Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ