Dharamsabha in Jattagi, mass marriage: Mass marriages are a model for society

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಜಟ್ಟಗಿಯಲ್ಲಿ ಧರ್ಮಸಭೆ, ಸಾಮೂಹಿಕ ವಿವಾಹ: ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿ

ಮುದ್ದೇಬಿಹಾಳ : ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿದ್ದು ಉಳ್ಳವರು ತಮ್ಮ ಮಕ್ಕಳ ಮದುವೆಗಳಲ್ಲಿ ಬಡವರ ಮದುವೆಗಳನ್ನು ಮಾಡಿಕೊಡುವ ಸಂಪ್ರದಾಯ ಆಚರಣೆಯಲ್ಲಿ ತರಬೇಕು ಎಂದು ಯರಝರಿ ಯಲ್ಲಾಲಿಂಗೇಶ್ವರ ಮಠದ ಮಲ್ಲಾರಲಿಂಗ ಸ್ವಾಮೀಜಿ ಹೇಳಿದರು.

ತಾಲ್ಲೂಕು ಜಟ್ಟಗಿಯ ಬೆಳ್ಳೇಶ್ವರ ಜಾತ್ರೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ಜಟ್ಟಗಿ ಬೆಳ್ಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಗ್ರಾಮಸ್ಥರೆ ದೇಣಿಗೆ ಸಂಗ್ರಹಿಸಿ ಇಂತಹ ಧಾರ್ಮಿಕ ಕಾರ್ಯ ನಡೆಸುತ್ತಿರುವುದು ಸಮಾಜದಲ್ಲಿರುವ ಉಳ್ಳವರಿಗೆ ಮಾದರಿಯಾಗಿದೆ ಎಂದರು.

ಜಾತ್ರಾ ಕಮೀಟಿ ಅಧ್ಯಕ್ಷ ಬಿ.ಕೆ.ಬಿರಾದಾರ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ ಮಾತನಾಡಿ, ನಾವು ಮಾಡುವ ಜಾತ್ರೆಗಳು ಮತ್ತೊಬ್ಬರಿಗೆ ಭಾರವಾಗದಂತೆ ಇರಬೇಕು. ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳನ್ನು ಜಾತ್ರೆಯ ಕಾರ್ಯಕ್ರಮಗಳಲ್ಲಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಸಿ.ಎಸ್.ನಾಡಗೌಡ, ಗೊಳಸಾರಮಠದ ಅಭಿನವ ಪುಂಡಲೀಕ ಸ್ವಾಮೀಜಿ, ಸೀತಿಮನಿಯ ವೈಶಿಷ್ಟ ಸ್ವಾಮೀಜಿ, ಜಟ್ಟಗಿಯ ಸೋಮಲಿಂಗ ಸ್ವಾಮೀಜಿ, ಬಾಗಲಕೋಟೆ ಶಾಸಕ ಎಚ್.ವಾಯ್.ಮೇಟಿ, ಹುಲ್ಲೂರು ಗ್ರಾಪಂ ಅಧ್ಯಕ್ಷೆ ನೈನಾ ಚವ್ಹಾಣ, ಮಾಜಿ ಅಧ್ಯಕ್ಷ ಹಣಮಂತಗೌಡ ಬಿರಾದಾರ, ಗ್ರಾಪಂ ಮಾಜಿ ಅಧ್ಯಕ್ಷೆ ಚೆನ್ನಮ್ಮ ಗೌಡರ, ಗ್ರಾಪಂ ಸದಸ್ಯರಾದ ಭೀಮಪ್ಪ ಮಾದರ, ಶಿವಾನಂದ ಲಮಾಣಿ, ವಾಯ್. ಎಚ್. ವಿಜಯಕರ್, ಬಿ. ಎಚ್. ಶಿರೋಳ, ಕಿರಣ ಮದರಿ, ವಾಯ್. ಕೆ. ಹಳೇಮನಿ, ಎಂ. ಎಚ್. ಚನ್ನಿ ಮೊದಲಾದವರು ಇದ್ದರು. ಸಾಮೂಹಿಕ ವಿವಾಹದಲ್ಲಿ ಐದು ಜೋಡಿಗಳು ನವಜೀವನಕ್ಕೆ ಕಾಲಿರಿಸಿದರು.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ