Tributes to the martyrs who were killed by terrorists in Kashmir

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮೃತರಿಗೆ ಶ್ರದ್ಧಾಂಜಲಿ

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಮೃತರಿಗೆ ಶ್ರದ್ಧಾಂಜಲಿ

ವರದಿಗಾರ : ಶಿವು ರಾಠೋಡ

ಹುಣಸಗಿ: ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಭಾರತದ ಪ್ರತಿಯೊಬ್ಬ ಪ್ರಜೆಗಳು ಖಂಡಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಹೇಳಿದರು.

ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದಲ್ಲಿ ಜನರುಜಮ್ಮು ಕಾಶ್ಮೀರ ದಲ್ಲಿ ಉಗ್ರರ ಗುಂಡಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸಭೆಯಲ್ಲಿ ಮಾತನಾಡಿದ ಅವರು, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಈ ಘಟನೆಯನ್ನು ಪಕ್ಷಾತೀತವಾಗಿ ಖಂಡಿಸುತ್ತೇವೆ. ಜಾತಿ, ಊರು ಯಾವುದನ್ನು ಕೇಳದೆ ಧರ್ಮ ಹಿಂದು ಎಂದಿದ್ದಕೆ ಗುಂಡು ಹಾರಿಸಿ ಕೊಲ್ಲುವ ಮನಸ್ಥಿತಿಯ ಉಗ್ರರನ್ನು ಸದೆಬಡಿಯಬೇಕಾಗಿದೆ.

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆoಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕತವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಈ ಘಟನೆಯಲ್ಲಿ ಬಾಗಿಯಾದ ಉಗ್ರರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅವರನ್ನು ಸಾರ್ವಜನಿಕವಾಗಿ ಗುಂಡಿಟ್ಟು ಕೊಲ್ಲಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ ಕಾರ್ಯಕರ್ತ ಬಸವರಾಜ ಮೇಲಿನಮನಿ ಹಾಗೂ ಆನಂದ ಬಾರಿಗಿಡದ ಮಾತನಾಡಿ, ಉಗ್ರರ ಸಂಹಾರಕ್ಕಾಗಿ ಪಕ್ಷಾತೀತವಾಗಿ ಒಗ್ಗೂಡಬೇಕು. ಉಗ್ರರನ್ನ ಮಟ್ಟಹಾಕಲು ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಶಾ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಹಿಂದುಗಳನ್ನೇ ಗುರಿಯಾಗಿಟ್ಟು ದಾಳಿ ಮಾಡಿರುವುದು ಖಂಡನೀಯ. ಉಗ್ರರನ್ನ ಗುಂಡಿಕ್ಕಿಕೊಲ್ಲಲು ನಮ್ಮ ಸೈನಿಕರಿಗೆ ಭಗವಂತ ಶಕ್ತಿ ನೀಡಲಿ. ಈಗಾಗಲೇ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಸದೆಬಡಿದಿದ್ದಾರೆ. ಈ ಘಟನೆಯನ್ನ ಇಡೀ ವಿಶ್ವವೇ ಖಂಡಿಸುತ್ತದೆ. ಎಲ್ಲರನ್ನ ಮಟ್ಟಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಕ್ರಮ ಕೈಗೊಳ್ಳಲಿ ಎಂದರು.

ಡಾ. ಯುಸುಫ್ ಡೆಕ್ಕನ್ ಮಾತನಾಡಿ, ಉಗ್ರರಿಗೆ ಸಹಕಾರ ನೀಡುತ್ತಿರುವ ಸ್ಥಳೀಯ ದೇಶದ್ರೋಹಿಗಳನ್ನು ಮೊದಲು ಮೊಟ್ಟಹಾಕಬೇಕಾಗಿದೆ. ಉಗ್ರರಿಗೆ ಕಠಿಣವಾದ ಶಿಕ್ಷೆ ನಮ್ಮ ಸೈನಿಕರಿಂದ ಆಗಲಿ ಎಂದು ಹೇಳಿದರು.

ನಂತರ ಘಟನೆಯಲ್ಲಿ ಮೃತಪಟ್ಟವರಿಗೆ ಒಂದು ನಿಮಿಷದ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಂದುಲಾಲ ಠವಾಣಿ, ಬಸವರಾಜ ಸಜ್ಜನ್, ಸಂಗಮೇಶ ಸಜ್ಜನ್, ಮಲ್ಲಯ್ಯ ನಂದಿಕೋಲ, ಗುಂಡು ಅಂಗಡಿ, ರೇಣುಕಾ ಪೌಜದಾರ, ಲಕ್ಷ್ಮಿ ಮೇದಾ, ಪಾರ್ವತಿ ಯಾಳವಾರ, ಆನಂದ ಬಾರಿಗಿಡದ, ವೆಂಕಟೇಶ ಅರಳಿಗಿಡದ, ರಮೇಶ ಮಿರಜಕರ್, ಮಹೇಶ ಸ್ಥಾವರಮಠ, ಶರಣಗೌಡ ಗೆಣ್ಣೂರು, ದೇವು ಬೈಚಬಾಳ, ರಮೇಶ ವಾಲಿ, ಸೇರಿದಂತೆ ಪಟ್ಟಣದ ಮುಖಂಡರು ಯುವಕರು ಪಾಲ್ಗೊಂಡಿದ್ದರು.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.