Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ