SSLC Exam: Rank for Brilliant School in Myleswar

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ಎಸ್.ಎಸ್.ಎಲ್.ಸಿ ಪರೀಕ್ಷೆ: ಮೈಲೇಶ್ವರದ ಬ್ರಿಲಿಯಂಟ್ ಶಾಲೆಗೆ ರ‍್ಯಾಂಕ್

ತಾಳಿಕೋಟಿ: ಪಟ್ಟಣದ ಮೈಲೇಶ್ವರ ಕ್ರಾಸ್‌ನಲ್ಲಿರುವ ಶ್ರೀ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಗಗನಸಿಂಗ್ ಮೂಲಿಮನಿ ಎಸ್.ಎಸ್.ಎಲ್.ಸಿ.ಪರಿಕ್ಷೆಯಲ್ಲಿ 625ಕ್ಕೆ 621(99.36%) ಅಂಕ ಗಳಿಸುವದರೊಂದಿಗೆ ರಾಜ್ಯಕ್ಕೆ ರ‍್ಯಾಂಕ್ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾನೆ.

ಪಟ್ಟಣದ ಪುರಸಭಾ ಸದಸ್ಯ ಜೈಸಿಂಗ್ ಮೂಲಿಮನಿ ಅವರ ಪುತ್ರನಾಗಿರುವ ಗಗನಸಿಂಗ್ ಪ್ರಾಥಮಿಕ ಶಿಕ್ಷಣದಿಂದ ಪ್ರೌಢಶಿಕ್ಷಣದವರೆಗೂ ಬ್ರಿಲಿಯಂಟ್ ಶಾಲೆಯಲ್ಲಿ ಓದಿದ್ದಾನೆ. ಎಸ್.ಎಸ್.ಎಲ್.ಸಿ. ಪರಿಕ್ಷೆಯಲ್ಲಿ ಕನ್ನಡಕ್ಕೆ 125ಕ್ಕೆ 125 ಅಂಕ, ಸಮಾಜ ವಿಜ್ಞಾನ 100ಕ್ಕೆ 100, ಹಿಂದಿ 100ಕ್ಕೆ 100, ಗಣಿತ 100ಕ್ಕೆ 99, ವಿಜ್ಞಾನ 100ಕ್ಕೆ 99, ಇಂಗ್ಲೀಷ 100ಕ್ಕೆ 98 ಅಂಕಗಳನ್ನು ಗಳಿಸಿದ್ದು ಈ ವಿದ್ಯಾರ್ಥಿಯ ಸಾಧನೆಯಿಂದ ಶಾಲೆಯಲ್ಲಿ ಹಾಗೂ ವಿದ್ಯಾರ್ಥಿಯ ಮನೆಯಲ್ಲಿ ಸಂತಸ ಮನೆ ಮಾಡಿದೆ.

ಬ್ರಿಲಿಯಂಟ್ ಶಿಕ್ಷಣ ಸಂಸ್ಥೆಯ ಚೇರಮನ್ ನಾನಾಗೌಡ ನಡುವಿನಮನಿ ಮಾತನಾಡಿ, ಗಗನಸಿಂಗ್ ಮೂಲಿಮನಿ ಸಾಧನೆಯ ಗುರಿಯೊಂದಿಗೆ ಬೆಳೆದು ಬಂದ ವಿದ್ಯಾರ್ಥಿಯಾಗಿದ್ದಾನೆ. ರಾಜ್ಯಕ್ಕೆ ಪ್ರಥಮ ಸ್ಥಾನದೊಂದಿಗೆ ಗುರಿತಿಸಿಕೊಳ್ಳಬೇಕೆಂಬ ಬಯಕೆ ಅವನದ್ದಾಗಿತ್ತು. ಆದರೆ 4 ಅಂಕ ಕಡಿತಗೊಂಡಿದೆ. ಆದರೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು ಇನ್ನಷ್ಟು ಅಂಕ ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.

ವಿದ್ಯಾರ್ಥಿ ಗಗನಸಿಂಗ ಮೂಲಿಮನಿ ಮಾತನಾಡಿ, ಪ್ರಾಥಮಿಕ ಹಂತದಿಂದಲೂ ಬ್ರಿಲಿಯಂಟ್ ಶಾಲೆಯಲ್ಲಿ ನೀಡಿದ ಭೋದನಾ ಕೌಶಲ್ಯ ಮತ್ತು ಶಿಕ್ಷಕರ ಮಾಡಿದ ಉತ್ತಮ ಭೋದನೆ ಅದರ ಜೊತೆಗೆ ನನ್ನ ತಂದೆ ಜೈಸಿಂಗ್ ಅವರು ಹಿಂದೆ ಉತ್ತಮ ಗುರುಗಳಿದ್ದಾರೆ. ಮುಂದೆ ನಮಗೆ ಗುರಿ ಎಂಬುದು ಇರಬೇಕು.ಈ ತಿಳಿವಳಿಕೆ ಕಾರಣವಾಗಿದೆ. ಪಿಯುಸಿ ವಿಜ್ಞಾನ ವಿಭಾಗದೊಂದಿಗೆ ಜೆಇಇ ಗುರಿ ಇದೆ ಎಂದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ