Supporters, party leaders warn: We will not stand idly by if Nadahalli tries for Tejowadhe

ಬೆಂಬಲಿಗರು, ಪಕ್ಷದ ಮುಖಂಡರ ಎಚ್ಚರಿಕೆ: ನಡಹಳ್ಳಿ ತೇಜೋವಧೆಗೆ ಯತ್ನಿಸಿದರೆ ನಾವು ಸುಮ್ಮನಿರಲ್ಲ

ಬೆಂಬಲಿಗರು, ಪಕ್ಷದ ಮುಖಂಡರ ಎಚ್ಚರಿಕೆ: ನಡಹಳ್ಳಿ ತೇಜೋವಧೆಗೆ ಯತ್ನಿಸಿದರೆ ನಾವು ಸುಮ್ಮನಿರಲ್ಲ

ಮುದ್ದೇಬಿಹಾಳ : ಬಿಜೆಪಿಯಿಂದ ಶಾಸಕ ಯತ್ನಾಳರನ್ನು ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಕೆಲವಡೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ. ಎಸ್. ಪಾಟೀಲ್ ನಡಹಳ್ಳಿ ಅವರ ಹೆಸರಿಗೆ ಕಳಂಕ ತರಲು ಯತ್ನಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದರು.

ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಲ್ಲಿಕಾರ್ಜುನ ತಂಗಡಗಿ, ಯತ್ನಾಳರ ಪರವಾಗಿ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅದರ ನೆಪದಲ್ಲಿ ನಡಹಳ್ಳಿಯವರ ಹೆಸರನ್ನು ಮಧ್ಯೆ ಎಳೆದು ತಂದು ಅವಾಚ್ಯವಾಗಿ ಮಾತನಾಡುವುದು, ಬಿಜೆಪಿ ರಾಜ್ಯ ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ ಹಾಗೂ ನಡಹಳ್ಳಿಯವರ ಚಿತ್ರಗಳಿಗೆ ಅಸಭ್ಯ ರೀತಿಯಲ್ಲಿ ವ್ಯಕ್ತಪಡಿಸುವ ಮೂಲಕ ತೇಜೋವಧೆಗೆ ಯತ್ನಿಸುತ್ತಿದ್ದಾರೆ. ಇದನ್ನು ಖಂಡಿಸುವುದಾಗಿ ಹೇಳಿದರು.

ಬಿಜೆಪಿ ಮುಖಂಡ ಸಿದ್ಧರಾಜ ಹೊಳಿ ಮಾತನಾಡಿ, ಈಚೇಗೆ ಮುದ್ದೇಬಿಹಾಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವವರಲ್ಲಿ ಕಾಂಗ್ರೆಸ್ ಮುಖಂಡರೇ ಹೆಚ್ಚಿದ್ದು ಬಿಜೆಪಿಗೆ ಯತ್ನಾಳರನ್ನು ಮರು ಸೇರ್ಪಡೆ ಮಾಡಿಕೊಳ್ಳಿ ಎನ್ನುವ ಬದಲು ಕಾಂಗ್ರೆಸ್‌ಗೆ ಅವರನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪ್ರತಿಭಟನೆ ನಡೆಸಿ ಎಂದು ಪಂಚಮಸಾಲಿ ಸಮಾಜದ ಕಾಂಗ್ರೆಸ್ ಮುಖಂಡರಿಗೆ ಸಲಹೆ ಮಾಡಿದರು.

ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಮಾತನಾಡಿ, ಪ್ರತಿಭಟನೆಯ ನೆಪದಲ್ಲಿ ಯಾವುದೇ ನಾಯಕರ ಬ್ಯಾನರ, ಭಾವಚಿತ್ರಗಳಿಗೆ ಅವಮಾನಕರ ರೀತಿಯಲ್ಲಿ ಚಿತ್ರಿಸುವುದು, ಸುಡುವುದು, ನಡೆದುಕೊಳ್ಳುವುದಕ್ಕೆ ಕಾನೂನು ರೀತಿಯಲ್ಲಿ ಅಪರಾಧವಿದ್ದು ಬಿಜೆಪಿ ಕಾನೂನು ಘಟಕ ಜಿಲ್ಲೆಯಲ್ಲಿ ನಡೆದಿರುವ ಪ್ರತಿಭಟನೆಗಳ ಮೇಲೆ ನಿಗಾ ಇರಿಸಿದೆ. ಬಿಜೆಪಿ ನಾಯಕರ ಚಿತ್ರಗಳಿಗೆ ಅವಮಾನಕರವಾಗಿ ಪ್ರದರ್ಶಿಸಿದ್ದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ. ಬೆಂಗಳೂರು ಕೋರ್ಟ್ನಲ್ಲಿ ಕೇಸು ವಿಚಾರಣೆ ನಡೆಯುತ್ತದೆ. ಇಂತಹ ಘಟನೆಗಳಿಗೆ ಯತ್ನಾಳರ ಅಭಿಮಾನಿಗಳು, ಪ್ರತಿಭಟನೆ ನಡೆಸುವವವರು ಆಸ್ಪದ ನೀಡಬಾರದು ಕಿವಿಮಾತು ಹೇಳಿದರು.

ಮುಖಂಡ ಹರೀಶ ನಾಟೀಕಾರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಯುವ ಘಟಕದ ಅಧ್ಯಕ್ಷ ಗಿರೀಶಗೌಡ ಪಾಟೀಲ್, ಪ್ರೇಮಸಿಂಗ ಚವ್ಹಾಣ, ಪರಶುರಾಮ ನಾಲತವಾಡ, ಗೌರಮ್ಮ ಹುನಗುಂದ,ಲಕ್ಷ್ಮಣ ಬಿಜ್ಜೂರ, ಶಂಕರಗೌಡ ಶಿವಣಗಿ, ಸಂಜೀವ ಬಾಗೇವಾಡಿ, ಸಿದ್ದು ಹಿರೇಮಠ, ನಿಖಿಲ್ ಮಲಗಲದಿನ್ನಿ, ಗುರುಪಾದ ವಡ್ಡರ ಮೊದಲಾದವರು ಇದ್ದರು.

2013ರಲ್ಲಿ ನಿಮ್ಮದೇ ಸಮಾಜದ ನಾಯಕಿ ವಿಮಲಾಬಾಯಿ ದೇಶಮುಖ ಅವರಿಗೆ ಬಿಜೆಪಿ ಟಿಕೇಟ್ ಕೊಡದೇ ಅನ್ಯಾಯ ಮಾಡಿದಾಗ ಯಾಕೆ ಪ್ರತಿಭಟನೆ ನಡೆಸಲಿಲ್ಲ. ಈಚೇಗೆ ಬೆಳಗಾವಿಯಲ್ಲಿ ನಿಮ್ಮ ಸಮಾಜದ ಸ್ವಾಮೀಜಿಗಳು, ಹೋರಾಟಗಾರರು, ಸಮಾಜದವರ ಮೇಲೆ ಕಾಂಗ್ರೆಸ್ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದಾಗ ಯಾಕೆ ಪ್ರತಿಭಟನೆ ನಡೆಸಲಿಲ್ಲ. ಯತ್ನಾಳ ಅವರು ಈ ಹಿಂದೆ ದಲಿತ ಮುಖಂಡರನ್ನು ಪೇಮೆಂಟ್ ಗಿರಾಕಿಗಳು ಎಂದು ಜರಿದಿದ್ದರು. ಅವರು ಮುಂದೊಂದು ದಿನ ಸಿಎಂ ಆಗುತ್ತಾರೆ ಎಂದು ಕನಸು ಕಂಡಿದ್ದೇವು. ಆದರೆ ಅವರು ತಮ್ಮ ಮಾತುಗಳಿಂದಲೇ ಎಲ್ಲವನ್ನೂ ಹಾಳು ಮಾಡಿಕೊಂಡಿದ್ದಾರೆ. ಪಕ್ಷದ ವಿಚಾರವನ್ನು ಸಮಾಜಕ್ಕೆ ಥಳಕು ಹಾಕುವುದನ್ನು ಕೆಲವು ಮುಖಂಡರು ನಿಲ್ಲಿಸಬೇಕು. ತಾಳಿಕೋಟೆಯಲ್ಲಿ ಅಭಿಮಾನ ಯಾತ್ರೆ ನಡೆಸಿ ಬಿಜೆಪಿ ನಾಯಕರ ಚಿತ್ರಗಳಿಗೆ ಕ್ಷೀರಾಭಿಷೇಕ ಮಾಡುತ್ತೇವೆ.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.