Militant attack in Pahalgam: Labor Minister Santosh Lad brought 178 tourists from the state to safety

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ

ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ಹಿನ್ನೆಲೆಯಲ್ಲಿ 178 ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಬೆಂಗಳೂರಿಗೆ ಸುರಕ್ಷಿತವಾಗಿ ಕರೆತಂದರು.

ಕಾಶ್ಮೀರದಲ್ಲಿ ನಡೆದ ದಾಳಿ ನಂತರ ರಾಜ್ಯ ಸರ್ಕಾರದ ಪರವಾಗಿ ಸಚಿವ ಲಾಡ್‌ ಅವರನ್ನು ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳುಹಿಸಿದ್ದರು.

ಕಳೆದ ಎರಡು ದಿನಗಳಿಂದ ಅವಿರತವಾಗಿ, ಬಿಡುವಿಲ್ಲದೆ ಪಹಲ್ಗಾಂನಲ್ಲಿ ಸಚಿವ ಲಾಡ್‌ ಅವರು ಕನ್ನಡಿಗ ಪ್ರವಾಸಿಗರನ್ನು ಭೇಟ ಮಾಡಿ ಅವರಿಗೆ ರಾಜ್ಯಕ್ಕೆ ಮರಳಲು ಮಾಹಿತಿ ನೀಡಿ ವಿಮಾನ ನಿಲ್ದಾಣಕ್ಕೆ ಬರಲು ತಿಳಿಸಿದ್ದರು. ಇದೀಗ 178 ಕನ್ನಡಿಗ ಪ್ರವಾಸಿಗರು ಶ್ರೀನಗರ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಪಹಲ್ಗಾಂನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹತ್ಯೆಯಾದ ಕನ್ನಡಿಗರ ಕುಟುಂಬಗಳನ್ನೂ ಭೇಟಿ ಮಾಡಿದ್ದ ಸಚಿವ ಲಾಡ್‌ ಅವರು ಸಾಂತ್ವನ ಹೇಳಿ ಧೈರ್ಯ ತುಂಬಿದ್ದರು.

ಬೇರೆ ಬೇರೆ ಸ್ಥಳಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಭೇಟಿ ಮಾಡಿ ತಾವು ಯಾವಾಗ ಕರ್ನಾಟಕಕ್ಕೆ ಮರಳಲು ವಿಮಾನದ ಟಿಕೆಟ್‌ ಗಳನ್ನು ಬುಕ್‌ ಮಾಡಿದ್ದೀರಿ ಎಂಬ ಮಾಹಿತಿಯನ್ನು ಕಲೆ ಹಾಕಿದ್ದರು. ವಿಮಾನದ ಟಿಕೆಟ್‌ ಬುಕ್‌ ಮಾಡದವರಿಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿ ಲಾಡ್‌ ಅವರು ಪ್ರವಾಸಿಗರೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ.

ಸಚಿವ ಲಾಡ್‌ಗೆ ಅವರಿಗೆ ಕೃತಜ್ಞತೆ

ಕಾಶ್ಮೀರದಿಂದ ಬೆಂಗಳೂರಿಗೆ ಮರಳಲು ವ್ಯವಸ್ಥೆ ಮಾಡಿದ ಸಚಿವ ಸಂತೋಷ್‌ ಲಾಡ್‌ ಅವರಿಗೆ ಪ್ರವಾಸಿಗರು ಕೃತಜ್ಷತೆ ಸಲ್ಲಿಸಿದ್ದಾರೆ. ಊರಿಗೆ ಮರಳುವ ಆತಂಕ ಮತ್ತು ಭಯದಲ್ಲಿ ಇದ್ದವರಿಗೆ ದೇವರಂತೆ ಸಚಿವರು ಬಂದು ಇಲ್ಲಿಗೆ ಕರೆತಂದರು. ಇವರ ಸಹಾಯವನ್ನು ಎಂದೂ ಮರೆಯಲಾಗದು ಎಂದು ಪ್ರವಾಸಿಗರೊಬ್ಬರು ಹೇಳಿದ್ದಾರೆ.

ಎಲ್ಲಿ ಅವಘಡ ಸಂಭವಿಸಿದ್ದರೂ ಅಲ್ಲಿಗೆ ಲಾಡ್‌ ಭೇಟಿ

ಕರ್ನಾಟಕದ ಹೊರಗೆ ಯಾವುದೇ ರೀತಿಯ ಅವಘಡಗಳು ಸಂಭವಿಸಿದರೂ ಅಂತಹ ಸಂದರ್ಭದಲ್ಲಿ ಸಂತೋಷ್‌ ಲಾಡ್‌ ಅವರು ಭೇಟಿ ನೀಡಿ ಕನ್ನಡಿಗರ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಕೆಲವು ವರ್ಷಗಳ ಹಿಂದೆ ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿದಾಗ ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುವ ಜವಾಬ್ದಾರಿಯನ್ನು ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಲಾಡ್‌ ಅವರಿಗೆ ವಹಿಸಿದ್ದರು.

ಒಡಿಶಾದಲ್ಲಿ ಭಾರಿ ರೈಲು ದುರಂತ ನಡೆದಾಗಲೂ ಸಚಿವ ಲಾಡ್‌ ಅವರು ಕನ್ನಡಿಗರ ರಕ್ಷಣೆಗೆ ತೆರಳಿದ್ದರು. ಅದಾದ ನಂತರ ವಯನಾಡಿನಲ್ಲಿ ಉಂಟಾಗಿದ್ದ ಜಳಪ್ರಳಯದ ವೇಳೆ ಸ್ವತಃ ಲಾಡ್‌ ಅವರು ಹೋಗಿದ್ದರು. ಇದೀಗ ಪಹಲ್ಗಾಂಗೂ ಅವರು ಹೋಗಿ ಜನರನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.

Latest News

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ) ಶಾಲೆಯ ಸನ್

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಜೆಡಿಎಸ್ ಪಕ್ಷದಿಂದ ಬೃಹತ್ ಪ್ರತಿಭಟನೆ : ಕಾಂಗ್ರೆಸ್ ಸರ್ಕಾರ ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೂಡಲೇ ಸರ್ಕಾರವನ್ನು ರಾಜ್ಯಪಾಲರು ವಜಾಗೊಳಿಸಬೇಕೆಂದು ಆಗ್ರಹಿಸಿ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ ಇದೇ 29 ನೇ ಭಾನುವಾರ ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಅರಮನೆ ಮೈದಾನದ ದಿ ಗ್ರಾಂಡ್‌ ಕ್ಯಾಸಲ್‌, ಗೇಟ್‌ ಸಂಖ್ಯೆ 6 ರಲ್ಲಿ ಸಂಜೆ 5 ರಿಂದ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಯೋಗದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ ವಿಶ್ವದ ಐವರು ಶ್ರೇಷ್ಠ ಯೋಗ ಸಾಧಕರಿಗೆ ಪ್ರಶಸ್ತಿ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ ಅಣೆಕಟ್ಟೆ ನಿಂದ 1,10,000 ಕ್ಯೂಸೆಕ್ ನೀರು ಬಿಡುವ ಸಾಧ್ಯತೆ

ನಾರಾಯಣಪುರ : ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇರುತ್ತದೆ. ಕೃಷ್ಣಾ ನದಿಗೆ ಹೊರಹರಿವು 84,445 ಕ್ಯೂಸೆಕ್ ಇರುವದರಿಂದ ಆಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಲಿದೆ ಎಂದು ಪರಿಗಣಿಸಲಾಗಿದೆ. ನಾರಾಯಣಪುರ ಆಣೆಕಟ್ಟೆಗೆ ಸುಮಾರು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆಯಿದೆ. ಮದ್ಯಾಹ್ನ 3 ಗಂಟೆ ನಂತರ, ಪ್ರಸ್ತುತ ಇರುವ ಹೊರಹರಿವನ್ನು 84,445 ಕ್ಯೂಸೆಕ್ ರಿಂದ 1,10,000 ಕ್ಯೂಸೆಕ್ ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು