Accused of trying to bring a bad name to the Congress government

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ- ಆರೋಪ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ಕೆಲಸಗಳನ್ನು ಪಡೆದಿರುವ ನಾಲ್ವರು ಗುತ್ತಿಗೆದಾರರು ಹಿಡಿದ ಕೆಲಸವನ್ನು ಪೂರ್ಣಗೊಳಿಸದೇ ನಿರಾಸಕ್ತಿ ತೋರುತ್ತಿದ್ದು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹುನ್ನಾರ ನಡೆಸಿದ್ದಾರೆ. ಅಂತವರು ಕೆಲಸ ತ್ವರಿತವಾಗಿ ಆರಂಭಿಸದಿದ್ದರೆ ಅವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಸಿ. ಎಸ್. ನಾಡಗೌಡ ಹೇಳಿದರು.

ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಎರಡ್ಮೂರು ಬಾರಿ ಕೆಲಸ ಮಾಡದ ಗುತ್ತಿಗೆದಾರರಿಗೆ ನಿರ್ದೇಶನ ಮಾಡಿದ್ದರೂ ಕೂಡಾ ಕೆಲಸ ಕೈಗೆತಿಕೊಳ್ಳುತ್ತಿಲ್ಲ. ಸನ್ 2022-23ರಲ್ಲಿ ಈ ಗುತ್ತಿಗೆದಾರರಿಗೆ ಯಾವ ರೀತಿ ಕೆಲಸ ನೀಡಲಾಗಿತ್ತು ಗೊತ್ತಿಲ್ಲ. ಆದರೆ, ಅವರು ಕೆಲಸ ಮಾಡುತ್ತಿಲ್ಲ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದಲ್ಲಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಸ್ವತಃ ಲೋಕಾಯುಕ್ತ ತನಿಖೆಗೂ ನಾವೇ ದೂರು ನೀಡುತ್ತೇವೆ ಎಂದು ಹೇಳಿದರು.

ಚೋರಗಿ, ಬಿ. ಎಸ್. ಪಾಟೀಲ ವಣಕ್ಯಾಳ, ಹೇಮಚಂದ್ರ ಸಂಗಮ, ಬಿ. ಎಸ್. ಪಾಟೀಲ ಎಂಬುವರು ಗುತ್ತಿಗೆ ಕೆಲಸವನ್ನು ಪಡೆದಿದ್ದಾರೆ. ಆದರೆ ಅರ್ಧಮರ್ಧ ಕೆಲಸ ಮಾಡಿ ಬಾಕಿ ಕೆಲಸವನ್ನು ಮಾಡದೇ ತಟಸ್ಥವಾಗಿದ್ದಾರೆ. ಬಿ. ಎಸ್. ಪಾಟೀಲ ವಣಕ್ಯಾಳ ಎಂಬ ಗುತ್ತಿಗೆದಾರರಿಗೆ 7.93 ಕೋಟಿ ರೂ. ಕೆಲಸದಲ್ಲಿ ಸುಮಾರು 90 ಲಕ್ಷ ರೂ.ದಷ್ಟು ಮುಂಗಡ ಬಿಲ್ ಪಾವತಿ ಮಾಡಲಾಗಿದೆ. ಆದರೆ ಬಾಕಿ ಇರುವ ತಾಳಿಕೋಟಿ, ಮುದ್ದೇಬಿಹಾಳದ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿದ್ದಾರೆ ಎಂದು ಆರೋಪಿಸಿದರು.

ಕೆಲಸ ಮಾಡಲು ಗುತ್ತಿಗೆದಾರರಿಗೆ ನೀಡಿದ್ದ ನಿಗದಿತ ಸಮಯ ಮುಗಿದುಹೋಗಿದೆ. ಕಾರಣ ಏನೆಂಬುದು ತಿಳಿಯುತ್ತಿಲ್ಲ. ಜನ ಸಾಮಾನ್ಯರ ಕೆಲಸಕ್ಕೆ ತೊಂದರೆ ಮಾಡುವಂತಹ ಕೆಲಸ ಈ ಗುತ್ತಿಗೆದಾರರು ಮಾಡುತ್ತಿದ್ದಾರೆ. ನಾನು ಮತಕ್ಷೇತ್ರದಲ್ಲಿ ಯಾವುದೇ ಕೆಲಸ ನಿಲ್ಲಿಸುವಂತೆ ಹೇಳಿಲ್ಲ. ನನ್ನ 40 ವರ್ಷದ ರಾಜಕಾರಣದಲ್ಲಿ ಇಂತಹ ಕನಿಷ್ಠಮಟ್ಟಕ್ಕೆ ಇಳಿಯುವಂತಹ ಕೆಲಸ ಮಾಡಿಲ್ಲ ಎಂದು ಹೇಳಿದರು.

ರಿಸ್ಕ್ ಅಂಡ್ ಕಾಸ್ಟ್ ಮಾಡಿ ಸಂಬಂಧಿಸಿದ ಗುತ್ತಿಗೆದಾರರನ್ನು ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಕ್ರಮ ಜರುಗಿಸಲಾಗುವುದು. ಮುದ್ದೇಬಿಹಾಳ ಪುರಸಭೆಯಲ್ಲಿ ಪ್ರತ್ಯೇಕ ಪ್ಯಾಕೇಜ್ ಅಡಿ 7 ಕೋಟಿ ರೂ.ಗೂ ಅಧಿಕ ಮೊತ್ತದ ಕೆಲಸ ಹಿಡಿದಿದ್ದ ಚೋರಗಿ ಎಂಬ ಗುತ್ತಿಗೆದಾರ ಕೆಲಸ ಮಾಡದೇ ಕಾಣೆಯಾಗಿದ್ದಾರೆ. ಈಗಾಗಲೇ ಅವರಿಗೆ 1 ಕೋಟಿ ರೂ ಅಧಿಕ ಬಿಲ್ ಪಾವತಿಸಲಾಗಿದೆ ಎಂದು ಹೇಳಿದರು.

ಮುದ್ದೇಬಿಹಾಳ, ತಾಳಿಕೋಟಿ, ನಾಲತವಾಡದಲ್ಲಿ ಕೆಲಸಗಳನ್ನು ನಿಲ್ಲಿಸಿ ಕಾಂಗ್ರೆಸ್ ಸರ್ಕಾರ ಬಂದು ಕೆಲಸ ನಿಲ್ಲಿಸಿತು ಎಂದು ಕೆಟ್ಟ ಹೆಸರು ತರಲು ಕುತಂತ್ರಗಳು ನಡೆದಿವೆ. ಈ ಕೆಲಸಗಳನ್ನು ಹಿಡಿದವರೆಲ್ಲ ಕಟ್ಟಾ ಬಿಜೆಪಿ ಫಾಲೋವರ್ಸ್ ಇದ್ದಾರೆ. ರಾಜಕಾರಣ ಮಾಡುವುದಿದ್ದರೆ ರಾಜಕಾರಣ ಮಾಡಿ. ಅದು ಬಿಟ್ಟು ಈ ರೀತಿ ಗುತ್ತಿಗೆ ಹಿಡಿದು ಕೆಲಸ ಮಾಡದೇ ಜನಸಾಮಾನ್ಯರಿಗೆ ತೊಂದರೆ ಕೊಡುವುದು, ಅಭಿವೃದ್ಧಿ ರಾಜಕಾರಣದಲ್ಲಿ ಅಡತಡೆಯನ್ನುಂಟು ಮಾಡುವ ಕ್ರಮ ಸರಿಯಲ್ಲ ಎಂದು ಹೇಳಿದರು.

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ