Highest medical award: Rs. crore scholarship from Oxford Patil's NEET Academy

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಅತೀ ಹೆಚ್ಚು ಮೆಡಿಕಲ್ ಕೊಟ್ಟ ಹೆಗ್ಗಳಿಕೆ : ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿಯಿಂದ ಕೋಟಿ ರೂ.ಸ್ಕಾಲರಶಿಪ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿಯೇ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಕೊಟ್ಟಿರುವ ಕೀರ್ತಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಗಿದ್ದು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಂಸ್ಥೆಯಿಂದ ನಿರಂತರವಾಗಿ ಸ್ಕಾಲರಶಿಪ್ ಎಕ್ಸಾಂ ನಡೆಸಿಕೊಂಡು ಬರಲಾಗುತ್ತಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ಹೇಳಿದರು.

ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ನೀಟ್ ಅಕಾಡೆಮಿ ನೇತೃತ್ವದಲ್ಲಿ ಶನಿವಾರ ಸ್ಕಾಲರ್‌ಶಿಪ್ ಎಕ್ಸಾಂ-2025ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಸಿ ಅವರು ಮಾತನಾಡಿದರು. 2021ರಲ್ಲಿ 143, 2022ರಲ್ಲಿ 145, 2023ರಲ್ಲಿ 156, 2024ರಲ್ಲಿ 172 ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಂಡಿದ್ದಾರೆ. ಈ ವರ್ಷವೂ 170ಕ್ಕೂ ಹೆಚ್ಚು ಮೆಡಿಕಲ್ ಸೀಟುಗಳನ್ನು ಸಂಸ್ಥೆಯಡಿ ಓದಿದ ವಿದ್ಯಾರ್ಥಿಗಳು ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಪ್ರಥಮ ಬಾರಿಗೆ ನೀಟ್ ಅಕಾಡೆಮಿಯಿಂದ ಸ್ಕಾಲಶಿಪ್ ಎಕ್ಸಾಂ ನಡೆಸಿದ್ದು ಉತ್ತರ ಕರ್ನಾಟಕ ಭಾಗದ ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರೂ ನಮ್ಮ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ನಮ್ಮ ಸಂಸ್ಥೆಯಡಿ ಓದುವ ವಿದ್ಯಾರ್ಥಿಗಳ ಕಠಿಣ ಪರಿಶ್ರಮದ ಓದು ಈ ಸಾಧನೆಗೆ ಕಾರಣವಾಗಿದೆ. ನಮ್ಮ ಸಂಸ್ಥೆಯಿಂದ ಒಂದೇ ವರ್ಷದ ಅವಧಿಯಲ್ಲಿ ವಿವಿಧ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳ ಉಚಿತ ಶಿಕ್ಷಣಕ್ಕಾಗಿ ಆರು ಕೋಟಿ ರೂ. ಗಳಿಗಿಂತಲೂ ಹೆಚ್ಚು ಮೊತ್ತವನ್ನು ಸ್ಕಾಲರ್‌ಶಿಪ್ ರೂಪದಲ್ಲಿ ನೀಡಲಾಗುತ್ತಿದೆ ಎಂದರು.

ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಮಾತನಾಡಿ, ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿ ಅಖೀಲ್ ಅಹ್ಮದ್ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ‍್ಯಾಂಕ ಪಡೆದಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರುವ ಸಂಗತಿ ಎಂದರು.

ನೀಟ್ ಅಕಾಡೆಮಿಯಿಂದ ನಡೆದ ಪರೀಕ್ಷೆಯಲ್ಲಿ 1-20 ನೇ ಸ್ಥಾನ ಪಡೆದ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಊಟ ವಸತಿಯೊಂದಿಗೆ ಒಂದು ವರ್ಷದ ಶಿಕ್ಷಣ ಉಚಿತವಾಗಿ ನೀಡಲಾಗುತ್ತದೆ. 20 -40ನೇ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಂಸ್ಥೆಯಿಂದ ಘೋಷಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ.ನಾಗೇಶ ಬಿರಾಜದಾರ, ರಾಜಶೇಖರ ಹಿರೇಮಠ, ಮಂಜುನಾಥ ಮಂಕಣಿ, ಆನಂದ ನಾವಗಿ, ಸಂದೀಪ ಘೋರ್ಪಡೆ, ಮಹಾಂತೇಶ ಬಿರಾದಾರ ಇದ್ದರು.

ಉಚಿತ ಶಿಕ್ಷಣಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು:
ಪರೀಕ್ಷೆಯಲ್ಲಿ ಮೊದಲ 20 ಸ್ಥಾನ ಪಡೆದ ಸಮರ್ಥ ಸೋನವಾಲ್ಕರ, ಭೀಮನಗೌಡ ಚೌಧರಿ, ಚೈತನ್ಯ ಜೈನಾಪೂರ, ಮಂಜುನಾಥ ಕರಜಗಿ, ಸ್ಪೂರ್ತಿ, ಸಂಜಯಕುಮಾರ ಸಿ., ಸ್ಪೂರ್ತಿ ಮುಧೋಳ, ಆದರ್ಶ ಬಿರಾದಾರ, ಪೂನಮ್ ರಾಠೋಡ, ತನುಜಾ, ಮಂಜುನಾಥ ಕಾಖಂಡಕಿ, ಬಸವರಾಜ ರಾಠೋಡ, ಮನೋಜ ಚಾಕೋಟಿ, ಪವಿತ್ರಾ ಬಡಕಣ್ಣವರ, ಅನಿಲ ಕದಂ, ಶ್ರೀಗೌರಿ, ಮಲ್ಲಿಕಾರ್ಜುನ ಗುಬ್ಬೇವಾಡ, ಸುಷ್ಮಿತಾ ಬಿದರಿ, ಪ್ರಭಾವತಿ ಸರಕಾರ, ಸುಪ್ರಿಯಾ ಮ್ಯಾಗೇರಿ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಗೆ ಒಟ್ಟು 455 ವಿದ್ಯಾರ್ಥಿಗಳು ಹಾಜರಾಗಿದ್ದರು.

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.