Allegation of fighter Shiv Shimpi: Illegal recruitment of teachers to Basava Bal Bharati Educational Institute

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ನೀಡಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ’ ಎಂದು ಹೋರಾಟಗಾರ, ವಕೀಲ ಚೇತನ ಶಿವಶಿಂಪಿ ದೂರಿದ್ದಾರೆ.

ತಾಲ್ಲೂಕಿನ ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯವರು ಮಾಡಿರುವ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಅವರು, ಈ ಬಗ್ಗೆ ಹಲವು ದೂರುಗಳನ್ನು ನೀಡಿದಾಗ ಮುದ್ದೇಬಿಹಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆಗೆ ತ್ರಿ ಸದಸ್ಯರ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರು 9 ಜನರ ತನಿಖಾ ತಂಡವನ್ನು ರಚಿಸಿದ್ದು, ಸದರಿ ತನಿಖಾ ತಂಡಗಳು ಈ ಶಾಲೆಯಲ್ಲಿ ಶಾಲಾ ಮಾನ್ಯತೆ ನವೀಕರಣ, ಪಿಟಿಆರ್, ಸಂದರ್ಶನ ವರದಿ ಸೇರಿದಂತೆ ಶಾಲೆ ಪ್ರಾರಂಭದಿಂದ ಅನುದಾನ ಪಡೆಯುವವರೆಗೆ ನಿರಂತರವಾಗಿ ನಡೆದಿರುವ ಬಗ್ಗೆ ಇಲಾಖಾ ನಿಯಮಗಳನ್ವಯ ಖಚಿತಪಡಿಸುವ ಹಲವು ದಾಖಲೆಗಳು ಇಲ್ಲದಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಶಾಲೆಯ ಮೇಲೆ ಕಾನೂನು ಕ್ರಮವಾಗಿ ಬೋಧಕ ಸಿಬ್ಬಂದಿಗಳು ಈವರೆಗೆ ಪಡೆದ ವೇತನವನ್ನು ಮರಳಿ ಸರ್ಕಾರಕ್ಕೆ ಭರಣಾ ಮಾಡುವ ಮತ್ತು ಬೋಧಕ ಸಿಬ್ಬಂದಿಗಳ ಸಹಿತ ಆಡಳಿತ ಮಂಡಳಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುವ ಹಂತದಲ್ಲಿದ್ದು, ಇಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುತ್ತಿರುವ ನನ್ನ ಮೇಲೆ ಸಂಸ್ಥೆಯವರು ರೂ.40 ಲಕ್ಷಕ್ಕೆ ಬೇಡಿಕೆ ಇಟ್ಟಿರುವದಾಗಿ ಮತ್ತು ನನ್ನ ತಾಯಿಯವರು ಇದೇ ಶಾಲೆಯಲ್ಲಿ ಸಹ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು ಈ ಬಗ್ಗೆ ನಕಲಿ ಪ್ರಮಾಣ ಸೃಷ್ಟಿಸಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ತನಿಖೆಯ ದಿಕ್ಕು ತಪ್ಪಿಸಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Latest News

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ (ಖಜಾಂಚಿ), ಮಲ್ಲಿಕಾರ್ಜುನ ಬಂಡರಗಲ್ (ಸಹ ಕಾರ್ಯದರ್ಶಿ) ಸ್ಥಾನಕ್ಕೆ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಪಾಟೀಲ, ಬಸವರಾಜ ಕಮ್ಮಾರ, ಚಂದ್ರು ಗಂಗೂರ,

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ, ಏಷ್ಯಾ ಖಂಡದಲ್ಲಿಯೇ ಇಂದು ಈ ಯೋಜನೆ ಮಹತ್ವದಿಂದ ಹುನಗುಂದ ಕ್ಷೇತ್ರ ಗುರುತಿಸುವಂತಾಗಲೂ ಕಾಶಪ್ಪನವರ ದೂರದ ದೃಷ್ಟಿಯಿಂದ ಸಾಧ್ಯವಾಗಿದೆ. ತಂದೆ ಮಾಜಿ