Villagers submit petition to Tapam EO: Address lack of infrastructure in Shirola village

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ತಾಪಂ ಇಒಗೆ ಗ್ರಾಮಸ್ಥರ ಮನವಿ ಸಲ್ಲಿಕೆ:ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಪರಿಹರಿಸಿ

ಮುದ್ದೇಬಿಹಾಳ : ತಾಲ್ಲೂಕಿನ ಕವಡಿಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಶಿರೋಳ ಗ್ರಾಮದಲ್ಲಿ ಮೂಲಸೌಕರ‍್ಯಗಳ ಕೊರತೆ ಉಂಟಾಗಿದ್ದು ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಶುಕ್ರವಾರ ತಾಪಂ ಇಒ ನಿಂಗಪ್ಪ ಮಸಳಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ತಾಪಂ ಕಚೇರಿಗೆ ಆಗಮಿಸಿದ್ದ ಗ್ರಾಮಸ್ಥರು ಇಒಗೆ ಮನವಿ ಪತ್ರ ಸಲ್ಲಿಸಿದರು. ಮುಖಂಡ ರಮೇಶ ಬೆಲವಂತ್ರಕAಠಿ ಮಾತನಾಡಿ, ಶಿರೋಳ ಗ್ರಾಮಕ್ಕೆ ಪ್ರಮುಖ ಕುಡಿವ ನೀರಿನ ಮೂಲವಾಗಿರುವ ಬಾವಿ ಪಕ್ಕದ ಹಳ್ಳದ ನೀರಿನ ಜೊತೆ ಸೇರಿ ಕಲುಷಿತಗೊಳ್ಳುತ್ತಿದ್ದು ಅನೇಕ ರೋಗರುಜಿಗಳಿಂದ ಗ್ರಾಮಸ್ಥರು ಬಳಲುವಂತಾಗಿದೆ. ಕೂಡಲೇ ಹಳ್ಳವನ್ನು ಸ್ವಚ್ಛತೆಗೊಳಿಸಲು ಮುಂದಾಗಬೇಕು. ಗ್ರಾಮದಲ್ಲಿನ ಚರಂಡಿಗಳನ್ನು ಕಾಲಕಾಲಕ್ಕೆ ಸ್ವಚ್ಛತೆಗೊಳಿಸುತ್ತಿಲ್ಲ. ಎರಡು ವರ್ಷದ ಹಿಂದೆ ಆರಂಭವಾಗಿರುವ ಜೆಜೆಎಮ್ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದ್ದು ಅಗೆದಿರುವ ಗುಂಡಿಗಳಿಂದ ಗ್ರಾಮಸ್ಥರ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ ಎಂದು ದೂರಿದರು.

ವಾಲ್ಮೀಕಿ ಸಮಾಜದ ಮುಖಂಡ ರಾಮಣ್ಣ ರಾಜನಾಳ ಮಾತನಾಡಿ, ಗ್ರಾಮದ ಆಂಜನೇಯ ದೇವಸ್ಥಾನ ಹಾಗೂ ಅಂಬೇಡ್ಕರ್ ಸರ್ಕಲ್ ಹತ್ತಿರ ಕಸ ಸಂಗ್ರಹ ಮೀತಿ ಮೀರಿದ್ದು ಕ್ರಿಮಿಕೀಟಗಳು ಹೆಚ್ಚಾಗಿವೆ. ಕುಡಿವ ನೀರಿನ ಪೈಪಲೈನ್ ಸೋರಿಕೆ ಹೆಚ್ಚಾಗಿದ್ದು ನೀರು ಪೋಲಾಗುತ್ತಿದೆ. ಕುಡಿವ ನೀರು ಕಲುಷಿತವಾಗಿ ಪೂರೈಕೆಯಾಗುತ್ತಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಗಮನ ಹರಿಸುತ್ತಿಲ್ಲ. ಗ್ರಾಮದಲ್ಲಿ ಬೀದಿ ದೀಪ ವ್ಯವಸ್ಥೆ ಸರಿಯಾಗಿಲ್ಲ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿದ ತಾಪಂ ಇಒ ನಿಂಗಪ್ಪ ಮಸಳಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಮನವಿ ಸಲ್ಲಿಕೆ ಸಮಯದಲ್ಲಿ ಸಿದ್ದಪ್ಪ ಕುರಿ, ಗ್ರಾಪಂ ಮಾಜಿ ಸದಸ್ಯ ಶಂಕರಗೌಡ ಪಾಟೀಲ, ಶಂಕರಗೌಡ ಹುಣಶ್ಯಾಳ, ಸಿದ್ದಪ್ಪ ಚಿಗರಿ, ಶ್ರೀಕಾಂತ ಹೆಬ್ಬಾಳ, ಸಿದ್ದನಗೌಡ ಲೇಬಗೇರಿ, ಗಂಗಾಧರ ಬಡಿಗೇರ, ಅಕ್ರಮ ಮುದ್ನಾಳ, ಮಲ್ಲಿಕಾರ್ಜುನ ಹೆಬ್ಬಾಳ, ಯಲಗೂರೇಶ ನಾವದಗಿ, ಬಸನಗೌಡ ಬಿರಾದಾರ, ಅಜಯ ಪಾಟೀಲ, ಅಮರೇಶ ಮಾಲೀಪಾಟೀಲ ಮೊದಲಾದವರು ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,