Decision to teach ethical science: Schools to start from May 29-Minister Bangarappa

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ಮಕ್ಕಳನ್ನು ಸ್ವಾಗತಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಏಪಿಎಂಸಿ ಯಾರ್ಡ್ ನಲ್ಲಿ ಶನಿವಾರ ಪೂರ್ವಭಾವಿ ಸಭೆಯೊಂದರಲ್ಲಿ ಪಾಲ್ಗೊಂಡು ನಿರ್ಗಮಿಸುವ ವೇಳೆ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮುಖ್ಯಮಂತ್ರಿಗಳು ಶಾಲೆಗಳಲ್ಲಿ ನೈತಿಕ ಶಿಕ್ಷಣ ನೀಡಬೇಕು ಎಂದು ಸೂಚಿಸಿದ್ದು ಆ ಬಗ್ಗೆ ಮೇಲ್ಮನೆಯಲ್ಲೂ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿದೆ. ಈ ವರ್ಷ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ, ಪ್ರೌಢ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದರು.

ಶಾಲಾ ಆರಂಭೋತ್ಸವದ ದಿನದಂದೇ ಎಲ್ಲ ಮಕ್ಕಳಿಗೆ ಸಮವಸ್ತ್ರ ಪಠ್ಯಪುಸ್ತಕ ವಿತರಿಸಲಾಗುತ್ತದೆ. ಶೂ, ಸಾಕ್ಸ್ ಹಂತಹಂತವಾಗಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅದಕ್ಕೂ ಒಂದು ಕಠಿಣ ಕಾನೂನು ರೂಪಿಸಿ ಶಾಲಾ ಆರಂಭದಲ್ಲೇ ಮಕ್ಕಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶೂನ್ಯ ಫಲಿತಾಂಶ ಬಂದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಕ್ರಮ : ಶೂನ್ಯ ಫಲಿತಾಂಶ ಬಾರದಂತೆ ನೋಡಿಕೊಳ್ಳಲಾಗುವುದು. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದಾಗ ಕೆಲವೊಂದು ಶಾಲೆಗಳು ಶೂನ್ಯ ಬರುತ್ತಿರುತ್ತವೆ. ಅವುಗಳು ಬರದಂತೆ ನೋಡಿಕೊಳ್ಳಲಾಗುವುದು. ಮಕ್ಕಳು ಸ್ವಂತ ಶಕ್ತಿಯ ಮೇಲೆ ಪರೀಕ್ಷೆ ಬರೆಯುತ್ತಿದ್ದಾರೆ. ಕಾಪಿ ಹೊಡೆಯುವುದು ಕಡಿಮೆ ಆಗಿದೆ. ದೇಶದಲ್ಲೇ ಮೊದಲು ನಮ್ಮಲ್ಲಿ ಪರೀಕ್ಷಾ ವ್ಯವಸ್ಥೆಗೆ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು ಅದನ್ನು ಕೇಂದ್ರದ ಪರೀಕ್ಷೆಗಳಿಗೂ ಅಳವಡಿಸಿಕೊಳ್ಳಲಾಗಿದೆ ಎಂದು ಬಂಗಾರಪ್ಪ ತಿಳಿಸಿದರು.

ಡಿಡಿಪಿಐ, ಬಿಇಒಗಳ ಕೊರತೆ: ರಾಜ್ಯದಲ್ಲಿ ಡಿಡಿಪಿಐ, ಬಿಇಒಗಳ ಕೊರತೆ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸುದ್ದಿಗಾರರು ವಿಜಯಪುರ ಜಿಲ್ಲೆಗೆ ಕಾಯಂ ಡಿಡಿಪಿಐ ನೇಮಕ ಯಾವಾಗ ಮಾಡುತ್ತೀರಿ ಎಂದು ಕೇಳಲಾದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು. ಪದೋನ್ನತಿ ನೀಡಿ ನೇಮಕ ಮಾಡಬೇಕಾಗಿದೆ. ಸ್ಥಾನಗಳ ಸಂಖ್ಯೆಯಲ್ಲಿ ಏರುಪೇರಾಗಬಹುದು. ಉಸ್ತುವಾರಿ ಸಚಿವರ ಶಿಫಾರಸ್ಸು ಪಡೆದುಕೊಂಡು ನೇಮಕ ಮಾಡಲಾಗುತ್ತದೆ. ಕಲಿಕಾ ಬಂಧು, ಸೇತುಬಂಧ ಸಂದರ್ಭದಲ್ಲಿ ಡಿಡಿಪಿಐ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದರು. ಶಾಸಕ ಸಿ.ಎಸ್.ನಾಡಗೌಡ ಉಪಸ್ಥಿತರಿದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ