From May 1st to 5th various programs Veerabhadreshwar Temple Lokarpane

ಮೇ.1 ರಿಂದ 5ರವರೆಗೆ ವಿವಿಧ ಕಾರ್ಯಕ್ರಮವೀರಭದ್ರೇಶ್ವರ ದೇವಸ್ಥಾನ ಲೋಕಾರ್ಪಣೆ

ಮೇ.1 ರಿಂದ 5ರವರೆಗೆ ವಿವಿಧ ಕಾರ್ಯಕ್ರಮವೀರಭದ್ರೇಶ್ವರ ದೇವಸ್ಥಾನ ಲೋಕಾರ್ಪಣೆ

ಮುದ್ದೇಬಿಹಾಳ : ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ವಿನಾಯಕ ನಗರದ ವಿನಾಯಕ ಹಾಗೂ ಭದ್ರಕಾಳಿ ಅಮ್ಮನವರ ಸಮೇತ ವೀರಭದ್ರೇಶ್ವರ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಮೇ.1 ರಿಂದ 5ರವರೆಗೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೇ.1 ರಂದು ಬೆಳಗ್ಗೆ 5ಕ್ಕೆ ಮೂಲ ಮೂರ್ತಿಗಳಿಗೆ ಅಭಿಷೇಕ, ಸಂಜೆ 6ಕ್ಕೆ ಗೋಪೂಜೆ ನಂತರ ಇಟಗಿ ಗುರುಶಾಂತವೀರ ಶಿವಾಚಾರ್ಯರಿಂದ ಆಧ್ಯಾತ್ಮಿಕ ಪ್ರವಚನ ಸಂಜೆ 7 ಕ್ಕೆ ನಡೆಯಲಿದೆ.

ದಿವ್ಯ ಸಾನಿಧ್ಯವನ್ನು ಇಟಗಿ ಗುರುಶಾಂತವೀರ ಶಿವಾಚಾರ್ಯರು ವಹಿಸುವರು. ಈರಯ್ಯ ಹಿರೇಮಠ ಸಾನಿಧ್ಯ ವಹಿಸುವರು.ವಿಶ್ವನಾಥ ನಾಗಠಾಣ ಅಧ್ಯಕ್ಷತೆ ವಹಿಸುವರು. ಉದ್ಯಮಿ ಸಂಜೀವಕುಮಾರ ಓಸ್ವಾಲ್ ಉದ್ಘಾಟಿಸುವರು. ಗಣ್ಯರಾದ ಕಾಶೀಬಾಯಿ ರಾಂಪೂರ, ಅನುರಾಧಾ ಪ್ಯಾಟಿಗೌಡರ, ಸಂಗೀತಾ ನಾಡಗೌಡರ, ಶಿವಶಂಕರಗೌಡ ಹಿರೇಗೌಡರ, ಸಂಗಯ್ಯ ಗಣಾಚಾರಿ ಉಪಸ್ಥಿತರಿರಲಿದ್ದಾರೆ. ಬಳಿಕ ದಾನಿಗಳಿಗೆ ಸನ್ಮಾನ ನಡೆಯಲಿದೆ. ಮೇ.2 ಹಾಗೂ 3 ರಂದು ಸಂಜೆ ಆಧ್ಯಾತ್ಮಿಕ ಪ್ರವಚನ, ಮೇ.4 ರಂದು ಬೆಳಗ್ಗೆ 7ಕ್ಕೆ ಕಿಲ್ಲಾದಲ್ಲಿನ ಗುಗ್ಗಳ ಬಸವೇಶ್ವರ ಹಾಗೂ ವೀರಭದ್ರೇಶ್ವರ ದೇವಸ್ಥಾನದಿಂದ ನೂತನ ಪಲ್ಲಕ್ಕಿ ಹಾಗೂ ಮೂರ್ತಿಗಳನ್ನು ಮೆರವಣಿಗೆ ಮೂಲಕ ವಿನಾಯಕ ನಗರದ ನೂತನ ದೇವಸ್ಥಾನಕ್ಕೆ ಕರೆತರುವುದು.

ಮೇ. 5 ರಂದು ಮೂಲ ಮೂರ್ತಿಗಳಿಗೆ ಅಭಿಷೇಕ ನಂತರ ನೂತನ ಮೂರ್ತಿಗಳ ಸ್ಥಾಪನೆ, ಮಹಾಭಿಷೇಕ, ಉತ್ಸವಮೂರ್ತಿ, ದೇವಸ್ಥಾನದ ಕಳಸವನ್ನು ದೇವಸ್ಥಾನಕ್ಕೆ ಕರೆತರಲಾಗುತ್ತದೆ. ಸಂಜೆ 5ಕ್ಕೆ ಶ್ರೀಶೈಲ ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವದಲ್ಲಿ ಧರ್ಮಸಭೆ ನಡೆಯಲಿದೆ ಎಂದು ದೇವಸ್ಥಾನ ಕಮೀಟಿ ಅಧ್ಯಕ್ಷ ಶಾಹೀಲ್ ನಾಗಠಾಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ