Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ