Honoring meritorious students: Let children experience childhood-Nadahalli

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಮಕ್ಕಳಿಗೆ ಬಾಲ್ಯ ಅನುಭವಿಸಲು ಬಿಡಿ-ನಡಹಳ್ಳಿ

ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ: ಮಕ್ಕಳಿಗೆ ಬಾಲ್ಯ ಅನುಭವಿಸಲು ಬಿಡಿ-ನಡಹಳ್ಳಿ

ಮುದ್ದೇಬಿಹಾಳ : ಮಕ್ಕಳಿಗೆ ಗುಣಮಟ್ಟವಾದದ್ದೆನ್ನೆಲ್ಲಾ ನಾವು ಕೊಡುತ್ತಿದ್ದೇವೆ. ಆದರೆ, ಆಹಾರ ಮಾತ್ರ ಕಲಬೆರಕೆ ಆಗಿದೆ. ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಗುಣಮಟ್ಟದ ಆಹಾರ ಕೊಡುವ ಕೆಲಸ ಆಗಬೇಕಿದೆ ಎಂದು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಹೇಳಿದರು.

ಪಟ್ಟಣದ ವಿದ್ಯಾಸ್ಪೂರ್ತಿ ಸ್ಕೂಲ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದು ಎಲ್ಲರ ಮಕ್ಕಳು ಡಾಕ್ಟರ್, ಎಂಜಿನಿಯರ್ ಆಗಬೇಕು ಎಂಬ ಆಸೆಯನ್ನು ಹೊಂದಿದ್ದಾರೆ. ಆದರೆ, ಒಬ್ಬ ಮಗುವು ನಾನು ದೇಶಕ್ಕೆ ಅನ್ನ ಹಾಕುವ ರೈತನಾಗುತ್ತೇನೆ ಎಂದು ಹೇಳುವುದಿಲ್ಲ. ಪಾಲಕರು ತಮ್ಮ ವಿಚಾರಗಳನ್ನು ಬದಲಿಸಿಕೊಳ್ಳಬೇಕು. ಮಕ್ಕಳಿಗೆ ಅವರ ಬಾಲ್ಯ ಅನುಭವಿಸಲು ಬಿಡಬೇಕು ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಬಸಮ್ಮ ಸಿದರೆಡ್ಡಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ಕಾರ್ಯ ನಮ್ಮ ಸಂಸ್ಥೆಯಿಂದ ಮಾಡಲಾಗುತ್ತಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಮಹಾಂತೇಶ ಸಿದರೆಡ್ಡಿ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ತರಬೇತಿ, ಶಿಕ್ಷಣ ಪಡೆದ ಎಂಟು ವಿದ್ಯಾರ್ಥಿಗಳು ನವೋದಯ, 41 ವಿದ್ಯಾರ್ಥಿಗಳು ಆದರ್ಶ, 52 ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಪ್ರಸಕ್ತ ವರ್ಷದಲ್ಲಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್. ಬಿ. ಚಲವಾದಿ, ಶಂಕರ ಡಮನಾಳ, ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕ ವಿ. ವಿ. ಮಾಶೆಟ್ಟಿ ಮಾತನಾಡಿದರು. ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಸೋಮನಗೌಡ ಬಿರಾದಾರ, ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ರಾಮನಗೌಡ ಸಿದರೆಡ್ಡಿ, ಪತ್ರಕರ್ತ ಶಂಕರ ಹೆಬ್ಬಾಳ, ಗುಲಾಮಮೊಹ್ಮದ ದಫೇದಾರ ಇದ್ದರು. ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ