Wall poster, sticker release: Muddebihala village deity fair from May 30

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ವಾಲ್‌ಪೋಸ್ಟರ್, ಸ್ಟಿಕ್ಕರ್ ಬಿಡುಗಡೆ:ಮೇ.30 ರಿಂದ ಮುದ್ದೇಬಿಹಾಳ ಗ್ರಾಮದೇವತೆ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ನಡೆಯುವ ಗ್ರಾಮದೇವತೆ(ದ್ಯಾಮವ್ವ ದೇವಿ) ಜಾತ್ರಾ ಮಹೋತ್ಸವ ಮೇ.30 ರಿಂದ ಜೂ.3ರವರೆಗೆ ನಡೆಯಲಿದ್ದು ನಾನಾ ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಾನ ದೇವಸ್ಥಾನದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಜಾತ್ರಾ ಮಹೋತ್ಸವದ ವಾಲ್‌ಪೋಸ್ಟರ್ ಹಾಗೂ ವಾಹನಗಳಿಗೆ ಅಂಟಿಸುವ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ ಮಾತನಾಡಿ, ಜಾತ್ರೆಯನ್ನು ಎಲ್ಲರೂ ಒಗ್ಗೂಡಿ ಮಾಡೋಣ ಎಂದು ಹೇಳಿದರು.

ಜಾತ್ರೆಯಲ್ಲಿ ಏನಿದೆ ಏನಿಲ್ಲ : ಮೇ.30 ರಂದು ಗ್ರಾಮದೇವತೆ ಹಾಗೂ ಶಾರದಾ ದೇವಿ ಭವ್ಯ ಮೆರವಣಿಗೆ, ಸಂಜೆ 6.30ಕ್ಕೆ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಲಕ್ಷ್ಮಿ ಚಿತ್ರಮಂದಿರದ ಎದುರಿಗೆ ಇರುವ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ. ರಾತ್ರಿ 11ಕ್ಕೆ ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಡೊಳ್ಳಿನ ಹಾಡಿಕೆ ಕಾರ್ಯಕ್ರಮ ಜರುಗುವುದು.

ಮೇ.31 ರಂದು ಸೈನಿಕ ಮೈದಾನದಲ್ಲಿ ವಾದಿ ಪ್ರತಿವಾದಿ ಗೀಗೀ ಪದಗಳು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ನಾಲ್ಕು ದಿನಗಳ ಕಾಲ ನಡೆಯಲಿದೆ. ಅಂದು ಬೆಳಗ್ಗೆ 10 ಕ್ಕೆ ನಾಲತವಾಡ ರಸ್ತೆಯಲ್ಲಿ ಹೊಲದಲ್ಲಿ ಪುಟ್ಟಿಗಾಡಿ ಸ್ಪರ್ಧೆ, ಮದ್ಯಾಹ್ನ 2ಕ್ಕೆ ಎತ್ತಿನ ಕೂಡುಗಾಡಿಗಳ ಓಟದ ಸ್ಪರ್ಧೆ, ರಾತ್ರಿ 8ಕ್ಕೆ ಜಾನಪದ ಜಾತ್ರೆ ಬಿಡಿಓ ಕ್ವಾರ್ಟರ್ಸ್ ನಲ್ಲಿ ನಡೆಯಲಿದೆ.

ಜೂ.1 ರಂದು ಮದ್ಯಾಹ್ನ 12ಕ್ಕೆ ರಾಜ್ಯಮಟ್ಟದ ತೆರಬಂಡಿ ಸ್ಪರ್ಧೆ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7ಕ್ಕೆ ಮದ್ದು ಸುಡುವ ಹಾಗೂ ಟ್ರ್ಯಾಕ್ಟರ್ ರಿವರ್ಸ್ ಸ್ಪರ್ಧೆ, ರಾತ್ರಿ 8ಕ್ಕೆ ನಗೆ ಹಬ್ಬ ನಡೆಯಲಿದೆ.

ಜೂ.2 ರಂದು ಬೆಳಗ್ಗೆ 10ಕ್ಕೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ,10.15 ಕ್ಕೆ ಸ್ಲೋ ಬೈಕ್ ರೇಸ್ ಸ್ಪರ್ಧೆ,10.30ಕ್ಕೆ ಟಗರಿನ ಕಾಳಗ, ಮದ್ಯಾಹ್ನ 3ಕ್ಕೆ ಜಂಗೀ ನಿಕಾಲಿ ಕುಸ್ತಿಗಳು, ಸಂಜೆ 7.30ಕ್ಕೆ ಲೈವ್ ಸಂಗೀತ ರಸಮಂಜರಿ ಕಾರ್ಯಕ್ರಮ,8ಕ್ಕೆ ಜಾನಪದ ಜಾತ್ರೆ ನಡೆಯಲಿದೆ. ಜೂ.
3 ರಂದು ಬೆಳಗ್ಗೆ 9ಕ್ಕೆ ಭಾರ ಎತ್ತುವ ಸ್ಪರ್ಧೆ, ಮದ್ಯಾಹ್ನ 4ಕ್ಕೆ ಗ್ರಾಮದೇವತೆ, ಶಾರದಾ ದೇವಿಯರನ್ನು ಮೂಲಸ್ಥಳಕ್ಕೆ ಕರೆದೊಯ್ಯುವುದು. ರಾತ್ರಿ 8 ಗಂಟೆಗೆ ಸಂಗೀತ ರಸಮಂಜರಿ ನಡೆಯಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಂಗಭೂಮಿ ಕಲೆಗೆ ಕೊಕ್ : ಐದು ದಿನಗಳ ಜಾತ್ರೆಯಲ್ಲಿ ರಂಗಭೂಮಿ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಕಮಿಟಿಯವರು ಸಾಂಪ್ರದಾಯಿಕ ನಾಟಕ ಪ್ರದರ್ಶನಕ್ಕೆ ಅವಕಾಶ ಕಲ್ಪಿಸದೇ ಇರುವುದು ರಂಗಭೂಮಿ ಕಲಾವಿದರ ಬೇಸರಕ್ಕೆ ಕಾರಣವಾಗಿದೆ. ಸ್ಥಳೀಯ ತಾಳಿಕೋಟಿಯ ರಾಜು ತಾಳಿಕೋಟೆ, ನಾಲತವಾಡದ ಸಿದ್ದು ಹಂಪನಗೌಡರ ಅವರ ನಾಟಕ ಕಂಪನಿಗಳಿದ್ದರೂ ಕಮೀಟಿಯವರು ನಾಲ್ಕು ದಿನಗಳ ಕಾಲ ಟಿವಿ ಕಲಾವಿದರ ಪ್ರದರ್ಶನಕ್ಕೆ ಒತ್ತು ನೀಡಿರುವುದು ನಾಟಕ ಪ್ರೇಮಿಗಳಿಗೆ ನಿರಾಸೆಯನ್ನುಂಟು ಮಾಡಿದೆ. ಸಾಮಾಜಿಕ, ಭಕ್ತಿ ಪ್ರದಾನ ನಾಟಕ ಪ್ರದರ್ಶನಕ್ಕೆ ಆದ್ಯತೆ ನೀಡಬೇಕಿತ್ತು ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬಂದಿವೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ