Outrage over expulsion of Yatna: Ready to give his life for Yatna - Desai

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯಲ್ಲಿ ಅವರು ಮಾತನಾಡಿದರು.

ಯಾವ ಸಮಾಜ ನಿಮಗೆ ಸಪೋರ್ಟ ಮಾಡಿದ್ದರೋ ಅವರ ದ್ರಾಕ್ಷಿ ತೋಟ ಬಂದ ಮಾಡಿ ಸಂಸ್ಕಾರ ಇಲ್ಲದವರಂತೆ ನಡೆದುಕೊಂಡವರು ನೀವು. ಬಸನಗೌಡರ ಬಗ್ಗೆ ಹಗುರವಾಗಿ ಮಾತನಾಡಿದರೆ ನಾವು ಸುಮ್ಮನೆ ಕೂರುವುದಿಲ್ಲ. ದೇಶಮುಖರು, ನಾಡಗೌಡರು ಇಷ್ಟು ವರ್ಷ ಎಂಎಲ್‌ಎ ಆದರೂ ಮಿಣಜಗಿ ಕಲ್ಲಿನ ಕ್ವಾರಿ ಬಂದ್ ಆಗಿರಲಿಲ್ಲ. ಆದರೆ ಹಿಂದಿನ ಶಾಸಕರು ಅಧಿಕಾರದಲ್ಲಿದ್ದಾಗ ಕ್ವಾರಿ ಬಂದ್ ಮಾಡಿಸಿದರು. ಬಸನಗೌಡರ ಬಗ್ಗೆ ನೀವು ಮಾತನಾಡಿದರೆ ನಾವು ಅದೇ ಧಾಟಿಯಲ್ಲಿ ನಿನಗೆ ಉತ್ತರ ಕೊಡುತ್ತೇವೆ. ಯತ್ನಾಳ ಅವರು ನಮಗೆ ತಾಯಿ ಇದ್ದಂತೆ ಅವರಿಗೆ ಅಪಮಾನವಾದರೆ ನಾವು ಸಹಿಸುವುದಿಲ್ಲ ಎಂದು ಹೇಳಿದರು.

ಸ್ವಾಮಿ ವಿವೇಕಾನಂದ ಯುವ ಬ್ರಿಗೇಡ್ ಸಂಚಾಲಕ ರಾಘವ ಅಣ್ಣಿಗೇರಿ ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದರೆ ಯತ್ನಾಳ ಪಕ್ಷದಲ್ಲಿರಬೇಕು. ಕುಟುಂಬ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ ಎಂದು ಭಾಷಣ ಮಾಡುವ ಬಿಜೆಪಿ ವರಿಷ್ಠರು ಅಪ್ಪ ಮಕ್ಕಳ ಮಾತು ಕೇಳಿ ಯತ್ನಾಳರನ್ನು ಪಕ್ಷದಿಂದ ಹೊರಗಡೆ ಹಾಕಿದ್ದೀರಿ. ಬ್ರಷ್ಟಾಚಾರಿ, ಅಡ್ಜಸ್ಟ್ಮೆಂಟ್ ರಾಜಕಾರಣಕ್ಕೆ ಹೆಸರುವಾಸಿಯಾಗಿರುವ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು. ಇಲ್ಲದಿದ್ದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಹೇಳಿದರು.

ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಯತ್ನಾಳರ ಪರ ಹೋರಾಟಕ್ಕೆ ಅಭಿಮಾನಿಗಳು ಸ್ವಯಂಪ್ರೇರಿತಾಗಿ ಬಂದಿದ್ದಾರೆ. ನಿಮ್ಮ ಹಾಗೆ ಜನರನ್ನು ಕೂಡಿಸಲು ಹಣ, ಸೀರೆ ಕೊಟ್ಟು ಕರೆತರುವುದಿಲ್ಲ. ಕೀಳುಮಟ್ಟದ ವಿಷಯಗಳನ್ನು ಹೇಳುವುದನ್ನು ಕೈಬಿಡಿ ಎಂದರು.

ಮುಖಂಡರಾದ ಬಸನಗೌಡ ಪಾಟೀಲ (ನಾಗರಾಳ ಹುಲಿ), ಎಂ. ಎಸ್. ರುದ್ರಗೌಡರ, ಪಂಚಮಸಾಲಿ ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಿತ್ತೂರು ಚೆನ್ನಮ್ಮ ಯುವ ಘಟಕದ ತಾಲ್ಲೂಕು ಅಧ್ಯಕ್ಷ ರವಿ ಕಮತ, ಬಸರಕೋಡದ ಸೂಳಿಭಾವಿ, ಬಸವರಾಜ ಗೋನಾಳ, ಕಾಮರಾಜ ಬಿರಾದಾರ ಮೊದಲಾದವರು ಇದ್ದರು.

ಮುದ್ದೇಬಿಹಾಳ ಪಟ್ಟಣದ ಬನಶಂಕರಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ಬಸವೇಶ್ವರ ವೃತ್ತ, ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಕಿತ್ತೂರು ಚೆನ್ನಮ್ಮನವರ ವೃತ್ತದಲ್ಲಿ ಸಮಾಪ್ತಿಗೊಳಿಸಲಾಯಿತು.

ಹೋರಾಟದಲ್ಲಿ ತಾಲ್ಲೂಕು ಪಂಚಮಸಾಲಿ ಸಮಾಜ, ಯತ್ನಾಳರ ಅಭಿಮಾನಿಗಳು, ಹಿಂದೂಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯ ಸಮಾಪ್ತಿ ಗೊಳಿಸಲಾಯಿತು. ವಿರೋಧದ ಮಧ್ಯೆಯೂ ಯಡಿಯೂರಪ್ಪ, ವಿಜಯೇಂದ್ರ, ನಡಹಳ್ಳಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಒಂದು ಗಂಟೆ ರಸ್ತೆ ತಡೆ : ಬಸವೇಶ್ವರ ವೃತ್ತಕ್ಕೆ ಆಗಮಿಸಿದಾಗ ಹೋರಾಟಗಾರರು ನಾಲ್ಕು ದಿಕ್ಕಿನಿಂದ ರಸ್ತೆಗಳನ್ನು ಬಂದ್ ಮಾಡಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆಯುಂಟಾಯಿತು. ಸಿಪಿಐ ಸಿಪಿಒಐ ಮೊಹ್ಮದ ಫಸಿವುದೀನ, ಪಿಎಸ್‌ಐ ಸಂಜಯ ತಿಪರಡ್ಡಿ ಬಿಗಿ ಭದ್ರತೆ ಒದಗಿಸಿದ್ದರು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.