಿಸಿದ ದಲಿತ ಮುಖಂಡರು, ಪರಿಶಿಷ್ಟ ಜಾತಿ ಜನಾಂಗದವರ ಮೇಲೆ ಶೋಷಣೆ ನಡೆಯುತ್ತಿರುವಾಗ ಎದುರುದಾರರಿಂದ ದೂರು ದಾಖಲಿಸಿಕೊಂಡು ಸಮುದಾಯದ ರಕ್ಷಣೆಯನ್ನು ಕಡೆಗಣಿಸಲಾಗುತ್ತದೆ ಎಂದು ಆರೋಪಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಪಿಐ ಮಹ್ಮದ ಫಸೀವುದ್ದೀನ್ ಸಭೆಗೆ ಭರವಸೆ ನೀಡಿದರು.

ಇನ್ನುಳಿದಂತೆ ನೇತಾಜಿ ನಗರಕ್ಕೆ ಹೋಗುವ ರಸ್ತೆಯ ಮುಂದೆ ಓರ್ವ ಮಹಿಳೆಯಿಂದ ಮಾಂಸ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು ಯಾವ ಅಧಿಕಾರಿಗೂ ಆಕೆ ಹೆದರುವುದಿಲ್ಲ. ಅವಳಿಂದಲೇ ಇನ್ನುಳಿದವರು ಪುರಸಭೆಯ ಅನುಮತಿ ಇಲ್ಲದೇ ಎಲ್ಲೆಂದರಲ್ಲಿ ಮಾಂಸ ಮಾರಾಟದಲ್ಲಿ ತೊಡಗಿದ್ದಾರೆ. ಅನಧಿಕೃತವಾಗಿ ಮಾಂಸ ಮಾರಾಟ ಮಾಡುವವರನ್ನು ತೆರವುಗೊಳಿಸುವ ಕೆಲಸ ಪುರಸಭೆಯಿಂದ ಮಾಡಬೇಕು. ಕಸಾಯಿಖಾನೆಯನ್ನು ಸ್ಥಳಾಂತರಿಸಬೇಕು ಎಂದು ಮುಖಂಡ ಪರಶುರಾಮ ನಾಲತವಾಡ, ಭೀಮಣ್ಣ ದಾಸರ, ಶಿವಪುತ್ರ ಅಜಮನಿ ಒತ್ತಾಯಿಸಿದರು.

ಮುಖಂಡ ತಿಪ್ಪಣ್ಣ ದೊಡಮನಿ ಮಾತನಾಡಿ, ಈಚೇಗೆ ಕೆಲವು ಪ್ರಕರಣಗಳಲ್ಲಿ ದಲಿತ ಜನಾಂಗದವರ ಮೇಲೆ ಶೋಷಣೆ ನಡೆದಾಗ ಪೊಲೀಸರ ಸ್ಪಂದನೆ ತೃಪ್ತಿಕರವಾಗಿಲ್ಲ. ದಲಿತರೊಂದಿಗೆ ಪೊಲೀಸ್ ಇಲಾಖೆ ಅಂತರ ಕಾಯ್ದುಕೊಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ತಾಲ್ಲೂಕಿನ ಕೆಲವು ಹಳ್ಳಿಗಳ ಚಹಾದ ಅಂಗಡಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಿದೆ. ಅಸ್ಪೃಶ್ಯತೆ ಆಚರಣೆಯ ನಿಷೇಧದ ಕುರಿತು ನಾಮಫಲಕಗಳನ್ನು ಅಳವಡಿಸುವ ಕೆಲಸ ಮಾಡಬೇಕು. ಮದ್ಯಮಾರಾಟ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು. ದಲಿತ ಹುಡುಗ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿದ್ದಕ್ಕೆ ಆ ಸಮುದಾಯದವರಿಂದ ಹುಡುಗನಿಗೆ ಬೆದರಿಕೆ ಹಾಕುವ ಕಾರ್ಯ ನಡೆದಿದ್ದು ನ್ಯಾಯಯುತವಾಗಿ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಬೇಕು. ನಾಲತವಾಡ ರಸ್ತೆಯಲ್ಲಿರುವ ದಲಿತ ಜನಾಂಗದವರ ಸ್ಮಶಾನ ಭೂಮಿ ಒತ್ತುವರಿಯಾಗಿದ್ದು ಅದನ್ನು ತೆರವುಗೊಳಿಸಬೇಕು. ಗ್ರಾಮೀಣ ಭಾಗದಲ್ಲಿ ಬೀಟ್ ವ್ಯವಸ್ಥೆಗೆ ಬರುವ ಪೊಲೀಸರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜನಾಂಗದವರ ಕಾಲೋನಿಗಳಲ್ಲಿ ಬರುವುದಿಲ್ಲ. ಇದನ್ನು ಸರಿಪಡಿಸಬೇಕು. ಕೃಷ್ಣಾ ನದಿಯಲ್ಲಿನ ಮಣ್ಣು ಸಾಗಿಸಲು ಅನುಮತಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳು, ಸಮಸ್ಯೆಗಳ ಕುರಿತು ಗಮನ ಸೆಳೆದರು. ಸಿಪಿಐ ಮಹ್ಮದ ಫಸೀವುದ್ದೀನ ಮಾತನಾಡಿ, ದಲಿತ ಜನಾಂಗದವರ ಬೇಡಿಕೆಗಳು, ಸಮಸ್ಯೆಗಳನ್ನು ಆಲಿಸಿದ್ದು ಗಂಭೀರವಾಗಿರುವ ಕೆಲವು ಪ್ರಕರಣಗಳನ್ನು ತ್ವರಿತವಾಗಿ ಕೈಗೆತ್ತಿಕೊಂಡು ಸರಿಪಡಿಸುವ ಕೆಲಸ ಮಾಡಲಾಗುವುದು. ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಮುಖಂಡರಾದ ಪ್ರಶಾಂತ ಕಾಳೆ, ಡಿ. ಬಿ. ಮುದೂರ, ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ವಾಯ್. ಎಚ್. ವಿಜಯಕರ್, ಮಲ್ಲಿಕಾರ್ಜುನ ತಂಗಡಗಿ, ಪ್ರಕಾಶ ಚಲವಾದಿ, ಬಲಭೀಮ ನಾಯ್ಕಮಕ್ಕಳ, ರಾಮಣ್ಣ ರಾಜನಾಳ, ಸಿ. ಜಿ. ವಿಜಯಕರ್, ಅನಿಲ ನಾಯಕ, ನಾಗೇಶ ಭಜಂತ್ರಿ, ಭಗವಂತ ಕಬಾಡೆ ಸೇರಿದಂತೆ ಹಲವು ಮುಖಂಡರು ಇದ್ದರು.

ಪಿಲೇಕೆಮ್ಮ ನಗರದಲ್ಲಿ ಬೇರೊಂದು ನಗರಗಳ ಪುಡಾರಿಗಳು ಬಂದು ಅನಧಿಕೃತ ಚಟುವಟಿಕೆಗಳನ್ನು ಮಾಡುತ್ತಾರೆ. ಆದರೆ ಪಿಕೆ ನಗರದ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ. ಅಕ್ರಮ ಚಟುವಟಿಕೆಗಳನ್ನು ಮಾಡುವವರ ಮೇಲೆ ಇಲಾಖೆ ನಿಗಾ ಇರಿಸಬೇಕು. ಹೆಗಲು ಪಿಕೆ ನಗರದವರದ್ದಾಗಿದ್ದು ಬಂದೂಕು ಬೇರೆ ನಗರದವರದ್ದಾಗಿರುತ್ತದೆ. ಆದರೆ ಹೆಸರು ಕೆಡುತ್ತಿರುವುದು ಪಿಲೇಕೆಮ್ಮ ನಗರದವರದ್ದಾಗಿದೆ. ಈ ಬಗ್ಗೆ ಇಲಾಖೆಯಿಂದ ಕಠಿಣ ಕ್ರಮ ಕೈಗೊಳ್ಳಬೇಕು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.