Rain forest: Gujarat achieved a thrilling victory

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3 ವಿಕೆಟ್‌ ಗೆಲುವು ಸಾಧಿಸಿತು.

ಮುಂಬೈನ ವಾಖಂಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ಜರುಗಿತ್ತು. ಟಾಸ್ ಗೆದ್ದು ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ ಕಲೆ ಹಾಕಿತು. 156 ರನ್ ಗಳ ಗುರಿ ಬೆನ್ನತ್ತಿದ್ದ ಗುಜರಾತ್‌ ತಂಡ, ಸುಲಭವಾಗಿ ಗೆಲುವು ಪಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಮುಂಬೈನ ಶಿಸ್ತುಬದ್ದ ದಾಳಿಯ ನಡುವೆಯೂ ಗುಜರಾತ್ ತಂಡ ರೋಚಕ ಜಯ ಸಾಧಿಸಿದೆ.

ಗುಜರಾತ್‌ ತಂಡ 18 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 132 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಗುಜರಾತ್ ಗೆ ಕೊನೆಯ 12 ಎಸೆತಗಳಲ್ಲಿ 24 ರನ್‌ ಅಗತ್ಯವಿತ್ತು. ಈ ವೇಳೆ ಎರಡನೇ ಬಾರಿ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ 15 ರನ್‌ ಅಗತ್ಯವಿತ್ತು. ಕೊನೆಯ ಓವರ್‌ನಲ್ಲಿ ದೀಪಕ್‌ ಚಹರ್‌ಗೆ ರಾಹುಲ್‌ ತೆವಾಟಿಯಾ ಬೌಂಡರಿ ಸೇರಿ 5 ರನ್‌ ಗಳಿಸಿದರೆ, ಜೆರಾಲ್ಡ್‌ ಕೋಯೆಡ್ಜಿ ಸಿಕ್ಸರ್‌ ಬಾರಿಸಿದ್ದರು. ನಂತರ ಕೊನೆಯ ಎರಡು ಎಸೆತಗಳಲ್ಲಿ ಒಂದು ರನ್‌ ಬೇಕಿದ್ದಾಗ ಕೊಯೆಡ್ಜಿ ವಿಕೆಟ್‌ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ಅರ್ಷದ್‌ ಒಂದು ರನ್‌ ಗಳಿಸಿ ಗುಜರಾತ್‌ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಗುಜರಾತ್ 19 ಓವರ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು 147 ರನ್‌ಗಳನ್ನು ಗಳಿಸಿ ಗೆದ್ದು ಬೀಗಿತು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು