Protest in front of Narayanpura Police Station over the dead body of a person

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಪ್ರತಿಭಟನೆ

ಹುಣಸಗಿ: ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆ ಮುಂದೆ ವ್ಯಕ್ತಿಯ ಶವವಿಟ್ಟು ಜೋಗಂಡಬಾವಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಜೋಗಂಡಬಾವಿ ಗ್ರಾಮದ ಗೌಡಪ್ಪ ಚವಾನಬಾವಿ ಎಂಬ ವ್ಯಕ್ತಿ ತನ್ನ ಹೊಲದ ಪಕ್ಕದ ಜಮೀನಿನವರೊಂದಿಗೆ ಬದುವಿನ ವಿಚಾರಕ್ಕೆ ಅನೇಕ ಬಾರಿ ಗಲಾಟೆ ನಡೆದಿದೆ, ಗಲಾಟೆಯ ಕುರಿತು ಪೊಲೀಸ್ ಠಾಣೆಗೆ ದೂರು ನೀಡಲು ಬಂದರೆ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಮೃತ ಗೌಡಪ್ಪನ ಪತ್ನಿ ಪೊಲೀಸರ ವಿರುದ್ಧ ಆರೋಪಿಸುತ್ತಿದ್ದಾರೆ.

ಗಲಾಟೆಯಿಂದ ನನ್ನ ಗಂಡ ಸಾವನ್ನಪ್ಪಿದ್ದಾನೆ ಆತನ ಸಾವಿಗೆ ಪೊಲೀಸರು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತ ಗೌಡಪ್ಪನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಮೃತನ ಸಂಬಂಧಿಕರು ಪೋಲಿಸ್ ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತನ ಪತ್ನಿ ಆರೋಪಿಸಿರುವಂತೆ ಈ ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆಯಾ ಅಥವಾ ಈತನ ಸಾವಿನ ಹಿಂದೆ ಏನಾದರೂ ಬೇರೆ ಕಾರಣವಿದೆಯಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕು.

ಈ ಪ್ರಕರಣದ ಕುರಿತು ಪ್ರತಿಭಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪತ್ರಕರ್ತರು ಇದೇ ತಿಂಗಳು 20 ರಂದು, ಅವರ ಸ್ವಂತ ಹೊಲದಲ್ಲಿ ಬಿದ್ದಿದರು ಅದನ್ನು ನೋಡಿದ ಅವರ ಧರ್ಮಪತ್ನಿ ಕೊಡಲೇ ಅವರ ಸಂಬಂಧಿಕರಿಗೆ ವಿಷಯ ತಿಳಿಸಿ ಅವರನ್ನು ಬಾಗಲಕೋಟದ ಕೇರೂಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವಾಗ ಅಲ್ಲಿಯೇ ಎಂ.ಎಲ್.ಸಿ. ಮಾಡಿಸಿದರೆ ಅವಾಗ ನಮ್ಮ ಗಮನಕ್ಕೆ ಬಂದಿರೋದು ಅದನ್ನ ತಿಳಿದ ತಕ್ಷಣವೇ ನಮ್ಮ ಸಿ.ಪಿ.ಐ. ರವಿಕುಮಾರ್ ಅವರು ಖುದ್ದಾಗಿ ಧಾವಿಸಿ ಅಲ್ಲಿಯ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ಪೋಸ್ಟಮಾಟಮ್ ಮಾಡಿಸಿದರು. ಸಾವಿಗೆ ಕಾರಣ ಇಂಟರ್ನಲ್ ಬಿಲ್ಡಿಂಗ್ ನಿಂದ ಸಾವನ್ನು ಅಪ್ಪಿದ್ದಾರೆ. ಪೋಸ್ಟ್ ಮಾರ್ಟಮ್ ರಿಪೋರ್ಟ್ ಬಂದಿಲ್ಲ, ಬಂದ ತಕ್ಷಣ ಮುಂದಿನ ಕ್ರಮ ತಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

ಮೃತವ್ಯಕ್ತಿ ಗೌಡಪ್ಪ (37) ವ್ಯಕ್ತಿಯಾಗಿದ್ದು ಇವರು ಜೋಗಂಡಭಾವಿ ನಿವಾಸಿ, ಇವರಿಗೆ 5 ಜನ ಮಕ್ಕಳು 3 ಹೆಣ್ಣು 2 ಗಂಡು ಮಕ್ಕಳಿದ್ದಾರೆ.

2024 ರಲ್ಲಿ ಇವರ ಕೇಸ್ ಹಾಗೂ ಕೊರ್ಟ್ ಕೇಸ್ ನಾರಾಯಣಪುರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ. ಹಾಗೆ ಎಂ.ಎಲ್.ಸಿ ಮೆರೆಗೆ 21ಕ್ಕೆ ಸಹ, 105 ಪ್ರಕರಣವನ್ನು ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದರು.

ವರದಿ : ಶಿವು ರಾಠೋಡ

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ