Tribute to Soldiers' Families: May. Tiranga Yatra on 20th

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತೀಯ ಸೇನೆಯ ಪರಾಕ್ರಮವನ್ನು ಇಡೀ ವಿಶ್ವವೇ ನಿಬ್ಬೆರಗು ಕಣ್ಣುಗಳಿಂದ ನೋಡುತ್ತಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಸೇನೆಯ ಮೇಲೆ ಪೂರ್ಣ ನಂಬಿಕೆ ಇಲ್ಲ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಸೇನೆಯ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಸ್ತುತ ಸೈನ್ಯದಲ್ಲಿ ಸೇವೆಯಲ್ಲಿರುವ ಸೈನಿಕರ ಕುಟುಂಬಸ್ಥರನ್ನು ಕರೆದು ಸನ್ಮಾನಿಸುವ ಕಾರ್ಯ ಮಾಡುತ್ತೇವೆ. ಮೇ.೨೦ ರಂದು ಸಂಜೆ 4ಕ್ಕೆ ಮುದ್ದೇಬಿಹಾಳದ ಸೈನಿಕ ಮೈದಾನದಿಂದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಂಗಣದವರೆಗೆ ರ‍್ಯಾಲಿ ನಡೆಸಲಾಗುತ್ತದೆ. ಅಲ್ಲಿ ಸೈನಿಕರ ಕುಟುಂಬದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೆಲವು ತಿಳಿವಳಿಕೆ ಇಲ್ಲದವರು ಸೇನೆಯ ಕಾರ್ಯಾಚರಣೆಯ ಕುರಿತು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಸಚಿವರು, ಶಾಸಕರು ದೇಶದ ಭದ್ರತೆಯ ವಿಷಯದ ಕುರಿತು ಹಗುರವಾಗಿ ಮಾತನಾಡುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.

ಕಾಂಗ್ರೆಸ್‌ನ್ನು ದೇಶದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಪ್ರಜೆಗಳು ಕಳೆದ 15 ವರ್ಷಗಳಿಂದ ತೀರ್ಪು ಕೊಟ್ಟಿದ್ದಾರೆ. ಯಾರು ದೇಶಪ್ರೇಮಿಗಳು ಯಾರು ಅಲ್ಲ ಎಂಬುದನ್ನು ತಿಳಿಸಿದ್ದಾರೆ. ರಕ್ಷಣಾ ಸಚಿವರು ಭಯೋತ್ಪಾದಕರು ಧರ್ಮ ಕೇಳಿ ನಮ್ಮವರನ್ನು ಹತ್ಯೆ ಮಾಡಿದ್ದಾರೆ. ಆದರೆ ಸೇನೆಯವರು ಭಯೋತ್ಪಾದಕರ ಕರ್ಮ ಕೇಳಿ ಅವರ ಎದೆ ಸೀಳುವ ಕೆಲಸ ಮಾಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಮಾತನಾಡಬೇಕು ಎಂದು ಹೇಳಿದರು.

ದೇಶದ ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಹಾಗೂ ವಿಜಯೋತ್ಸವವಕ್ಕೆ ಪಕ್ಷಾತೀತವಾಗಿ ತಿರಂಗಾಯಾತ್ರೆ ನಡೆಸಲಾಗುತ್ತದೆ. ನಾಗರಿಕ ಸಮಾಜದ ಎಲ್ಲ ಸಂಘಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ವಿನಂತಿಸವುದಾಗಿ ತಿಳಿಸಿದರು.

ವೈದ್ಯಕೀಯ ಪ್ರಕೋಷ್ಠದ ಡಾ. ಸಿ. ಕೆ. ಶಿವಯೋಗಿಮಠ, ಮಾಜಿ ಸೈನಿಕ ಎಸ್. ಕೆ. ಕಟ್ಟಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾವಸಾಹೇಬ ದೇಸಾಯಿ ಮಾತನಾಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಡಾ.ವೀರೇಶ ಪಾಟೀಲ, ಸಂಜೀವ ಬಾಗೇವಾಡಿ, ವಿಜಯಕುಮಾರ ಬಡಿಗೇರ, ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಇದ್ದರು.

Latest News

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ