Rain forest: Gujarat achieved a thrilling victory

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3 ವಿಕೆಟ್‌ ಗೆಲುವು ಸಾಧಿಸಿತು.

ಮುಂಬೈನ ವಾಖಂಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ಜರುಗಿತ್ತು. ಟಾಸ್ ಗೆದ್ದು ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ ಕಲೆ ಹಾಕಿತು. 156 ರನ್ ಗಳ ಗುರಿ ಬೆನ್ನತ್ತಿದ್ದ ಗುಜರಾತ್‌ ತಂಡ, ಸುಲಭವಾಗಿ ಗೆಲುವು ಪಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಮುಂಬೈನ ಶಿಸ್ತುಬದ್ದ ದಾಳಿಯ ನಡುವೆಯೂ ಗುಜರಾತ್ ತಂಡ ರೋಚಕ ಜಯ ಸಾಧಿಸಿದೆ.

ಗುಜರಾತ್‌ ತಂಡ 18 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 132 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಗುಜರಾತ್ ಗೆ ಕೊನೆಯ 12 ಎಸೆತಗಳಲ್ಲಿ 24 ರನ್‌ ಅಗತ್ಯವಿತ್ತು. ಈ ವೇಳೆ ಎರಡನೇ ಬಾರಿ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ 15 ರನ್‌ ಅಗತ್ಯವಿತ್ತು. ಕೊನೆಯ ಓವರ್‌ನಲ್ಲಿ ದೀಪಕ್‌ ಚಹರ್‌ಗೆ ರಾಹುಲ್‌ ತೆವಾಟಿಯಾ ಬೌಂಡರಿ ಸೇರಿ 5 ರನ್‌ ಗಳಿಸಿದರೆ, ಜೆರಾಲ್ಡ್‌ ಕೋಯೆಡ್ಜಿ ಸಿಕ್ಸರ್‌ ಬಾರಿಸಿದ್ದರು. ನಂತರ ಕೊನೆಯ ಎರಡು ಎಸೆತಗಳಲ್ಲಿ ಒಂದು ರನ್‌ ಬೇಕಿದ್ದಾಗ ಕೊಯೆಡ್ಜಿ ವಿಕೆಟ್‌ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ಅರ್ಷದ್‌ ಒಂದು ರನ್‌ ಗಳಿಸಿ ಗುಜರಾತ್‌ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಗುಜರಾತ್ 19 ಓವರ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು 147 ರನ್‌ಗಳನ್ನು ಗಳಿಸಿ ಗೆದ್ದು ಬೀಗಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ