Youth come forward to pay the country's debt: Emperor's dowry

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲೇ ಬೇಕು. ಅವುಗಳೊಂದಿಗೆ ಇನ್ನೊಂದು ಋಣ ಸೇರಿಸಿಕೊಳ್ಳಬೇಕು. ಅದು ದೇಶದ ಋಣ ಎಂದು ನಾಡಿನ ಪ್ರಖರ ವಾಗ್ಮಿ, ಯುವ ಬ್ರಿಗೇಡ್, ಮಾರ್ಗದರ್ಶಕ ಚಕ್ರವರ್ತಿ
ಸೂಲಿಬೆಲಿ ಹೇಳಿದರು.

ಬುಧವಾರ ಅವರು ಪಟ್ಟಣದ ಮರಡಿ ಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಶಿವಾಚಾರ್ಯ ಶ್ರೀಗಳ ದ್ವಾದಶ ಪಟ್ಟಾಧಿಕಾರ ಮಹೋತ್ಸವ ಹಾಗೂ ಮೌನ ಯೋಗಿಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿ, ಮಠ ಇರೋದು ಈ ಋಣಗಳನ್ನು ನಾವು ತೀರಿಸಲು ಪ್ರೇರಣೆ ಕೊಡುವುದಕ್ಕಾಗಿ. ಕಾರಣ ನಿಮ್ಮ ಮಕ್ಕಳಿಗೆ ಮಠಗಳಿಗೆ ಕಳಿಸಿ. ಈ ಐದು ಋಣಗಳ ಜೊತೆಗೆ ಮತ್ತೊಂದು ಋಣ ನಾವು ಸೇರಿಸಿಕೊಳ್ಳಬೇಕು. ಅದು ದೇಶದ ಋಣ. ಯಾವ ಊರಿನಲ್ಲಿ ಗುರುಸೇವೆ ಅತ್ಯಂತ ಭಕ್ತಿಯಿಂದ ನಡೆಯುತ್ತದೋ ಆ ಊರಿಗೆ ಭಗವಂತ ಎಂದೂ ಮೋಸ ಮಾಡುವುದಿಲ್ಲ ಎನ್ನುವುದಕ್ಕೆ ಈ ನಾಡಿನ ಪರಂಪರೆಯೇ
ಸಾಕ್ಷಿಯಾಗಿದೆ. ಮಠದ ಸ್ವಾಮಿಗಳ ಪೀಠ ಮುಳ್ಳಿನ ಹಾಸಿಗೆ ಇದ್ದಂತೆ. ಅದರ ಮೇಲೆ ಕುಳಿತಿರುವ ಸ್ವಾಮಿಗಳು ಭಕ್ತರ ಕಲ್ಯಾಣಕ್ಕಾಗಿ
ದೇವರಿಗೆ ಸದಾ ಪ್ರಾರ್ಥಿಸುತ್ತಾರೆ. ನಾನು ಯಾವುದೇ ಧರ್ಮ, ಮತದ ವಿರೋಧಿಯಲ್ಲ. ಹಿಂದು ಧರ್ಮದ ಉತ್ಕೃಷ್ಟವಾದ ಅಭಿಮಾನಿ ಅಂತ ಅಂದುಕೊಳ್ಳಿ ಎಂದರು.

ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೇ ದಾಳಿ ಮಾಡಿದ್ದಾರೆ. ಈ ದೇಶದ ಪ್ರವಾಸಿ ಜನ ಕಾಶ್ಮೀರಕ್ಕೆ ಸುತ್ತಾಡಿಕೊಂಡು ಬರಲು ಹೋದವರ ಮೇಲೆ ದಾಳಿ ಮಾಡಿದ್ದಾರೆ. ಪ್ರವಾಸಿಗರಿಗೆ ಹೆಸರು, ಧರ್ಮ ಕೇಳಿ ಹಿಂದುಗಳನ್ನಷ್ಟೇ ಕೊಂದಿದ್ದಾರೆ. ಹೆಣ್ಣು
ಮಕ್ಕಳನ್ನು ಬಿಟ್ಟಿದ್ದಾರೆ. ನಮ್ಮನ್ನು ಯಾಕೆ ಬಿಟ್ಟಿದ್ದಿರಿ ನಮ್ಮನ್ನು ಕೊಂದು ಬಿಡಿ ಎಂದಿದ್ದಕ್ಕೆ, ಅದು ಇಂದು ಪುನರ್‌ನಿರ್ಮಾಣವಾಗಬೇಕಿದೆ.
ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ನೀಡಬೇಕಿದೆ. ಮೊಬೈಲ್, ಟಿವಿ ಹಾವಳಿಯಿಂದ ಮುಕ್ತಗೊಳಿಸಬೇಕಾಗಿದೆ. ಯುವಕರು ದೇಶಭಕ್ತಿ ಬೆಳೆಸಿಕೊಳ್ಳಬೇಕು. ಹಿಂದು ಧರ್ಮವನ್ನು ಬಿಟ್ಟು ನಿನ್ನೆ ಮೊನ್ನೆ ಹುಟ್ಟಿದ ಧರ್ಮಕ್ಕೆ ಹೋಗಿ ಮತಾಂತರವಾಗುವವರಿಗೆ ಹೇಳಿ, ಹಿಂದೂ ಧರ್ಮ ಅತ್ಯಂತ ಹಳೆಯದಾದ ಧರ್ಮ ಅಂತ ಎಂದರು.

ವೇದಿಕೆ ಮೇಲೆ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಶ್ರೀಗಳು, ನಿಡಗುಂದಿಕೊಪ್ಪದ ಚನ್ನಬಸವ ಶ್ರೀಗಳು, ಕೆಲ್ಲೂರದ ಶಿವಕುಮಾರ ದೇವರು ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಮೃತಶಿಲಾ ಮೂರ್ತಿಯ ಭಕ್ತಿ ಸೇವೆ ಜರುಗಿತು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.