ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ಯುವತಿ ಬೆತ್ತಲೆಗೊಳಿಸಿ ಹಲ್ಲೆ: ಐವರು ಮಂಗಳಮುಖಿಯರ ಬಂಧನ

ವಿಜಯಪುರ: ನಗರದಲ್ಲಿ ಮಂಗಳಮುಖಿಯೊಬ್ಬರನ್ನು ಸಾರ್ವಜನಿಕರ ಎದುರಲ್ಲೇ ವಿವಸ್ತ್ರಗೊಳಿಸಿ, ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ, ಅಮಾನವೀಯವಾಗಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.


‘ಹಲ್ಲೆಗೊಳಗಾಗಿರುವ ಸಂತ್ರಸ್ತೆಯು ಮಂಗಳಮುಖಿಯಲ್ಲ, ಯುವತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ತೃತೀಯಲಿಂಗಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ತೃತೀಯ ಲಿಂಗಿಗಳಾದ ಕೊಪ್ಪಳ ಜಿಲ್ಲೆ ಕಾರಟಗಿ ತಾಲ್ಲೂಕಿನ ಬಸವಣ್ಣ ಕ್ಯಾಂಪಿನ ಜಿ.ಹುಲಗೆಮ್ಮ(26), ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಸತಾಳ ಗ್ರಾಮದ ಕವಿತಾ(26), ಯಾದಗಿರಿ ಜಿಲ್ಲೆ ನಾರಾಯಣಪುರದ ಮಹಾನಮ್ಮ(48), ವಿಜಯಪುರ ಜಿಲ್ಲೆ ತಾಳಿಕೋಟೆ ತಾಲ್ಲೂಕು ಕೊಣ್ಣೂರಿನ ಅಶ್ವಿನಿ(23) ಹಾಗೂ ಯಾದಗಿರಿ ಜಿಲ್ಲೆ ಗದ್ದೆಮ್ಮಕಟ್ಟೆಯ ಬಸಮ್ಮ(28) ಎಂಬುವವರನ್ನು ಬಂಧಿಸಲಾಗಿದ್ದು, ಇನ್ನೊಬ್ಬ ತೃತೀಯ ಲಿಂಗಿ ಪರಾರಿಯಾಗಿರುವುದಾಗಿ ಅವರು ಹೇಳಿದರು.

ಬಂಧಿತ ಎಲ್ಲ ಆರೋಪಿಗಳು ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ನೆಲೆಸಿದ್ದು, ಅಲ್ಲಿಂದ ಬಂದು ಈ ಕೃತ್ಯ ಎಸಗಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಲಲಿತ್‌ ಮಹಲ್‌ ಹೋಟೆಲ್‌ ಎದುರು ಜೂನ್‌ 21ರಂದು ಪ್ರಕರಣ ನಡೆದಿತ್ತು. ಆದರೆ, ಈ ಬಗ್ಗೆ ಯಾರೂ ದೂರು ನೀಡಿರಲಿಲ್ಲ. ಪೊಲೀಸರ ಗಮನಕ್ಕೂ ಬಂದಿರಲಿಲ್ಲ ಎಂದರು.

ಜುಲೈ 31ರಂದು ಹಲ್ಲೆ ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‍ವಿಷಯ ಗಮನಕ್ಕೆ ಬರುತ್ತಿದ್ದಂತೆ ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ತಂಡ ರಚಿಸಲಾಗಿತ್ತು. ಕೇವಲ 24 ತಾಸಿನೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಹಲ್ಲೆಗೊಳಗಾದ ಯುವತಿಯು ವಿಜಯಪುರ ಸಮೀಪದ ಅರಕೇರಿ ಗ್ರಾಮದವಳಾಗಿದ್ದು, ಪುಣೆಯಲ್ಲಿ ತೃತೀಯಲಿಂಗಿಗಳ ಜೊತೆಗೆ ಇದ್ದಳು. ಅವರ ನಡುವೆ ವೈಯಕ್ತಿಕ ಕಾರಣಕ್ಕೆ ಭಿನ್ನಾಭಿಪ್ರಾಯ ಉಂಟಾದ ಬಳಿಕ ಯುವತಿಯು ವಿಜಯಪುರಕ್ಕೆ ಮರಳಿದ್ದಾಳೆ. ಆರೋಪಿಗಳು ಹುಡುಕಿಕೊಂಡು ಬಂದು ಹಲ್ಲೆ ನಡೆಸಿ, ವಾಪಸ್‌ ಪುಣೆಗೆ ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದರು.

ವ್ಯಾಪಕ ಖಂಡನೆ: ಯುವತಿಯನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿರುವ ದೃಶ್ಯವನ್ನು ಕಂಡು ಸಾರ್ವಜನಿಕರು, ವಿವಿಧ ಸಂಘ,ಸಂಸ್ಥೆಗಳು, ರಾಜಕೀಯ ಪಕ್ಷಗಳ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು