The recent murder case in Narayanpur police station is a new twist

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣ ಹೊಸ ಟ್ವಿಸ್ಟ್

ನಾರಾಯಣಪುರ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸೂಕ್ಷ್ಮವಾಗಿ ಕೊಲೆ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸ್ ಇಲಾಖೆ ಅಧಿಕಾರಿಗಳು ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ. ಯಾದಗಿರಿ ಎಸ್‌ಪಿಯವರ ಆದೇಶದಂತೆ, ಸಿಪಿಐ ರವಿಕುಮಾರ್ ಹುಣಸಗಿ ವೃತ್ತ ಇವರ ತನಿಖೆ ಕೈಗೊಂಡು ಸತ್ಯಾಸತ್ಯತೆಯನ್ನು ಬಯಲಿಗೆಳೆದಿದ್ದಾರೆ.

ಮೃತ ವ್ಯಕ್ತಿಯ ಹೆಂಡತಿಯಾದ ರೇಣುಕಮ್ಮ ಗಂಡ ಗೌಡಪ್ಪ ಚವನಬಾವಿ ಸಾ. ಜೋಗಂಡಬಾವಿ ಅವರು ನೀಡಿದ ದೂರಿನ ಮೇರೆಗೆ ದಿನಾಂಕ 22 -4 – 2025 ರಂದು ಆರೋಪಿತರಾದ ನೀಲಪ್ಪ ತಂದೆ ಯಮನಪ್ಪ ಹಾಗೂ ಇನ್ನಿತರರು ಸಾ. ಜೋಗಂಡಬಾವಿ ಹಳೆಯ ವೈರತ್ವದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದರು.

ಈ ಕುರಿತು ತನಿಖೆ ಮುಂದುವರೆಸಿದ ಅಧಿಕಾರಿಗಳು ನಿಜ ಘಟನೆಯನ್ನು ಅರಿತು ದಿಗ್ಭ್ರಮೆಗೊಳಗಾಗಿದ್ದಾರೆ. ಗೌಡಪ್ಪನ ಅಕ್ಕನ ಮಗನಾದ ಸರಿಸುಮಾರು 14 ವರ್ಷದ ಬಾಲಕ (ಹೆಸರು ನಮೂದಿಸುವುದಿಲ್ಲ) ಬಡಿಗೆಯಿಂದ ತಲೆ ಹಿಂಬದಿಯಲ್ಲಿ ಹೊಡೆದಿರುತ್ತಾನೆ. ಈ ಪ್ರಕರಣವು ಕೆಂಭಾವಿ ಠಾಣೆ ವ್ಯಾಪ್ತಿಯ ಅಗತೀರ್ಥ ಸೀಮಾಂತರದಲ್ಲಿ ಕುರಿ ದೊಡ್ಡಿಯನ್ನು ಹಾಕಿರುತ್ತಾರೆ ಅಳಿಯ ಮತ್ತು ಮಾವನ ಮದ್ಯ ಯಾವುದೋ ವಿಷಯಕ್ಕೆ ಜಗಳವಾಡುತ್ತಾರೆ. ಆ ಜಗಳದಲ್ಲಿ ಅಳಿಯ ಮಾವನಿಗೆ ತಲೆ ಹಿಂಬದಿಯಲ್ಲಿ ಕಟ್ಟಿಗೆಯಿಂದ ಹೊಡೆದಿರುತ್ತಾನೆ. ಅದರೆ, ಈ ವಿಚಾರವನ್ನು ಸುಳ್ಳು ಕಟ್ಟುಕಥೆ ಕಟ್ಟಿ ಮತ್ತೊಬ್ಬರ ಮೇಲೆ ಪ್ರಕರಣ ದಾಖಲೆಯನ್ನು ಮಾಡಿಸಿರುತ್ತಾರೆ. ಈ ಘಟನೆಯಲ್ಲಿ ಕುಟುಂಬಸ್ಥರೇ ಆರೋಪಿಗಳಾಗಿದ್ದಾರೆ.

ಈ ಘಟನೆಯು ದಿನಾಂಕ 19- 4- 2025 ರಂದು ಸುಮಾರು 9:00 ಗಂಟೆ ರಾತ್ರಿ ವೇಳೆಯಲ್ಲಿ ನಡೆದಿದೆ. ಕುಟುಂಬಸ್ಥರೇ ಕೊಲೆ ಮಾಡಿ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಸಾಯಂಕಾಲ 4 ಗಂಟೆವರೆಗೆ ಶವವನ್ನಿಟ್ಟು ಪ್ರತಿಭಟನೆ ಮಾಡುತ್ತಾರೆ. ಬಾಗಲಕೋಟ ಆಸ್ಪತ್ರೆಯಿಂದ ತಂದು ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಪ್ರತಿಭಟನೆ ಮಾಡುದರ ಜೊತೆಗೆ ರಾತ್ರಿ 11 ಗಂಟೆ ನಂತರ ಶವವನ್ನು ತಗೆದುಕೊಂಡು ಹೋಗುತ್ತಾರೆ. ಪೊಲೀಸರೇ ಆರೋಪಿಗಳ ಎಂಬುವಂತೆ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಾರೆ.

ದಕ್ಷ ಅಧಿಕಾರಿ ರಾಜಶೇಖರ್ ರಾಠೋಡ ಪಿ.ಎಸ್.ಐ ನಾರಾಯಣಪುರ ಅವರ ವಿರುದ್ಧ ಶವವಿಟ್ಟು ಪ್ರತಿಭಟನೆ ಮಾಡಿ ಸುಳ್ಳು ಆರೋಪ ಮಾಡುತ್ತಾರೆ.

ವರದಿ : ಶಿವು ರಾಠೋಡ

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.