Release of Pedagogical Artist Appreciation Book: Social Work by Polish Teachers - Kudalasangama Shri

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಬಿಡುಗಡೆ :ಪೊಲೇಶಿ ಶಿಕ್ಷಕರಿಂದ ಸಮಾಜಮುಖಿ ಕಾರ್ಯ- ಕೂಡಲಸಂಗಮ ಶ್ರೀ

ಮುದ್ದೇಬಿಹಾಳ : ಪ್ರೀತಿ, ಸೇವೆ, ತ್ಯಾಗ,ಮಮತೆ ಮುಂತಾದ ಮಾನವೀಯ ಗುಣಗಳನ್ನು ಒಳಗೊಂಡಿರುವ ಪೋಲೇಶಿ ಶಿಕ್ಷಕರು ಬದುಕಿನುದ್ದಕ್ಕೂ ವಿದ್ಯಾರ್ಥಿಗಳಿಗೆ ಅಕ್ಷರ ದಾಸೋಹದ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ತಾಲ್ಲೂಕು ನೆರಬೆಂಚಿಯ ಎಚ್ಚರೇಶ್ವರ ದೇವಸ್ಥಾನದಲ್ಲಿ ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶ ಅವರ ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಶಿಲ್ಪಿ ಅಭಿನಂದನಾ ಗ್ರಂಥ ಸಂಶೋಧಕರಿಗೆ ಆಕರ ಗ್ರಂಥವಾಗಿದೆ. ಆದರ್ಶ ಶಿಕ್ಷಕರಾದ ನಾಗಪ್ಪ ಪೋಲೇಶಿ ಶಿಕ್ಷಕರ ಬದುಕು ಯುವ ಜನಾಂಗಕ್ಕೆ ಮಾದರಿಯಾದದು ಎಂದು ಹೇಳಿದರು.

ಮುದ್ದೇಬಿಹಾಳ ಎಸ್.ಜಿ.ವ್ಹಿ.ಸಿ ವಿದ್ಯಾ ಪ್ರಸಾರಕ ವಿಶ್ವಸ್ಥ ನಿಧಿಯ ಕಾರ್ಯದರ್ಶಿ ಅಶೋಕ ತಡಸದ ಕಾರ್ಯಕ್ರಮ ಉದ್ಘಾಟಿಸಿ, ಜಗತ್ತಿನಲ್ಲಿ ಶಿಕ್ಷಕರಿಗೆ ಕೊಡುವ ಗೌರವ ಅಪಾರವಾದದ್ದು, ಇಂಥವರ ಬದುಕಿನ ಬಗ್ಗೆ ಗ್ರಂಥ ಮಾಡಿ ಸಾಹಿತ್ಯ ಕ್ಷೇತ್ರಕ್ಕೆ ಕೊಡಮಾಡಿದ ಪ್ರಕಾಶ ನರಗುಂದ ಅವರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಧಾರವಾಡದ ಸಾಹಿತಿ ಸಂಗಮನಾಥ ಲೋಕಾಪುರ ಮಾತನಾಡಿ, ವಿಜಯಪುರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಹಲವಾರು ಮಹನೀಯರ ಕೊಡುಗೆ ಇದೆ. ಬದುಕಿನುದ್ದಕ್ಕೂ ಹಲವಾರು ಕಷ್ಟಗಳನ್ನು ಅನುಭವಿಸಿ ವಿದ್ಯಾರ್ಥಿಗಳಿಗೆ ನೈತಿಕತೆಯ ಬೋಧನೆ ಮಾಡುವುದರ ಮೂಲಕ ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆಯನ್ನಾಗಿ ರೂಪಿಸಿದ್ದಾರೆ ಎಂದರು.

ಗ್ರಂಥದ ಸಂಪಾದಕರಾದ ಎಂ.ಜಿ.ವಿ.ಸಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರಕಾಶ ನರಗುಂದ ಶಿಕ್ಷಣ ಶಿಲ್ಪಿ ಕೃತಿಯ ಬಗ್ಗೆ ವಿವರಿಸಿದರು. ಇಟಗಿ ಗುರುಶಾಂತವೀರ ಶಿವಾಚಾರ್ಯರು, ತಾಲ್ಲೂಕು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಿವಶಂಕರ ಹಿರೇಗೌಡರ, ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಹಾಲಗಂಗಾಧರಮಠ, ಆಲೂರಿನ ಗುರುಲಿಂಗಪ್ಪಗೌಡ ಹಿರೇಗೌಡರ, ಪ್ರೊ. ಎಸ್. ಎಸ್. ಹೂಗಾರ, ನಿವೃತ್ತ ಶಿಕ್ಷಕ ನಾಗಪ್ಪ ಪೊಲೇಶಿ, ಎಂ. ಜಿ. ವಿ. ಸಿ ಕಾಲೇಜಿನ ಪ್ರಾಚಾರ್ಯ ಎಸ್. ಎನ್. ಪೊಲೇಶಿ, ನಾಲತವಾಡದ ನಿವೃತ್ತ ಪ್ರಾಚಾರ್ಯ ಎಸ್. ಎನ್. ಕಂಗಳ, ಪರಶುರಾಮ ಪವಾರ, ಬಿ. ಎ. ಗೂಳಿ ಉಪಸ್ಥಿತರಿದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ