Illegal appointment of municipal staff, accusation of contempt of court: The Chief Minister is responsible for not submitting the report-Project Director warns

ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಪುರಸಭೆ ಸಿಬ್ಬಂದಿ ನೇಮಕ ಅಕ್ರಮ, ನ್ಯಾಯಾಂಗ ನಿಂದನೆ ಆರೋಪ:ವರದಿ ಸಲ್ಲಿಸದಿದ್ದರೇ ಮುಖ್ಯಾಧಿಕಾರಿಯೇ ಹೊಣೆ-ಯೋಜನಾ ನಿರ್ದೇಶಕ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆಯಲ್ಲಿ ಅನಧಿಕೃತವಾಗಿ ನೇಮಕಗೊಂಡಿರುವ ಮತ್ತು ಉಚ್ಛನ್ಯಾಯಾಲಯದ ಆದೇಶ ತಿರುಚಿ ನ್ಯಾಯಾಂಗ ನಿಂದನೆ ಮಾಡಿರುವ ಆರೋಪಗಳ ಕುರಿತಂತೆ ತ್ವರಿತವಾಗಿ ವರದಿ ಸಲ್ಲಿಸುವಂತೆ ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ ಎಂದು ಪುರಸಭೆ ಸದಸ್ಯ ಶಿವು ಶಿವಪೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪುರಸಭೆಯಲ್ಲಿ ನೇಮಕವಾಗಿರುವ ಸಿಬ್ಬಂದಿ ಶಮಶುದ್ದೀನ ಮೂಲಿಮನಿ ಅವರ ನೇಮಕಾತಿ ಅಕ್ರಮವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೇಮಕಾತಿ ಮಾಡಿಕೊಳ್ಳುವುದಕ್ಕೆ ಬರುವುದಿಲ್ಲ ಎಂಬ ಸ್ಪಷ್ಟ ಅಭಿಪ್ರಾಯ ಕೊಟ್ಟಿದ್ದರೂ ಅದನ್ನು ಉಲ್ಲಂಘಿಸಿ ಪುರಸಭೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮೂಲಿಮನಿ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ವಿಜಯಪುರ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಮಾ.25, ಮಾ.29 ಹಾಗೂ ಏ.8 ರಂದು ಪತ್ರ ನೀಡಿದ್ದೇನೆ. ಈವರೆಗೂ ಅವರ ಮೇಲೆ ಕ್ರಮ ಕೈಗೊಳ್ಳದೇ ಮೇಲಧಿಕಾರಿಗಳು ಮೌನವಾಗಿದ್ದಾರೆ ಎಂದು ದೂರಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಮುದ್ದೇಬಿಹಾಳ ಪುರಸಭೆ ಮುಖ್ಯಾಧಿಕಾರಿ ಸದರಿ ವಿಷಯದ ಕುರಿತು ಕೂಲಂಕುಶವಾಗಿ ಪರಿಶೀಲಿಸಿ ವಿಳಂಬಕ್ಕೆ ಆಸ್ಪದ ನೀಡದೇ ನಿಯಮಾನುಸಾರ ಎರಡು ದಿನಗಳ ಒಳಗಾಗಿ ಅಗತ್ಯ ಕ್ರಮ ವಹಿಸಿ ತಮ್ಮ ಸ್ಪಷ್ಟವಾದ ಅಭಿಪ್ರಾಯ, ನಿಯಮಗಳೊಂದಿಗೆ ಹಾಗೂ ಸೂಕ್ತ ದಾಖಲಾತಿಗಳೊಂದಿಗೆ ಈ ಕಾರ್ಯಾಲಯಕ್ಕೆ ವರದಿ ಸಲ್ಲಿಸಬೇಕು. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ ತಿಳಿಸಿದ್ದಾರೆ ಎಂದು ದೂರುದಾರ ಸದಸ್ಯ ಶಿವಪೂರ ತಿಳಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ