Accused of trying to bring a bad name to the Congress government

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಕೆಲಸಗಳನ್ನು ಪಡೆದಿರುವ ನಾಲ್ವರು ಗುತ್ತಿಗೆದಾರರು ಹಿಡಿದ ಕೆಲಸವನ್ನು ಪೂರ್ಣಗೊಳಿಸದೇ ನಿರಾಸಕ್ತಿ ತೋರುತ್ತಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ. ಅಂತವರು ಕೆಲಸ ತ್ವರಿತವಾಗಿ ಆರಂಭಿಸದಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಎರಡ್ಮೂರು ಬಾರಿ ಕೆಲಸ ಮಾಡದ ಗುತ್ತಿಗೆದಾರರಿಗೆ ನಿರ್ದೇಶನ ಮಾಡಿದ್ದರೂ ಕೂಡಾ ಕೆಲಸ ಕೈಗೆತಿಕೊಳ್ಳುತ್ತಿಲ್ಲ. ಸನ್ 2022-23ರಲ್ಲಿ ಈ ಗುತ್ತಿಗೆದಾರರಿಗೆ ಯಾವ ರೀತಿ ಕೆಲಸ ನೀಡಲಾಗಿತ್ತು ಗೊತ್ತಿಲ್ಲ. ಆದರೆ, ಅವರು ಕೆಲಸ ಮಾಡುತ್ತಿಲ್ಲ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸ್ವತಃ ಲೋಕಾಯುಕ್ತ ತನಿಖೆಗೂ ನಾವೇ ದೂರು ನೀಡುತ್ತೇವೆ ಎಂದು ಹೇಳಿದರು.

ಚೋರಗಿ, ಬಿ. ಎಸ್. ಪಾಟೀಲ ವಣಕ್ಯಾಳ, ಹೇಮಚಂದ್ರ ಸಂಗಮ, ಬಿ. ಎಸ್. ಪಾಟೀಲ ಎಂಬುವರು ಗುತ್ತಿಗೆ ಕೆಲಸವನ್ನು ಪಡೆದಿದ್ದಾರೆ. ಆದರೆ ಅರ್ಧಮರ್ಧ ಕೆಲಸ ಮಾಡಿ ಬಾಕಿ ಕೆಲಸವನ್ನು ಮಾಡದೇ ತಟಸ್ಥವಾಗಿದ್ದಾರೆ. ಬಿ. ಎಸ್. ಪಾಟೀಲ ವಣಕ್ಯಾಳ ಎಂಬ ಗುತ್ತಿಗೆದಾರರಿಗೆ 7.93 ಕೋಟಿ ರೂ. ಕೆಲಸದಲ್ಲಿ ಸುಮಾರು 90 ಲಕ್ಷ ರೂ.ದಷ್ಟು ಮುಂಗಡ ಬಿಲ್ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ ತಾಳಿಕೋಟಿ, ಮುದ್ದೇಬಿಹಾಳದ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿದರು.

ಕೆಲಸ ಮಾಡಲು ಗುತ್ತಿಗೆದಾರರಿಗೆ ನೀಡಿದ್ದ ನಿಗದಿತ ಸಮಯ ಮುಗಿದುಹೋಗಿದೆ. ಕಾರಣ ಏನೆಂಬುದು ತಿಳಿಯುತ್ತಿಲ್ಲ. ಜನ ಸಾಮಾನ್ಯರ ಕೆಲಸಕ್ಕೆ ತೊಂದರೆ ಮಾಡುವಂತಹ ಕೆಲಸ ಈ ಗುತ್ತಿಗೆದಾರರು ಮಾಡುತ್ತಿದ್ದಾರೆ. ನಾನು ಮತಕ್ಷೇತ್ರದಲ್ಲಿ ಯಾವುದೇ ಕೆಲಸ ನಿಲ್ಲಿಸುವಂತೆ ಹೇಳಿಲ್ಲ. ನನ್ನ 40 ವರ್ಷದ ರಾಜಕಾರಣದಲ್ಲಿ ಇಂತಹ ಕನಿಷ್ಠಮಟ್ಟಕ್ಕೆ ಇಳಿಯುವಂತಹ ಕೆಲಸ ಮಾಡಿಲ್ಲ ಎಂದು ಹೇಳಿದರು.

ರಿಸ್ಕ್ ಅಂಡ್ ಕಾಸ್ಟ್ ಮಾಡಿ ಸಂಬಂಧಿಸಿದ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಮುದ್ದೇಬಿಹಾಳ ಪುರಸಭೆಯಲ್ಲಿ ಪ್ರತ್ಯೇಕ ಪ್ಯಾಕೇಜ್ ಅಡಿ 7 ಕೋಟಿ ರೂ.ಗೂ ಅಧಿಕ ಮೊತ್ತದ ಕೆಲಸ ಹಿಡಿದಿದ್ದ ಚೋರಗಿ ಎಂಬ ಗುತ್ತಿಗೆದಾರ ಕೆಲಸ ಮಾಡದೇ ಕಾಣೆಯಾಗಿದ್ದಾರೆ. ಈಗಾಗಲೇ ಅವರಿಗೆ 1 ಕೋಟಿ ರೂ ಅಧಿಕ ಬಿಲ್ ಪಾವತಿಸಲಾಗಿದೆ ಎಂದು ಹೇಳಿದರು.

ಮುದ್ದೇಬಿಹಾಳ, ತಾಳಿಕೋಟಿ, ನಾಲತವಾಡದಲ್ಲಿ ಕೆಲಸಗಳನ್ನು ನಿಲ್ಲಿಸಿ ಕಾಂಗ್ರೆಸ್ ಸರ್ಕಾರ ಬಂದು ಕೆಲಸ ನಿಲ್ಲಿಸಿತು ಎಂದು ಕೆಟ್ಟ ಹೆಸರು ತರಲು ಕುತಂತ್ರಗಳು ನಡೆದಿವೆ. ಈ ಕೆಲಸಗಳನ್ನು ಹಿಡಿದವರೆಲ್ಲ ಕಟ್ಟಾ ಬಿಜೆಪಿ ಫಾಲೋವರ್ಸ್ ಇದ್ದಾರೆ. ರಾಜಕಾರಣ ಮಾಡುವುದಿದ್ದರೆ ರಾಜಕಾರಣ ಮಾಡಿ. ಅದು ಬಿಟ್ಟು ಈ ರೀತಿ ಗುತ್ತಿಗೆ ಹಿಡಿದು ಕೆಲಸ ಮಾಡದೇ ಜನಸಾಮಾನ್ಯರಿಗೆ ತೊಂದರೆ ಕೊಡುವುದು, ಅಭಿವೃದ್ಧಿ ರಾಜಕಾರಣದಲ್ಲಿ ಅಡತಡೆಯನ್ನುಂಟು ಮಾಡುವ ಕ್ರಮ ಸರಿಯಲ್ಲ ಎಂದು ಹೇಳಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ