ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಡಿಕೆ ಶಿವಕುಮಾರ್ ಏಜೆಂಟ್ ವಿಜಯೇಂದ್ರ; ಇದು ಪಕ್ಷ ದ್ರೋಹ ಹೈಕಮಾಂಡ್‌ಗೆ ದೂರು ನೀಡ್ತೀವಿ – ಯತ್ನಾಳ್ ಆರ್ಭಟ

ಬೆಂಗಳೂರು: ಪ್ರತಾಪ್ ಸಿಂಹ ಮತ್ತು ನಾನು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರಿ ಹೋಗ್ತಾ ಇಲ್ಲ, ಅಪ್ಪ, ಮಕ್ಕಳ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ಬಳಿಕ ಖಾಸಗಿ ಸುದ್ದಿವಾಹಿನಿ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವ ರಾಜ್ಯಾಧ್ಯಕ್ಷ (ವಿಜಯೇಂದ್ರ) ಮತ್ತು ಯಡಿಯೂರಪ್ಪ ಕುರಿತು ಹೈಕಮಾಂಡ್ ಗಮನಕ್ಕೆ ತರಬೇಕಿದೆ.

ಸಮಾನ ಮನಸ್ಕರು, ಸೋತ ಅಭ್ಯರ್ಥಿಗಳು, ಗೆದ್ದವರು ಎಲ್ಲರೂ ಕೂಡ ಹೈಕಮಾಂಡ್​ಗೆ ವಿಜಯೇಂದ್ರ ಮತ್ತು ಯಡಿಯೂರಪ್ಪ ಮಾಡಿರುವ ಪಕ್ಷ ವಿರೋಧಿ ಕೆಲಸವನ್ನು ತಿಳಿಸಲು ನಿರ್ಧಾರ ಮಾಡಿದ್ದೇವೆ.

ಮೊದಲು ನಾವೆಲ್ಲರೂ ದೊಡ್ಡ ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಒಂದು ವಾರದೊಳಗೆ ಸೇರಿ, ಸಭೆ ನಡೆಸಿ ಸಭೆಯಲ್ಲಿ ಬರುವ ತೀರ್ಮಾನದಂತೆ ಹೈಕಮಾಂಡ್​ಗೆ ದೂರು ಕೊಡಲು ತೀರ್ಮಾನ ಮಾಡಿದ್ದೇವೆ.

ನಮ್ಮ ಜೊತೆ ಸೇರುವವರು ಬಹಳ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಬಿಜೆಪಿಯಲ್ಲಿ ಇಷ್ಟು ಅಸಮಾಧಾನ ಇದೆ ಅಂತಾ ನನಗೆ ಅನ್ನಿಸಿರಲಿಲ್ಲ. ಮೊನ್ನೆ ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ ಏಜೆಂಟ್ ರೀತಿ ವಿಜಯೇಂದ್ರ ಕೆಲಸ ಮಾಡುದ್ರಲ್ವಾ, ಅವರ ಮುಂದೆ ಫೈಲ್ ತಗೊಂಡ್ ಹೋಗಿ ದಯನೀಯವಾಗಿ ಒಬ್ಬ ರಾಜ್ಯಾಧ್ಯಕ್ಷರು ಪಕ್ಷಕ್ಕೆ ಶೋಭೆಯಲ್ಲ ಎಂದು ನಾ ಮಾತನಾಡಿದ ನಂತರ ಅನೇಕರು ಬಹಳ ಸತ್ಯ ಮಾತನಾಡಿದ್ದೀರಿ. ಈ ರೀತಿಯಾಗಿ ಮಾತನಾಡದೆ ಹೋದರೆ ಪಕ್ಷವೇ ಉಳಿಯುವುದಿಲ್ಲ, ಅನವಶ್ಯಕ ಪಕ್ಷ ಆಗುತ್ತೆ ಅನ್ನೋದು ಎಲ್ಲರ ಮನಸ್ಸಲ್ಲಿ ಇದೆ.

ಈ ಕುರಿತು ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲೆಡೆಯಿಂದ ಪೋನ್ ಬರ್ತಾ ಇದೆ. ಇದರದೇ ಸಭೆಯನ್ನ ಕೆಲವೇ ದಿನಗಳಲ್ಲಿ ಮಾಡ್ತೇವೆ ಎಂದು ಯತ್ನಾಳ್ ಹೇಳಿದ್ದಾರೆ.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು