Tribute to Soldiers' Families: May. Tiranga Yatra on 20th

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಸೈನಿಕರ ಕುಟುಂಬದವರಿಗೆ ಸನ್ಮಾನ: ಮೇ. 20 ರಂದು ತಿರಂಗಾ ಯಾತ್ರೆ

ಮುದ್ದೇಬಿಹಾಳ : ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಉಗ್ರರನ್ನು ಸದೆಬಡಿದ ಭಾರತೀಯ ಸೇನೆಯನ್ನು ಅಭಿನಂದಿಸಿ ವಿಜಯೋತ್ಸವವನ್ನು ಆಚರಿಸಲು ಮೇ.20 ರಂದು ಪಟ್ಟಣದಲ್ಲಿ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಾರತೀಯ ಸೇನೆಯ ಪರಾಕ್ರಮವನ್ನು ಇಡೀ ವಿಶ್ವವೇ ನಿಬ್ಬೆರಗು ಕಣ್ಣುಗಳಿಂದ ನೋಡುತ್ತಿದೆ. ಆದರೆ, ಕಾಂಗ್ರೆಸ್ಸಿಗರಿಗೆ ಸೇನೆಯ ಮೇಲೆ ಪೂರ್ಣ ನಂಬಿಕೆ ಇಲ್ಲ. ಅದಕ್ಕಾಗಿಯೇ ಆ ಪಕ್ಷದ ನಾಯಕರು ಸೇನೆಯ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಸ್ತುತ ಸೈನ್ಯದಲ್ಲಿ ಸೇವೆಯಲ್ಲಿರುವ ಸೈನಿಕರ ಕುಟುಂಬಸ್ಥರನ್ನು ಕರೆದು ಸನ್ಮಾನಿಸುವ ಕಾರ್ಯ ಮಾಡುತ್ತೇವೆ. ಮೇ.೨೦ ರಂದು ಸಂಜೆ 4ಕ್ಕೆ ಮುದ್ದೇಬಿಹಾಳದ ಸೈನಿಕ ಮೈದಾನದಿಂದ ಎಪಿಎಂಸಿಯಲ್ಲಿರುವ ಕರ್ನಾಟಕ ಬ್ಯಾಂಕ್ ಸಭಾಂಗಣದವರೆಗೆ ರ‍್ಯಾಲಿ ನಡೆಸಲಾಗುತ್ತದೆ. ಅಲ್ಲಿ ಸೈನಿಕರ ಕುಟುಂಬದವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಕೆಲವು ತಿಳಿವಳಿಕೆ ಇಲ್ಲದವರು ಸೇನೆಯ ಕಾರ್ಯಾಚರಣೆಯ ಕುರಿತು ಅಸಂಬದ್ಧವಾಗಿ ಮಾತನಾಡುತ್ತಿದ್ದಾರೆ. ಕೆಲವು ಕಾಂಗ್ರೆಸ್ ಸಚಿವರು, ಶಾಸಕರು ದೇಶದ ಭದ್ರತೆಯ ವಿಷಯದ ಕುರಿತು ಹಗುರವಾಗಿ ಮಾತನಾಡುತ್ತಿರುವುದು ನಾಚಿಗೇಡಿನ ಸಂಗತಿ ಎಂದರು.

ಕಾಂಗ್ರೆಸ್‌ನ್ನು ದೇಶದಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಪ್ರಜೆಗಳು ಕಳೆದ 15 ವರ್ಷಗಳಿಂದ ತೀರ್ಪು ಕೊಟ್ಟಿದ್ದಾರೆ. ಯಾರು ದೇಶಪ್ರೇಮಿಗಳು ಯಾರು ಅಲ್ಲ ಎಂಬುದನ್ನು ತಿಳಿಸಿದ್ದಾರೆ. ರಕ್ಷಣಾ ಸಚಿವರು ಭಯೋತ್ಪಾದಕರು ಧರ್ಮ ಕೇಳಿ ನಮ್ಮವರನ್ನು ಹತ್ಯೆ ಮಾಡಿದ್ದಾರೆ. ಆದರೆ ಸೇನೆಯವರು ಭಯೋತ್ಪಾದಕರ ಕರ್ಮ ಕೇಳಿ ಅವರ ಎದೆ ಸೀಳುವ ಕೆಲಸ ಮಾಡಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಎಚ್ಚರದಿಂದ ಮಾತನಾಡಬೇಕು ಎಂದು ಹೇಳಿದರು.

ದೇಶದ ಸೈನ್ಯದ ಕಾರ್ಯಾಚರಣೆಗೆ ಬೆಂಬಲ ಹಾಗೂ ವಿಜಯೋತ್ಸವವಕ್ಕೆ ಪಕ್ಷಾತೀತವಾಗಿ ತಿರಂಗಾಯಾತ್ರೆ ನಡೆಸಲಾಗುತ್ತದೆ. ನಾಗರಿಕ ಸಮಾಜದ ಎಲ್ಲ ಸಂಘಸಂಸ್ಥೆಗಳು ಪಾಲ್ಗೊಳ್ಳಬೇಕು ಎಂದು ವಿನಂತಿಸವುದಾಗಿ ತಿಳಿಸಿದರು.

ವೈದ್ಯಕೀಯ ಪ್ರಕೋಷ್ಠದ ಡಾ. ಸಿ. ಕೆ. ಶಿವಯೋಗಿಮಠ, ಮಾಜಿ ಸೈನಿಕ ಎಸ್. ಕೆ. ಕಟ್ಟಿ, ಲಯನ್ಸ್ ಕ್ಲಬ್‌ನ ಅಧ್ಯಕ್ಷ ರಾವಸಾಹೇಬ ದೇಸಾಯಿ ಮಾತನಾಡಿದರು. ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಡಾ.ವೀರೇಶ ಪಾಟೀಲ, ಸಂಜೀವ ಬಾಗೇವಾಡಿ, ವಿಜಯಕುಮಾರ ಬಡಿಗೇರ, ಬಿಜೆಪಿ ಮುಖಂಡರು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ