If you study hard, you will achieve your desired goal: Awarded to the student who stands third in the state

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಕಷ್ಟಪಟ್ಟು ಓದಿದರೆ ಇಚ್ಛೆಯ ಗುರಿ ಸಾಧನೆ:ರಾಜ್ಯಕ್ಕೆ ಮೂರನೇ ಸ್ಥಾನ ಬಂದ ವಿದ್ಯಾರ್ಥಿಗೆ ಸನ್ಮಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕನ್ನಡ ಮಾಧ್ಯಮದಲ್ಲಿ 623 ಅಂಕ ಪಡೆದಿರುವ ನಮ್ಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಕ್ಷತಾ ಆಸಂಗಿ ಅವಳ ಪಿಯುಸಿ ಎರಡು ವರ್ಷದ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆ ಚೇರಮನ್ ಬಿ.ಜಿ.ಮಠ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಸ್.ಡಿ.ಕೆ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಕನ್ನಡ ಮಾಧ್ಯಮದಲ್ಲಿ ತಾಲ್ಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ನಮ್ಮ ಶಾಲೆಯ ವಿದ್ಯಾರ್ಥಿಗಳೇ ಪಡೆದುಕೊಂಡಿರುವುದು ಖುಷಿ ತಂದಿದೆ. ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಆದ್ಯತೆ ಮೇರೆಗೆ ಉಚಿತ ಶಿಕ್ಷಣ ನೀಡುವುದಾಗಿ ಹೇಳಿದರು.

ವಿದ್ಯಾರ್ಥಿನಿ ಅಕ್ಷತಾ ಆಸಂಗಿ ಮಾತನಾಡಿ, ಹೆತ್ತವರ ಪ್ರೋತ್ಸಾಹ, ತಮ್ಮ ಕುಟುಂಬದ ಸದಸ್ಯರಂತೆ ಕಾಣುವ ಶಿಕ್ಷಣ ಸಂಸ್ಥೆಯವರ ಪ್ರೀತಿ, ಕಾಳಜಿ ಹಾಗೂ ಶಿಕ್ಷಕರ ಅಮೂಲ್ಯ ಮಾರ್ಗದರ್ಶನದಿಂದ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಎಸ್.ಎಸ್.ಎಲ್.ಸಿ ಟಾಪರ್ ಹೇಳಿದರು.

ವಿದ್ಯಾರ್ಥಿನಿಯ ತಂದೆ ಜಗದೀಶ ಆಸಂಗಿ, ತಾಯಿ ಹೇಮಾ ಆಸಂಗಿ, ಮುಖ್ಯ ಶಿಕ್ಷಕ ಹೀರೂ ನಾಯಕ ಮಾತನಾಡಿದರು. ಸಂಸ್ಥೆಯ ಸದಸ್ಯ ಲಾಲಸಾ ನದಾಫ, ಶಿಕ್ಷಕರು, ಸಿಬ್ಬಂದಿ ಇದ್ದರು.

ಕಣ್ಣೀರು ಹಾಕಿದ ತಾಯಿ:

ತಮ್ಮ ಮಗಳ ಸಾಧನೆ ಕುರಿತು ಅಕ್ಷತಾ ಆಸಂಗಿ ಅವರ ತಾಯಿ ಮಾತನಾಡುವಾಗ ತಮ್ಮನ್ನು ಅಗಲಿದ್ದ ಪುತ್ರನನ್ನು ನೆನೆಸಿಕೊಂಡು ಗದ್ಗದಿತರಾದರು. ಮಗ ಇಲ್ಲ ಎಂಬ ನೋವನ್ನು ಮಗಳು ತನ್ನ ಸಾಧನೆಯ ಮೂಲಕ ಮರೆಸಿದ್ದಾಳೆ ಎಂದು ಹೇಳಿ ಕಣ್ಣೀರಾದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ