ನಂದವಾಡಗಿ ಶಾಲೆಯಲ್ಲಿ ವ್ಯಸನ ಮುಕ್ತ ದಿನ ಆಚರಣೆ

ನಂದವಾಡಗಿ ಶಾಲೆಯಲ್ಲಿ ವ್ಯಸನ ಮುಕ್ತ ದಿನ ಆಚರಣೆ

ನಂದವಾಡಗಿ: ಬಾಗಲಕೋಟೆ ಜಿಲ್ಲೆಯ ಹುನಗುಂದ /ಇಲಕಲ್ ತಾಲೂಕಿನ ಸ ಹೆ ಮ ಹಿ ಪ್ರಾ ಶಾಲೆ ನಂದವಾಡಗಿಯಲ್ಲಿ ಪೂಜ್ಯರಾದ ಮಹಾಂತ ಜೋಳಿಗೆ ಹರಿಕಾರರು ಶ್ರೀ ಮ ನಿ ಪ್ರ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಹಾಗೂ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.

ವಿದ್ಯಾರ್ಥಿನಿಯರು ವಚನ ಪ್ರಾರ್ಥನೆ ಗೀತೆಯ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಪ್ರಾಸ್ತವಿಕವಾಗಿ ಶಾಲೆಯ ಪ್ರಭಾರಿ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರರವರು ಪೂಜ್ಯರ ಆದರ್ಶ ಜೀವನ, ಮೌಲ್ಯಗಳು, ವಚನಗಳ ಮೂಲಕ ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಪೂಜ್ಯರ ಕೊಡುಗೆ ಅಪಾರ ಎಂದು ಹೇಳಿದರು. ಹಾಗೂ ದುಷ್ಟ ಚಟಗಳನ್ನು ಜೋಳಿಗೆಯಲ್ಲಿ ಹಾಕಿ ಬದುಕನ್ನು ಸುಂದರಗೊಳಿಸಿಕೊಳ್ಳಿರಿ ಎಂದು ಪೂಜ್ಯರು ನುಡಿದರು ಎಂದು ತಿಳಿಸಿದರು.

ವಿದ್ಯಾರ್ಥಿನಿಯರು ಪೂಜ್ಯರ ಬಗ್ಗೆ ಹಾಗೂ ದಿನಾಚರಣೆಯ ಕುರಿತು ಮಾತನಾಡಿದರು. ಹಾಗೂ ವಚನಗಳನ್ನು ಹಾಡಿದರು. ವ್ಯಸನ ಮುಕ್ತ ದಿನಾಚರಣೆಯ ಕುರಿತು ಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ವ್ಯಸನ ಮುಕ್ತ ದಿನಾಚರಣೆಯ ನಿಮಿತ್ಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರಿ ಮುಖ್ಯ ಗುರುಮಾತೆ ಶ್ರೀಮತಿ ವಿ ಬಿ ಕುಂಬಾರ, ಸಹ ಶಿಕ್ಷಕಿಯರಾದ ಶ್ರೀಮತಿ ಜ್ಯೋತಿ, ಶ್ರೀಮತಿ ಜಿ ಆರ್ ನದಾಫ್, ಸಹ ಶಿಕ್ಷಕರಾದ ಶ್ರೀ ಶಿವಾನಂದ ಬಳೂಲದ, ಬಸವರಾಜ ಬಲಕುಂದಿ, ಡಾ. ವಿಶ್ವನಾಥ ತೋಟಿ, ಶ್ರೀ ಚಂದ್ರಶೇಖರ ಹುತಗಣ್ಣ, ಕುಮಾರಿ ಅಶ್ವಿನಿ ಕಪ್ಪರದ, ಉರ್ದು ಶಾಲೆಯ ಅತಿಥಿ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ಸಹ ಶಿಕ್ಷಕರಾದ ಬಸವರಾಜ ಬಲಕುಂದಿ ನಿರ್ವಹಿಸಿದರು, ಶ್ರೀ ಚಂದ್ರಶೇಖರ ಹುತಗಣ್ಣ ಸ್ವಾಗತಿಸಿದರು. ಕುಮಾರಿ ಸಹ ಶಿಕ್ಷಕಿಯರು ಅಶ್ವಿನಿ ಕಪ್ಪರದ ವಂದಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ