Inauguration of Gramdevate Jatre Office: Determination for the success of the fair with the cooperation of all the society

ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಗ್ರಾಮದೇವತೆ ಜಾತ್ರೆ ಕಾರ್ಯಾಲಯ ಉದ್ಘಾಟನೆ: ಸರ್ವ ಸಮಾಜದವರ ಸಹಕಾರದಿಂದ ಜಾತ್ರೆ ಯಶಸ್ವಿಗೆ ನಿರ್ಣಯ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯನ್ನು ಮೇ. 30 ರಿಂದ ಐದು ದಿನಗಳ ಕಾಲ ಜರುಗಿಸಲಾಗುತ್ತಿದ್ದು ಸರ್ವ ಸಮಾಜದವರನ್ನು ಒಳಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಲು ಇಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಕಮೀಟಿ ಪ್ರಮುಖರು ನಿರ್ಣಯ ಕೈಗೊಂಡರು.

ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಆವರಣದಲ್ಲಿರುವ ಸಂಗಮೇಶ್ವರ ವಸತಿ ನಿಲಯದ ಪಕ್ಕದ ದಾಸೋಹ ಕೋಣೆಯಲ್ಲಿ ಶುಕ್ರವಾರ ಆರಂಭಿಸಲಾದ ಗ್ರಾಮದೇವತೆ ಜಾತ್ರಾ ಕಾರ್ಯಾಲಯ ಉದ್ಘಾಟನೆ ಬಳಿಕ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಕಮೀಟಿ ಮುಖಂಡ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ಮಾತನಾಡಿ, ಜಾತ್ರೆಯನ್ನು ಯಶಸ್ವಿಗೊಳಿಸಲು ಹಲವು ಸಮೀತಿಗಳನ್ನು ರಚಿಸಲಾಗುತ್ತಿದ್ದು ಹಿಂದಿನ ಜಾತ್ರೆಯಲ್ಲಿ ನೇತೃತ್ವ ವಹಿಸಿದ್ದವರ ಜೊತೆಗೆ ಇನ್ನುಳಿದವರನ್ನು ಸಮೀತಿಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಸಲಹೆ ಮಾಡಲಾಯಿತು. ವಿಬಿಸಿ ಹೈಸ್ಕೂಲ್ ಆಡಳಿತ ಮಂಡಳಿಯವರೇ ಜಾತ್ರೆಯ ಶೇ.60-70ರಷ್ಟು ಖರ್ಚನ್ನು ಶಾಲೆಯ ಮೈದಾನವನ್ನು ಬಾಡಿಗೆಗೆ ನೀಡುವ ಮೂಲಕ ಭರಿಸಲು ಒಪ್ಪಿರುವುದಕ್ಕೆ ಕಮೀಟಿ ಪರವಾಗಿ, ಊರಿನ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದರು.

ಹಣಕಾಸು, ಪ್ರಚಾರ, ಮೆರವಣಿಗೆ, ಆಹಾರ, ಮುದ್ರಣ, ಸಾಂಸ್ಕೃತಿಕ, ಅಲಂಕಾರ ಸೇರಿದಂತೆ ಹಲವು ಸಮೀತಿಗಳನ್ನು ರಚಿಸಲಾಗುತ್ತದೆ ಎಂದು ಹೇಳಿದರು.

ವೀರಶೈವ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಗೌರವ ಕಾರ್ಯದರ್ಶಿ ಎಂ. ಬಿ. ನಾವದಗಿ ಮಾತನಾಡಿ, ಜಾತ್ರೆಯನ್ನು ಸರ್ವ ಸಮಾಜದವರ ಸಹಕಾರದಿಂದ ಯಶಸ್ವಿಗೊಳಿಸೋಣ. ಹಿಂದಿನ ಸಮೀತಿಯಲ್ಲಿ ಆರ್ಥಿಕ ಶಿಸ್ತು ಕಾಪಾಡಿಕೊಂಡಿದ್ದು ಅವರನ್ನೇ ಮುಂದುವರೆಸಲು ಈಚೇಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಎಲ್ಲರೂ ಒಗ್ಗೂಡಿ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದರು.

ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಮಾತನಾಡಿ, ಜಾತ್ರೆಯ ಯಶಸ್ವಿಗಾಗಿ ರಚಿಸಲಾಗುವ ಸಮೀತಿಗಳಲ್ಲಿ ಇನ್ನಷ್ಟು ಸದಸ್ಯರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಆಸಕ್ತರು ವಿವಿಧ ಕಮೀಟಿಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿದರೆ ಪರಿಶೀಲನೆ ನಡೆಸಿ ಪರಿಗಣಿಸಲಾಗುವುದು ಎಂದರು.

ವಕೀಲರ ಸಂಘದ ಅಧ್ಯಕ್ಷ ಎಸ್. ಎಸ್. ಮಾಲಗತ್ತಿ, ಕಾಂಗ್ರೆಸ್ ಮುಖಂಡ ಅಬ್ದುಲ್ ಗಫೂರ್ ಮಕಾನದಾರ ಮಾತನಾಡಿ, ಕಳೆದ ಬಾರಿ ರಚಿಸಿದ್ದ ಸಮಿತಿಯವರಲ್ಲಿ ಪ್ರಮುಖರಿಗೆ ಸಮಿತಿ ರಚಿಸಲು ಅವಕಾಶ ಕಲ್ಪಿಸಿ ಗೊಂದಲಕ್ಕೆ ಆಸ್ಪದ ಇಲ್ಲದಂತೆ ಜಾತ್ರೆಯನ್ನು ನಡೆಸಿ ಎಂದರು.

ಕರ್ನಾಟಕ ಬ್ಯಾಂಕ್ ಮಾಜಿ ನಿರ್ದೇಶಕ ವೆಂಕನಗೌಡ ಪಾಟೀಲ ಮಾತನಾಡಿ, ಗ್ರಾಮದೇವತೆ ಜಾತ್ರೆಯ ಸಮೀತಿಗಳಲ್ಲಿ ಯುವಕರಿಗೆ ಆದ್ಯತೆ ನೀಡಬೇಕು. ಯಾರನ್ನೋ ಓಲೈಸುವುದಕ್ಕಾಗಿ ಮೆಚ್ಚಿಸುವುದಕ್ಕಾಗಿ ಸಮೀತಿಯಲ್ಲಿ ಹೆಸರುಗಳನ್ನು ಸೇರಿಸಬೇಡಿ. ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಯಶಸ್ವಿಗೊಳಿಸೋಣ ಎಂದರು.

ಪುರಸಭೆ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಮುಖಂಡರಾದ ಮಲ್ಲಿಕಾರ್ಜುನ ನಾಡಗೌಡ, ಶರಣು ಸಜ್ಜನ, ಸುನೀಲ ಇಲ್ಲೂರ, ಸುಧೀರ ನಾವದಗಿ, ಶಿವಕುಮಾರ ಬಿರಾದಾರ, ರಾಹುಲಗೌಡ ಪಾಟೀಲ, ಬಾಬು ಬಿರಾದಾರ, ಕಾಮರಾಜ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಹುಲಗಪ್ಪ ನಾಯ್ಕಮಕ್ಕಳ, ರಾಜು ಕರಡ್ಡಿ, ಗುರುಸ್ವಾಮಿ ಬೂದಿಹಾಳಮಠ, ಉಮೇಶ ರಾಯನಗೌಡರ, ಶ್ರೀಶೈಲ ಹೂಗಾರ, ಮುತ್ತು ರಾಯಗೊಂಡ ಸೇರಿದಂತೆ ಪುರಸಭೆ ಸದಸ್ಯರು, ಆರ್ಚಕ ಗುಂಡು ಬಡಿಗೇರ ಮೊದಲಾದವರು ಪಾಲ್ಗೊಂಡಿದ್ದರು.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.