Supporters, party leaders warn: We will not stand idly by if Nadahalli tries for Tejowadhe

ಬೆಂಬಲಿಗರು, ಪಕ್ಷದ ಮುಖಂಡರ ಎಚ್ಚರಿಕೆ: ನಡಹಳ್ಳಿ ತೇಜೋವಧೆಗೆ ಯತ್ನಿಸಿದರೆ ನಾವು ಸುಮ್ಮನಿರಲ್ಲ

ಬೆಂಬಲಿಗರು, ಪಕ್ಷದ ಮುಖಂಡರ ಎಚ್ಚರಿಕೆ: ನಡಹಳ್ಳಿ ತೇಜೋವಧೆಗೆ ಯತ್ನಿಸಿದರೆ ನಾವು ಸುಮ್ಮನಿರಲ್ಲ

ಮುದ್ದೇಬಿಹಾಳ : ಬಿಜೆಪಿಯಿಂದ ಶಾಸಕ ಯತ್ನಾಳರನ್ನು ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಕೆಲವಡೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ ಅವರ ಹೆಸರಿಗೆ ಕಳಂಕ ತರಲು ಯತ್ನಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದರು.

ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ, ಯತ್ನಾಳರ ಪರವಾಗಿ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅದರ ನೆಪದಲ್ಲಿ ನಡಹಳ್ಳಿಯವರ ಹೆಸರನ್ನು ಮಧ್ಯೆ ಎಳೆದು ತಂದು ಅವಾಚ್ಯವಾಗಿ ಮಾತನಾಡುವುದು, ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ ಹಾಗೂ ನಡಹಳ್ಳಿಯವರ ಚಿತ್ರಗಳಿಗೆ ಅಸಭ್ಯ ರೀತಿಯಲ್ಲಿ ವ್ಯಕ್ತಪಡಿಸುವ ಮೂಲಕ ತೇಜೋವಧೆಗೆ ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸುವುದಾಗಿ ಹೇಳಿದರು.

ಬಿಜೆಪಿ ಮುಖಂಡ ಸಿದ್ಧರಾಜ ಹೊಳಿ ಮಾತನಾಡಿ, ಈಚೇಗೆ ಮುದ್ದೇಬಿಹಾಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವವರಲ್ಲಿ ಕಾಂಗ್ರೆಸ್ ಮುಖಂಡರೇ ಹೆಚ್ಚಿದ್ದು ಬಿಜೆಪಿಗೆ ಯತ್ನಾಳರನ್ನು ಮರು ಸೇರ್ಪಡೆ ಮಾಡಿಕೊಳ್ಳಿ ಎನ್ನುವ ಬದಲು ಕಾಂಗ್ರೆಸ್‌ಗೆ ಅವರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪ್ರತಿಭಟನೆ ನಡೆಸಿ ಎಂದು ಪಂಚಮಸಾಲಿ ಸಮಾಜದ ಕಾಂಗ್ರೆಸ್ ಮುಖಂಡರಿಗೆ ಸಲಹೆ ಮಾಡಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮಾತನಾಡಿ, ಪ್ರತಿಭಟನೆಯ ನೆಪದಲ್ಲಿ ಯಾವುದೇ ನಾಯಕರ ಬ್ಯಾನರ, ಭಾವಚಿತ್ರಗಳಿಗೆ ಅವಮಾನಕರ ರೀತಿಯಲ್ಲಿ ಚಿತ್ರಿಸುವುದು, ಸುಡುವುದು, ನಡೆದುಕೊಳ್ಳುವುದಕ್ಕೆ ಕಾನೂನು ರೀತಿಯಲ್ಲಿ ಅಪರಾಧವಿದ್ದು ಬಿಜೆಪಿ ಕಾನೂನು ಘಟಕ ಜಿಲ್ಲೆಯಲ್ಲಿ ನಡೆದಿರುವ ಪ್ರತಿಭಟನೆಗಳ ಮೇಲೆ ನಿಗಾ ಇರಿಸಿದೆ. ಬಿಜೆಪಿ ನಾಯಕರ ಚಿತ್ರಗಳಿಗೆ ಅವಮಾನಕರವಾಗಿ ಪ್ರದರ್ಶಿಸಿದ್ದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಬೆಂಗಳೂರು ಕೋರ್ಟ್ನಲ್ಲಿ ಕೇಸು ವಿಚಾರಣೆ ನಡೆಯುತ್ತದೆ. ಇಂತಹ ಘಟನೆಗಳಿಗೆ ಯತ್ನಾಳರ ಅಭಿಮಾನಿಗಳು, ಪ್ರತಿಭಟನೆ ನಡೆಸುವವವರು ಆಸ್ಪದ ನೀಡಬಾರದು ಕಿವಿಮಾತು ಹೇಳಿದರು.

ಮುಖಂಡ ಹರೀಶ ನಾಟೀಕಾರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಯುವ ಘಟಕದ ಅಧ್ಯಕ್ಷ ಗಿರೀಶಗೌಡ ಪಾಟೀಲ್, ಪ್ರೇಮಸಿಂಗ ಚವ್ಹಾಣ, ಪರಶುರಾಮ ನಾಲತವಾಡ, ಗೌರಮ್ಮ ಹುನಗುಂದ,ಲಕ್ಷ್ಮಣ ಬಿಜ್ಜೂರ, ಶಂಕರಗೌಡ ಶಿವಣಗಿ, ಸಂಜೀವ ಬಾಗೇವಾಡಿ, ಸಿದ್ದು ಹಿರೇಮಠ, ನಿಖಿಲ್ ಮಲಗಲದಿನ್ನಿ, ಗುರುಪಾದ ವಡ್ಡರ ಮೊದಲಾದವರು ಇದ್ದರು.

2013ರಲ್ಲಿ ನಿಮ್ಮದೇ ಸಮಾಜದ ನಾಯಕಿ ವಿಮಲಾಬಾಯಿ ದೇಶಮುಖ ಅವರಿಗೆ ಬಿಜೆಪಿ ಟಿಕೇಟ್ ಕೊಡದೇ ಅನ್ಯಾಯ ಮಾಡಿದಾಗ ಯಾಕೆ ಪ್ರತಿಭಟನೆ ನಡೆಸಲಿಲ್ಲ. ಈಚೇಗೆ ಬೆಳಗಾವಿಯಲ್ಲಿ ನಿಮ್ಮ ಸಮಾಜದ ಸ್ವಾಮೀಜಿಗಳು, ಹೋರಾಟಗಾರರು, ಸಮಾಜದವರ ಮೇಲೆ ಕಾಂಗ್ರೆಸ್ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದಾಗ ಯಾಕೆ ಪ್ರತಿಭಟನೆ ನಡೆಸಲಿಲ್ಲ. ಯತ್ನಾಳ ಅವರು ಈ ಹಿಂದೆ ದಲಿತ ಮುಖಂಡರನ್ನು ಪೇಮೆಂಟ್ ಗಿರಾಕಿಗಳು ಎಂದು ಜರಿದಿದ್ದರು. ಅವರು ಮುಂದೊಂದು ದಿನ ಸಿಎಂ ಆಗುತ್ತಾರೆ ಎಂದು ಕನಸು ಕಂಡಿದ್ದೇವು. ಆದರೆ ಅವರು ತಮ್ಮ ಮಾತುಗಳಿಂದಲೇ ಎಲ್ಲವನ್ನೂ ಹಾಳು ಮಾಡಿಕೊಂಡಿದ್ದಾರೆ. ಪಕ್ಷದ ವಿಚಾರವನ್ನು ಸಮಾಜಕ್ಕೆ ಥಳಕು ಹಾಕುವುದನ್ನು ಕೆಲವು ಮುಖಂಡರು ನಿಲ್ಲಿಸಬೇಕು. ತಾಳಿಕೋಟೆಯಲ್ಲಿ ಅಭಿಮಾನ ಯಾತ್ರೆ ನಡೆಸಿ ಬಿಜೆಪಿ ನಾಯಕರ ಚಿತ್ರಗಳಿಗೆ ಕ್ಷೀರಾಭಿಷೇಕ ಮಾಡುತ್ತೇವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ