ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ ಮಾಡಿದ ಮಹಾ ಅನ್ಯಾಯವಾಗಿದೆ.

ಹೌದು, ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಈ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವ ಆಯ್ಕೆ ಕೊಟ್ಟಿದೆ. ಇದರಿಂದ ಕನ್ನಡಿಗ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪಚ್ಚಯ (ಜೆಡಿಸಿಇ) ಸುತ್ತೋಲೆ ಹೊರಡಿಸಿತ್ತು. ಹೀಗಾಗಿ, ಕನ್ನಡಿಗ ಅಭ್ಯರ್ಥಿಗಳು ಪರೀಕ್ಷಾ ಸಿದ್ಧತೆ ಕೈಗೊಂಡಿದ್ದರು.

ಆಗಸ್ಟ್ 3ಕ್ಕೆ ಈ ಪರೀಕ್ಷೆಯಿದೆ. ಆದರೆ, ಈ ನಡುವೆ ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವಂತೆ ಆಯ್ಕೆ ನೀಡಲಾಗಿದೆ. ಹುಬ್ಬಳ್ಳಿ ವಿಭಾಗದಲ್ಲಿ 521, ಮೈಸೂರು 130, ಬೆಂಗಳೂರು ವಿಭಾಗದಲ್ಲಿ 278 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ಎರಡು ತಿಂಗಳಿಂದ ಪರೀಕ್ಷೆ ಸಿದ್ಧತೆ ನಡೆಸಿದ್ದ ಕನ್ನಡಿಗರು ಇದೀಗ ಮಾತೃಭಾಷೆಯಲ್ಲಿ ಪರೀಕ್ಷೆ ಬರೆವ ಆಯ್ಕೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತಿದ್ದಾರೆ.

ಈ ಹಿಂದೆ ನಡೆದ ಜಿಡಿಸಿಇ ಪರೀಕ್ಷೆಗಳಲ್ಲಿ ಕನ್ನಡದ ಅವಕಾಶ ನೀಡಿದ್ದ ಇಲಾಖೆ ಈ ಬಾರಿ ಯಾಕೆ ನೀಡುತ್ತಿಲ್ಲ ಎಂದು ನೌಕರರು ಪ್ರಶ್ನಿಸಿದ್ದಾರೆ.

ತಮಿಳಲ್ಲಿದೆ, ಕನ್ನಡದಲ್ಲೇಕಿಲ್ಲ?: ದಕ್ಷಿಣ ರೈಲ್ವೆಯು ತಮಿಳುನಾಡಿನಲ್ಲಿ 2017-18 ರಿಂದಲೇ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನುತಮಿಳಿನಲ್ಲಿ ಬರೆವ ಆಯ್ಕೆಯನ್ನು ನೀಡಿದೆ. ಪ್ರತಿ ವರ್ಷವೂ ಸಾವಿರಾರು ಬಡ್ಡಿ ಪರೀಕ್ಷೆಗಳು ಆ ರಾಜ್ಯದ ಅಧಿಕೃತ ಭಾಷೆಯಲ್ಲಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ನೈಋತ್ಯ ರೈಲ್ವೆಯಿಂದಇದಿನ್ನೂ ಜಾರಿಯಾಗಿಲ್ಲ. ಕನ್ನಡಿಗರು ಹಿಂದಿ/ ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ರಾಜ್ಯದವರು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕೇಳುತ್ತಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ‘ನಾವು ಕನ್ನಡದಲ್ಲೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಹಾಲ್ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಕಾರಣ ಸಮಸ್ಯೆಯಾಗಿದೆ. ಇಲಾಖೆ ಪರೀಕ್ಷೆ ಮುಂದೂಡಬೇಕು. ಜೊತೆಗೆ ಕನ್ನಡದ ಆಯ್ಕೆ ನೀಡಬೇಕು’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿ ಹೇಳಿದರು.

ಇಂಗ್ಲಿಷ್ ಜ್ಞಾನಕ್ಕೆ ಪ್ರತ್ಯೇಕ ಪರೀಕ್ಷೆ: ರೈಲ್ವೆ ಮಂಡಳಿ ಪ್ರಕಾರ ಪರೀಕ್ಷೆಯಲ್ಲಿ ಇಂಗ್ಲಿಷ್ ಬದಲಿಗೆ ಪ್ರಾದೇಶಿಕ ಭಾಷೆಯ ಬಳಕೆಗೆ ಅನುಮತಿಸಬಹುದು.

ಏಕಾಏಕಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಕೊಕ್ ನೀಡಿರುವ ಬಗ್ಗೆ ನೌಕರರ ಸಂಘದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಆ.3ರ ಪರೀಕ್ಷೆಗಳನ್ನೇ ಮುಂದೂಡಲು ಚಿಂತನೆ ನಡೆಸಿದೆ. ಬಳಿಕ ಕನ್ನಡದಲ್ಲಿ ಪ್ರಶ್ನೆಪತ್ರಿಕೆ ನೀಡುವ ಅವಕಾಶ ನೀಡಬೇಕೆ, ಬೇಡವೆ ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ