Allegation of fighter Shiv Shimpi: Illegal recruitment of teachers to Basava Bal Bharati Educational Institute

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಇಲಾಖೆಗೆ ನೀಡಿ ಅನುದಾನ ದುರುಪಯೋಗಪಡಿಸಿಕೊಂಡು ಸರ್ಕಾರಕ್ಕೆ ವಂಚಿಸಿದ್ದಾರೆ’ ಎಂದು ಹೋರಾಟಗಾರ, ವಕೀಲ ಚೇತನ ಶಿವಶಿಂಪಿ ದೂರಿದ್ದಾರೆ.

ತಾಲ್ಲೂಕಿನ ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯವರು ಮಾಡಿರುವ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಅವರು, ಈ ಬಗ್ಗೆ ಹಲವು ದೂರುಗಳನ್ನು ನೀಡಿದಾಗ ಮುದ್ದೇಬಿಹಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳು ತನಿಖೆಗೆ ತ್ರಿ ಸದಸ್ಯರ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕರು 9 ಜನರ ತನಿಖಾ ತಂಡವನ್ನು ರಚಿಸಿದ್ದು, ಸದರಿ ತನಿಖಾ ತಂಡಗಳು ಈ ಶಾಲೆಯಲ್ಲಿ ಶಾಲಾ ಮಾನ್ಯತೆ ನವೀಕರಣ, ಪಿಟಿಆರ್, ಸಂದರ್ಶನ ವರದಿ ಸೇರಿದಂತೆ ಶಾಲೆ ಪ್ರಾರಂಭದಿಂದ ಅನುದಾನ ಪಡೆಯುವವರೆಗೆ ನಿರಂತರವಾಗಿ ನಡೆದಿರುವ ಬಗ್ಗೆ ಇಲಾಖಾ ನಿಯಮಗಳನ್ವಯ ಖಚಿತಪಡಿಸುವ ಹಲವು ದಾಖಲೆಗಳು ಇಲ್ಲದಿರುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಶಾಲೆಯ ಮೇಲೆ ಕಾನೂನು ಕ್ರಮವಾಗಿ ಬೋಧಕ ಸಿಬ್ಬಂದಿಗಳು ಈವರೆಗೆ ಪಡೆದ ವೇತನವನ್ನು ಮರಳಿ ಸರ್ಕಾರಕ್ಕೆ ಭರಣಾ ಮಾಡುವ ಮತ್ತು ಬೋಧಕ ಸಿಬ್ಬಂದಿಗಳ ಸಹಿತ ಆಡಳಿತ ಮಂಡಳಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುವ ಹಂತದಲ್ಲಿದ್ದು, ಇಲ್ಲಿ ನಡೆದ ಭ್ರಷ್ಟಾಚಾರದ ವಿರುದ್ಧ ಪ್ರಾಮಾಣಿಕ ಹೋರಾಟ ಮಾಡುತ್ತಿರುವ ನನ್ನ ಮೇಲೆ ಸಂಸ್ಥೆಯವರು ರೂ.40 ಲಕ್ಷಕ್ಕೆ ಬೇಡಿಕೆ ಇಟ್ಟಿರುವದಾಗಿ ಮತ್ತು ನನ್ನ ತಾಯಿಯವರು ಇದೇ ಶಾಲೆಯಲ್ಲಿ ಸಹ ಶಿಕ್ಷಕಿ ಮತ್ತು ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು ಈ ಬಗ್ಗೆ ನಕಲಿ ಪ್ರಮಾಣ ಸೃಷ್ಟಿಸಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ತನಿಖೆಯ ದಿಕ್ಕು ತಪ್ಪಿಸಲು ಹವಣಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Latest News

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ:                 ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಸಜ್ಜಲಗುಡ್ಡ ಶರಣಮ್ಮನವರ ಪುರಾಣ ಮಂಗಲ: ತುಳಿಯುವವರ ಮಧ್ಯೆ ಬೆಳೆದು ನಿಲ್ಲುವುದೇ ಸಾಧನೆ-ಸಿದ್ಧಲಿಂಗ ಶ್ರೀ

ಮುದ್ದೇಬಿಹಾಳ : ಎಲ್ಲದಕ್ಕೂ ಮನಸ್ಸೆ ಕಾರಣವಾಗಿದ್ದು ಇನ್ನೊಬ್ಬರ ಮನೆ ಹಾಳು ಮಾಡುವುದು ಮನಸ್ಸೇ ಆಗಿದೆ.ತುಳಿಯುವವರ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ : ಸಾಯಿ ಇಂಡೆನ್ ಗ್ಯಾಸ್ ಎಜೆನ್ಸಿ ವಿರುದ್ದ ಕ್ರಮಕ್ಕೆ ಆಗ್ರಹ

ಮುದ್ದೇಬಿಹಾಳ ತಾಲೂಕಿನ ಸಾಯಿ ಇಂಡೆನ್ ಗ್ಯಾಸ್ ಸರ್ವಿಸ್ ಎಜೆನ್ಸಿಯವರು ಗ್ಯಾಸ್ ವಿತರಣಾ ಸೇವೆಯಲ್ಲಿ ವಿಳಂಬ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ ವೈದ್ಯರ ವರ್ಗಾವಣೆಗೆ ವಿರೋಧ

ನಾಲತವಾಡ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳಿನಿAದ ಒಳ್ಳೆಯ ಸೇವೆ ನೀಡುತ್ತಿದ್ದ ವೈದ್ಯ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ:  ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಹಿಂದಿನ ಆಡಳಿತ ಮಂಡಳಿ ವಿರುದ್ಧ ಗಂಭೀರ ಆರೋಪ: ಮುದ್ದೇಬಿಹಾಳ ಅಂಜುಮನ್ ಸಂಸ್ಥೆಯ ಅವ್ಯವಹಾರ ತನಿಖೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ 2018ರ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಈ ಜೋಡಿ ಹಸೆಮಣೆ ಏರಲಿದೆ ಎನ್ನಲಾಗಿದೆ. ಇತ್ತೀಚೆಗೆ ಈ ಇಬ್ಬರೂ ಬಹಳ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡರು. ಈ ಇಬ್ಬರೂ ಎಲ್ಲಿಯೂ ನಿಶ್ಚಿತಾರ್ಥದ ಫೋಟೋ ಗಳನ್ನು ಹಂಚಿಕೊಂಡಿಲ್ಲ, ವಿಜಯ್ ಮತ್ತು ರಶ್ಮಿಕಾ. ನಿಶ್ಚಿತಾರ್ಥದ ನಂತರ, ಅವರು ತಮ್ಮ ಕೆಲಸಗಳಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ ಎಂದು

ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸುಮಲತಾ ಕ್ಷೌರದ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ ತಂಡಕ್ಕೆ ಆಯ್ಕೆ.

ಶಿಗ್ಗಾಂವ: ಶಿಗ್ಗಾಂವ ನಗರದ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕ್ರೀಡಾಪಟುಗಳು ಯೋಗಾಸನ ಕ್ರೀಡೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಹಾವೇರಿ ವಿಶ್ವವಿದ್ಯಾಲಯ, ಕೆರೆಮತ್ತಿಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಯೋಗಾಸನ ಕ್ರೀಡೆಯಲ್ಲಿ ಹಾವೇರಿ ವಿಶ್ವವಿದ್ಯಾಲಯ ಮಹಿಳಾ ತಂಡದ ವಿ.ವಿ ಆಯ್ಕೆ ಪ್ರಕ್ರಿಯೆ ಜರುಗಿದ್ದು, ಈ ಆಯ್ಕೆಯಲ್ಲಿ ಶ್ರೀ ರಂಭಾಪುರಿ ಪದವಿ ಮಹಾವಿದ್ಯಾಲಯದ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದರಲ್ಲಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಮಲತಾ ಕ್ಷೌರದ ಅವರು ಹಾವೇರಿ ವಿಶ್ವವಿದ್ಯಾಲಯ ಮಹಿಳಾ ಯೋಗಾಸನ