Urgent call from army: Farewell to eight soldiers of Hullur Tanda

ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಮುದ್ದೇಬಿಹಾಳ : ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸೇನೆಯಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುಲ್ಲೂರ ತಾಂಡಾದ ಎಂಟು ಯೋಧರು ಶನಿವಾರ ಮರಳಿ ದೇಶ ಸೇವೆಗೆ ಮರಳಿದರು.

ರಜೆಯ ಮೇಲೆ ತಮ್ಮ ಊರುಗಳಿಗೆ ಬಂದಿದ್ದ ಯೋಧರನ್ನು ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಿ ಬೀಳ್ಕೊಡಲಾಯಿತು. ದೇಶಕ್ಕಿಂತ ದೊಡ್ಡದು ಯಾವುದು ಇಲ್ಲ. ದೇಶ ಉಳಿದರೆ ನಾವು, ನಮ್ಮ ಕುಟುಂಬ ಇರಲು ಸಾಧ್ಯ. ಹೀಗಾಗಿ ಸೇನೆಯ ಕರೆಗೆ ತಕ್ಷಣ ಸೇವೆಗೆ ತೆರಳುತ್ತಿದ್ದೇವೆ ಎಂದು ಯೋಧ ಮುತ್ತಣ್ಣ ಲಮಾಣಿ ತಿಳಿಸಿದರು.

ಯೋಧರಾದ ಆನಂದ ರಾಠೋಡ, ಸುನೀಲ ರಾಠೋಡ, ವಿಠ್ಠಲ ಚವ್ಹಾಣ, ಆನಂದ ಚವ್ಹಾಣ, ರಾಜು ರಾಠೋಡ ಅವರಿಗೆ ದೇವಸ್ಥಾನದ ಅರ್ಚಕ ಗುರುರಾಜ ಆಚಾರ್ಯ, ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಯೋಧರ ಹಣೆಗಳಿಗೆ ಸಿಂಧೂರ (ತಿಲಕ) ಹಚ್ಚಿ ಪಾಕಿಗಳಿಗೆ ತಕ್ಕ ಪಾಠ ಕಲಿಸಿ ಬನ್ನಿ ಎಂದು ಶುಭ ಹಾರೈಸಿದರು.

ಗ್ರಾಮ ಪಂಚಾಯತ್ ಮಾಜಿ ಸದಸ್ಯ ಥಾವರಪ್ಪ ಜಾಧವ, ಮಾಜಿ ಸೈನಿಕ ನಾನಪ್ಪ ನಾಯಕ, ಥಾವರಪ್ಪ ರಾಠೋಡ, ಶೇಖರ ನಾಯಕ, ಸೋಮಸಿಂಗ ಲಮಾಣಿ, ಗುಂಡಪ್ಪ ಚವ್ಹಾಣ, ಚಂದ್ರಪ್ಪ ಚವ್ಹಾಣ, ಸೇವಾಲಾಲ ಚವ್ಹಾಣ, ಉಮೇಶ ರಾಠೋಡ, ನಾರಾಯಣ ನಾಯಕ ಮಲ್ಲು ಚವ್ಹಾಣ, ಮನೋಹರ ರಾಠೋಡ ಸೇರಿದಂತೆ ಅನೇಕರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ