Health Checkup for Mahatma Gandhi National Rural Employment Guarantee Workers

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ

ರಾಜನಕೊಳುರು : ಹುಣಸಗಿ ತಾಲೂಕಿನ ರಾಜನಕೊಳುರು ಗ್ರಾಮದಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಯೋಜನೆಯ ಅಡಿಯಲ್ಲಿ ಬರುವ ಜನರಿಗೆ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರಾಜನಕೊಳುರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸುಮಾರು 240 ಜನ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಮ್ಮ ಮಾತನಾಡಿ, ‘ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ಶಿಬಿರದಲ್ಲಿ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆಯನ್ನು ಮಾಡಲಾಯಿತು.

ಈ ವೇಳೆ ಸ್ಥಳದಲ್ಲಿ ವೈದ್ಯರಾದ ಎಂ. ಬಿ. ಕೋರೆ, A. D. ಶಿವಕುಮಾರ್ ಚೌದ್ರಿ, ಪಿಡಿಓ ಈರಮ್ಮ, ಟಿ. ಸಿ ಸುನಿಲ ಕುಮಾರ್, ಶಾಂತ ಕುಮಾರ, ಮಾಹಾಂತೇಶ ಶೆಟ್ಟಿ, BFT ಲಕ್ಕಪ್ಪ, ಸಂಜೀವಿನಿ, ನಾಗವೇಣಿ, ಕವಿತಾ, ಕುಸಿನ ಮನೆ- ರೇಣುಕಾ, ಭಾಗ್ಯ, ಗ್ರಾಕೋಸಕರು ಮಲ್ಲಮ್ಮ ಕವಿತಾ ಇನ್ನಿತರರು ಉಪಸ್ಥಿತರಿದ್ದರು.

ವರದಿಗಾರ : ಶಿವು ರಾಠೋಡ

Latest News

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ ನಗರದಲ್ಲಿ ಬಕ್ರೀದ್‌ ಶಾಂತಿ ಸಭೆ

ಇಳಕಲ್ಲ: ಹಬ್ಬಗಳನ್ನು ಖಷಿಯಾಗಿರಲು ಆಚರಣೆ ಮಾಡಬೇಕು ವಿನಃ ಸ್ವಾರ್ಥದಿಂದ ಸಮಾಜದ ಸ್ವಾಸ್ಥ ಕೆಡಿಸುವಂತೆ ಇರಬಾರದು. ಅಂಥವರಿಂದ ಎಚ್ಚರಿಕೆಯಿಂದ ಇರಬೇಕು. ಸಮಾಜದಲ್ಲಿ ಶಾಂತಿ ಕದಡುವವರನ್ನು ಇಲಾಖೆ ಬಿಡುವುದಿಲ್ಲ ಎಂದು ಸಿಪಿಐ ಸುನೀಲ್ ಸವದಿ ಹೇಳಿದರು. ಇಳಕಲ್ಲ ನಗರದ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮಂಗಳವಾರ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಮುಖಾಂತರ ಮತ್ತೊಬ್ಬರಿಗೆ ಮಾದರಿಯಾಗಿರಬೇಕು ಎಂದು ತಿಳಿಸಿದರು ಸಾಮಾಜಿಕ ಮಾಧ್ಯಮಗಳು

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.