Rain forest: Gujarat achieved a thrilling victory

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3 ವಿಕೆಟ್‌ ಗೆಲುವು ಸಾಧಿಸಿತು.

ಮುಂಬೈನ ವಾಖಂಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ಜರುಗಿತ್ತು. ಟಾಸ್ ಗೆದ್ದು ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ ಕಲೆ ಹಾಕಿತು. 156 ರನ್ ಗಳ ಗುರಿ ಬೆನ್ನತ್ತಿದ್ದ ಗುಜರಾತ್‌ ತಂಡ, ಸುಲಭವಾಗಿ ಗೆಲುವು ಪಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಮುಂಬೈನ ಶಿಸ್ತುಬದ್ದ ದಾಳಿಯ ನಡುವೆಯೂ ಗುಜರಾತ್ ತಂಡ ರೋಚಕ ಜಯ ಸಾಧಿಸಿದೆ.

ಗುಜರಾತ್‌ ತಂಡ 18 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 132 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಗುಜರಾತ್ ಗೆ ಕೊನೆಯ 12 ಎಸೆತಗಳಲ್ಲಿ 24 ರನ್‌ ಅಗತ್ಯವಿತ್ತು. ಈ ವೇಳೆ ಎರಡನೇ ಬಾರಿ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ 15 ರನ್‌ ಅಗತ್ಯವಿತ್ತು. ಕೊನೆಯ ಓವರ್‌ನಲ್ಲಿ ದೀಪಕ್‌ ಚಹರ್‌ಗೆ ರಾಹುಲ್‌ ತೆವಾಟಿಯಾ ಬೌಂಡರಿ ಸೇರಿ 5 ರನ್‌ ಗಳಿಸಿದರೆ, ಜೆರಾಲ್ಡ್‌ ಕೋಯೆಡ್ಜಿ ಸಿಕ್ಸರ್‌ ಬಾರಿಸಿದ್ದರು. ನಂತರ ಕೊನೆಯ ಎರಡು ಎಸೆತಗಳಲ್ಲಿ ಒಂದು ರನ್‌ ಬೇಕಿದ್ದಾಗ ಕೊಯೆಡ್ಜಿ ವಿಕೆಟ್‌ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ಅರ್ಷದ್‌ ಒಂದು ರನ್‌ ಗಳಿಸಿ ಗುಜರಾತ್‌ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಗುಜರಾತ್ 19 ಓವರ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು 147 ರನ್‌ಗಳನ್ನು ಗಳಿಸಿ ಗೆದ್ದು ಬೀಗಿತು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ