Horrible accident near Nalatwad: Bike rider died on the spot

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ. ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ ಗೆ ಬುಧವಾರ ಸಂಜೆ ಬೈಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು ನಾಲತವಾಡ ಪಟ್ಟಣದ 5ನೇ ವಾರ್ಡಿನ ನಿವಾಸಿ ಸಂಗಪ್ಪ ಬಸಪ್ಪ ಗೌಡೂರ (28) ಎಂದು ಗುರುತಿಸಲಾಗಿದೆ. ಸ್ಥಳೀಯ ಪ.ಪಂಯಲ್ಲಿ ಪೌರ ಕಾರ್ಮಿಕನಾಗಿ ಸೇವೆ ಸಲ್ಲಿಸುತ್ತಿದ್ದ ಅವರು, ಪರಿಚಯದ ಮಹಿಳೆಯೊಂದಿಗೆ ಬೈಕ್‌ನಲ್ಲಿ ಆರೇಶಂಕರ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಆರೇಶಂಕರ ಕ್ರಾಸ್ ಹತ್ತಿರ, ಮುಂಭಾಗದಿಂದ ಬಂದ ಬಸ್ ಹಠಾತ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಸಂಗಪ್ಪ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಜೊತೆಗಿದ್ದ ಮಹಿಳೆಗೆ ಲಘು ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಪೊಲೀಸರು ಮುದ್ದೇಬಿಹಾಳ ಪಿಎಸ್ಐ ಸಂಜೀವ ತಿಪ್ಪಾರಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಪರಿಣಾಮ ಗ್ರಾಮದಲ್ಲಿ ಶೋಕವಾತಾವರಣ ಮನೆಮಾಡಿದೆ.

ಸೋಮವಾರ ಎರಡು ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದರು. ಇದಾದ ಮೇಲೆ ಬುಧವಾರ ಮತ್ತೇ ಈ ಅಪಘಾತ ನಡೆದಿದೆ. ಎರಡು ದಿನಗಳಲ್ಲಿ ನಾಲತವಾಡ ಗ್ರಾಮದ ಮೂರು ಜನರು ದುರ್ಮಣಕ್ಕೆ ಈಡಾಗಿದ್ದಾರೆ.

ವರದಿ : ಶಿವು ರಾಠೋಡ

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ