462nd rank for son of primary school teacher inspired by parents to write UPSC exam

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಯುಪಿಎಸ್‌ಸಿ ಪರೀಕ್ಷೆ ಬರೆಯಲು ತಂದೆ-ತಾಯಿಯೇ ಸ್ಫೂರ್ತಿಪ್ರಾಥಮಿಕ ಶಾಲಾ ಶಿಕ್ಷಕನ ಪುತ್ರನಿಗೆ 462ನೇ ರ‍್ಯಾಂಕ್

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಂದೆ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ, ತಾಯಿ ಗೃಹಿಣಿ. ವಾಸಿಸುವುದಕ್ಕೆ ಸ್ವಂತ ಮನೆಯೂ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡೇ ಪಟ್ಟಣದ ಯುವಕರೊಬ್ಬರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 462ನೇ ರ‍್ಯಾಂಕ್ ಪಡೆದುಕೊಂಡು ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಮುದ್ದೇಬಿಹಾಳ ಪಟ್ಟಣದ ಮಹಾಂತೇಶ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶಿಕ್ಷಕ ಚೆನ್ನಪ್ಪ ಯರಂತೇಲಿ ಹಾಗೂ ಸುಮಿತ್ರಾ ದಂಪತಿ ಪುತ್ರ ರಾಹುಲ್ ಯರಂತೇಲಿ ಅವರಿಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 462ನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಈ ಕುರಿತು ಪತ್ರಕರ್ತರೊಂದಿಗೆ ಸಂತಸ ಹಂಚಿಕೊಂಡ ರಾಹುಲ್ ಅವರು, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಇದು ನನ್ನ ಆರನೇ ಪ್ರಯತ್ನವಾಗಿತ್ತು. ಮೂರು ಬಾರಿ ಮುಖ್ಯಪರೀಕ್ಷೆ ಬರೆದಿದ್ದೆ. ಆದರೆ ವಿಫಲನಾಗಿದ್ದೆ. ಆದರೆ ನಾಲ್ಕನೇ ಬಾರಿ ಮುಖ್ಯಪರೀಕ್ಷೆ ಉತ್ತೀರ್ಣನಾಗಿ ಸಂದರ್ಶನ ಮುಗಿಸಿದ್ದು ಇದೀಗ 462ನೇ ರ‍್ಯಾಂಕ್ ಬಂದಿದೆ ಎಂದು ತಿಳಿಸಿದರು.

ನಿತ್ಯವೂ 7-8 ತಾಸು ಓದುತ್ತಿದ್ದೆ. ಯುಪಿಎಸ್‌ಸಿಗೆಂದೇ ಬೆಂಗಳೂರು ಡಾ. ರಾಜಕುಮಾರ ಅಕಾಡೆಮಿ ಫಾರ್ ಸಿವ್ಹಿಲ್ ಸರ್ವಿಸ್‌ನಲ್ಲಿ 10 ತಿಂಗಳು ತರಬೇತಿ ಪಡೆದುಕೊಂಡಿದ್ದೆ. ಪ್ರಾಥಮಿಕ ಶಾಲೆಯಲ್ಲಿದ್ದಾಗಲೇ ಐಎಎಸ್ ಕನಸು ಇತ್ತು. ಹುದ್ದೆಯ ಬಗ್ಗೆ ಇರುವ ಆಸಕ್ತಿ, ಗೌರವದಿಂದ ಸಾರ್ವಜನಿಕ ಸೇವೆ ಮಾಡಲು ಈ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ. ಐಪಿಎಸ್ ಹುದ್ದೆ ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ರಾಹುಲ್ ಅವರ ತಂದೆ, ಪ್ರಾಥಮಿಕ ಶಾಲೆಯ ಶಿಕ್ಷಕ ಚೆನ್ನಪ್ಪ ಯರಂತೇಲಿ ಮಾತನಾಡಿ, ಮೂಲತಃ ಬ.ಬಾಗೇವಾಡಿ ತಾಲ್ಲೂಕು ಮಸೂತಿ ಗ್ರಾಮದವರಾಗಿರುವ ಯರಂತೇಲಿ ಕುಟುಂಬ ಮುದ್ದೇಬಿಹಾಳದಲ್ಲಿಯೇ ಕಳೆದ 30 ವರ್ಷಗಳಿಂದ ನೆಲೆಸಿದ್ದೇವೆ. ಮುದ್ದೇಬಿಹಾಳ ತಾಲ್ಲೂಕು ಇಣಚಗಲ್‌ನಲ್ಲಿ ಮೊದಲು ಸೇವೆಗೆ ಸೇರಿದಾಗ ತಿಂಗಳಿಗೆ 1750 ವೇತನ ಇತ್ತು. ಮಕ್ಕಳಿಗೆ ಕಷ್ಟಪಟ್ಟು ಓದಿಸಿದ್ದೇವೆ. ನಾನು ಇಣಚಗಲ್, ಕೋಳೂರು, ಅಡವಿ ಸೋಮನಾಳ ಹಾಗೂ ಸದ್ಯಕ್ಕೆ ಗೋನಾಳ ಪಿಎನ್ ಎಚ್‌ಪಿಎಸ್ ಶಾಲೆಯ ಮುಖ್ಯಶಿಕ್ಷಕನಾಗಿದ್ದುಕೊಂಡು ಸೇವೆ ಸಲ್ಲಿಸುತ್ತಿದ್ದೇನೆ. ಮಗನ ಸಾಧನೆ ತುಂಬಾ ಖುಷಿಕೊಟ್ಟಿದೆ. ಮಗನ ಸಾಧನೆಯಲ್ಲಿ ಅವರ ತಾಯಿಯ ಪಾತ್ರ ಅವಿಸ್ಮರಣೀಯ ಎಂದು ಹೇಳಿದರು.

ರಾಹುಲ್ ಅವರ ತಾಯಿ ಸುಮಿತ್ರಾ ಮಾತನಾಡಿ, ಮಕ್ಕಳಿಗೆ ಆಸ್ತಿ ಮಾಡಿಡದೇ ಅವರಿಗೆ ಶಿಕ್ಷಣ ಕೊಡುವ ಕೆಲಸ ಮಾಡೋಣವೆಂದು ನಿರ್ಧರಿಸಿ ಓದಿಸಿದ್ದೇವು. ಕಷ್ಟದ ಪರಿಸ್ಥಿತಿಯಲ್ಲೂ ಮಗ ಉನ್ನತ ಸಾಧನೆ ತೋರಿದ್ದಾನೆ. ಹುಟ್ಟಿಬೆಳೆದ ಊರಿಗೆ, ನಮ್ಮ ತವರು ಮನೆಗೆ ಹೆಸರು ತಂದಿದ್ದಾನೆ ಎಂದು ಹರ್ಷ ವ್ಯಕ್ತಪಡಿಸಿದರು.

ಶಿಕ್ಷಕ ಚೆನ್ನಪ್ಪ ಯರಂತೇಲಿ ಅವರ ಸಹದ್ಯೋಗಿಗಳಾಗಿ ಕೆಲಸ ಮಾಡುತ್ತಿರುವ ಶಿಕ್ಷಕ ಸಿದ್ಧನಗೌಡ ಕಾಶಿನಕೂಂಟಿ, ನಿವೃತ್ತ ಶಿಕ್ಷಕ ಎಸ್.ಎ.ಬೇವಿನಗಿಡದ, ಸಿ.ಜಿ.ನಾಗರಾಳ ಅವರು ಸಾಧನೆಗೈದ ರಾಹುಲ್ ಯರಂತೇಲಿ ಅವರನ್ನು ಸನ್ಮಾನಿಸಿದರು.

ನನ್ನ ಪ್ರಾಥಮಿಕ ಶಾಲೆಯ ಶಿಕ್ಷಣ ಇಣಚಗಲ್ ಗ್ರಾಮದಲ್ಲಿ, 6-12ನೇ ತರಗತಿಯವರೆಗೆ ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದೇನೆ. ನಂತರ ಬಿಇ ಕಂಪ್ಯೂಟರ್ ಸೈನ್ಸ್ ನಲ್ಲಿ ಬೆಂಗಳೂರಿನ ಎಂಯುಜೆ ಕಾಲೇಜಿನಲ್ಲಿ ಓದಿದ್ದೇನೆ. ಸಣ್ಣ ಪುಟ್ಟ ಇನ್ಸಿಟ್ಯೂಟ್‌ನಲ್ಲಿ ಕೆಲಸ ಮಾಡಿ ನನ್ನ ಖರ್ಚುಗಳಿಗೆ ಹಣ ಹೊಂದಿಸಿಕೊಳ್ಳುತ್ತಿದ್ದೆ. ನನ್ನ ತಂದೆ ತಾಯಿಯಿವರ ಸ್ಪೂರ್ತಿ, ಪ್ರೋತ್ಸಾಹದಿಂದಲೇ ಇಂದು ಈ ಸಾಧನೆ ಕಾರಣವಾಗಿದೆ. ಭವಿಷ್ಯದಲ್ಲಿ ಒಳ್ಳೆಯದೊಂದು ಮನೆ ಕಟ್ಟಿ ಅವರನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ.

ರಾಹುಲ್ ಯರಂತೇಲಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ 462ನೇ ರ‍್ಯಾಂಕ್ ಪಡೆದುಕೊಂಡ ಅಭ್ಯರ್ಥಿ

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ