ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ರಾಜ್ಯಾಧ್ಯಕ್ಷ (ವಿಜಯೇಂದ್ರ) ಮತ್ತು ಯಡಿಯೂರಪ್ಪ ಕುರಿತು ಹೈಕಮಾಂಡ್ ಗಮನಕ್ಕೆ ತರಬೇಕಿದೆ.

ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಒಂದು ವಾರದೊಳಗೆ ಸೇರಿ, ಸಭೆ ನಡೆಸಿ ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್​ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ.

ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಅಂತಾ ನನಗೆ ಅನ್ನಿಸಿರಲಿಲ್ಲ. ಮೊನ್ನೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಏಜೆಂಟ್ ರೀತಿ ವಿಜಯೇಂದ್ರ ಕೆಲಸ ಮಾಡುದ್ರಲ್ವಾ, ಅವರ ಮುಂದೆ ಫೈಲ್ ತಗೊಂಡ್ ಹೋಗಿ ದಯನೀಯವಾಗಿ ಒಬ್ಬ ರಾಜ್ಯಾಧ್ಯಕ್ಷರು ಪಕ್ಷಕ್ಕೆ ಶೋಭೆಯಲ್ಲ ಎಂದು ನಾ ಮಾತನಾಡಿದ ನಂತರ ಅನೇಕರು ಬಹಳ ಸತ್ಯ ಮಾತನಾಡಿದ್ದೀರಿ. ಈ ರೀತಿಯಾಗಿ ಮಾತನಾಡದೆ ಹೋದರೆ ಪಕ್ಷವೇ ಉಳಿಯುವುದಿಲ್ಲ, ಅನವಶ್ಯಕ ಪಕ್ಷ ಆಗುತ್ತೆ ಅನ್ನೋದು ಎಲ್ಲರ ಮನಸ್ಸಲ್ಲಿ ಇದೆ.

ಈ ಕುರಿತು ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲೆಡೆಯಿಂದ ಪೋನ್ ಬರ್ತಾ ಇದೆ. ಇದರದೇ ಸಭೆಯನ್ನ ಕೆಲವೇ ದಿನಗಳಲ್ಲಿ ಮಾಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ