Power problem: Protest by angry farmers

ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ವಿದ್ಯುತ್ ಸಮಸ್ಯೆ: ರೊಚ್ಚಿಗೆದ್ದ ರೈತರಿಂದ ಪ್ರತಿಭಟನೆ

ಕುಳಗೇರಿ: ಗೊಲಕೊಪ್ಪ, ಬಿರನೂರು, ತಳಕವಾಡ, ಆಲೂರು ಎಸ್. ಕೆ, ಹಾಗನೂರು, ತರಲಕೊಪ್ಪ ಗ್ರಾಮಗಳಿಗೆ ಜನವರಿ ತಿಂಗಳಿನಿಂದ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದೆ ಸತಾಯಿಸುತ್ತಿರುವ ಕುಳಗೇರಿ ಕೆಇಬಿ ಘಟಕದ ಮುಂದೆ ಇಂದು ರೈತರು ಪ್ರತಿಭಟನೆ ಮಾಡಿದ್ದಾರೆ. ಕೆಇಬಿ ಮುಂದೆ ರೈತರು ಕಟ್ಟಿಗೆಗೆ ಬೆಂಕಿ ಹಾಕುವ ಮೂಲಕ ಪ್ರತಿಭಟಿಸಿ, ಸರಿಯಾಗಿ ವಿದ್ಯುತ್ ನೀಡದಿದ್ದರೆ ಓರ್ವ ರೈತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ರೈತ ಕಾಮಣ್ಣ ಧರಿಯಪ್ಪ ಹೆಬ್ಬಳಿ ಎಂಬ ರೈತನೋರ್ವ, ಇನ್ನಮುಂದೆ ತಮ್ಮ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ನೀಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಘಟಪ್ರಭಾ ನದಿ ತೀರದಲ್ಲಿರುವ ಗ್ರಾಮಗಳಿಗೆ ವಿದ್ಯುತ್ ಸಮಸ್ಯೆಯಿಂದಾಗಿ ದಿನನಿತ್ಯ ಬಳಕೆಗೆ ನೀರಿನ ಅಭಾವ ಉಂಟಾಗಿದೆ. ಜನಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳಿಗೆ ನೀರು ಉಣಿಸಲು ಆಗುತ್ತಿಲ್ಲ ಎಂದು ರೈತ ಯಲ್ಲಪ್ಪಗೌಡ ಸಿದ್ದನಗೌಡ ದೇಸಾಯಿಗೌಡ್ರ ನೋವು ತೋಡಿಕೊಂಡರು.

ಸರಿಯಾದ ಸಮಯದಲ್ಲಿ ವಿದ್ಯುತ್ ನೀಡದಿರುವುದರಿಂದ ಸಣ್ಣಮಕ್ಕಳಿಗೆ ರಾತ್ರಿ ಸಮಯದಲ್ಲಿ ಸಮಸ್ಯೆಯಾಗುತ್ತಿದೆ. ಬೇಸಿಗೆ ಸಮಯದಲ್ಲಿ ವಯಸ್ಕರಿಗೂ ತೊಂದರೆ ಆಗುತ್ತಿದೆ. ಆದಕಾರಣ, ನಮ್ಮ ಗ್ರಾಮಗಳಿಗೆ ಸರಿಯಾಗಿ ವಿದ್ಯುತ್ ನೀಡಿ, ನಮ್ಮ ಗ್ರಾಮದ ಲೈನ್ ಮನ್ ಯಾರು ಅವರ ನಂಬರ್ ಹಾಗೂ ಮಾಹಿತಿ ಕೊಡಿ ಎಂದು ರೈತ ಸಂಗನಗೌಡ ಮರಿತಮನಗೌಡ ಶಿವನಗೌಡ್ರ ತಮ್ಮ ಆಕ್ರೋಶವನ್ನು ಹೊರಹಾಕಿದರು.

ವಿದ್ಯುತ್ ಸಮಸ್ಯೆಯಾಗದಂತೆ, ಇನ್ನಮುಂದೆ ಸರಿಯಾದ ಸಮಯದಲ್ಲಿ ವಿದ್ಯುತ್ ನೀಡಲಾಗುವುದು ಎಂದು ಬಾದಾಮಿ ಕೆಇಬಿ‌ ಅಧಿಕಾರಿ ಭರವಸೆ ನೀಡಿದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ